Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

20 ರಿಂದ 25ರೂ.ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು

Team Udayavani, Sep 24, 2024, 4:03 PM IST

Sweet Pumpkin: ಮಳೆ ನೀರಿನಿಂದಲೇ ಸಿಹಿ ಕುಂಬಳಕಾಯಿ ಬೆಳೆದ ರೈತ

ಉದಯವಾಣಿ ಸಮಾಚಾರ
ಮಾಗಡಿ: ತಾಲೂಕಿನ ಹಂಚಿಕುಪ್ಪೆ ಗ್ರಾಪಂ ವ್ಯಾಪ್ತಿಯ ಗುಡ್ಡಹಳ್ಳಿಯ ಪ್ರಗತಿಪರ ಕುಂಬಳಕಾಯಿ ಗಂಗಣ್ಣ ತಮ್ಮ ಐದು ಎಕರೆ ಭೂಪ್ರದೇಶದಲ್ಲಿ ಭರ್ಜರಿಯಾಗಿ ಸಿಹಿ ಕುಂಬಳಕಾಯಿ ಬೆಳೆದಿದ್ದಾರೆ. ತಲಾ ಕುಂಬಳಕಾಯಿ 20 ರಿಂದ 25 ಕೆ.ಜಿ ತೂಗುವಷ್ಟರ ಮಟ್ಟಿಗೆ ಗುಣಮಟ್ಟದ ಬೆಳೆ ಬಂದಿದೆ.

ಉತ್ತಮ ಮಳೆಯಾಗಿದೆ. ಮಳೆಯಾಶ್ರಿತ ಪ್ರದೇಶವಾಗಿದ್ದು, ಮಳೆ ನೀರಿನಿಂದಲೇ ಭರ್ಜರಿ ಕುಂಬಳ ಕಾಯಿ ಬೆಳೆದಿದ್ದಾರೆ. ಕಾಡಂಚಿನಲ್ಲಿ ರುವುದರಿಂದ ಕಾಡು ಪ್ರಾಣಿಗಳಿಂದ ಬೆಳೆಯನ್ನು ರಕ್ಷಿಸಲು ಹಗಲು ರಾತ್ರಿ ಜಮೀನಲ್ಲಿಯೇ ಕಾದು ಬೆಳೆಯನ್ನು ರಕ್ಷಿಸಿ ಕೊಂಡಿದ್ದರು. ಕೆಲವೊಂದು ವೇಳೆ ಕಾಡಾನೆ ಕುಂಬಳ ಕಾಯಿಯನ್ನು ತಿಂದು, ತುಳಿದು ನಷ್ಟಸಹ ಮಾಡಿತ್ತು. ಎದೆಗುಂದಲಿಲ್ಲ.

ಪ್ರೇರಣೆ: ಕುಂಬಳಕಾಯಿ ಗಂಗಣ್ಣ ಅವರ ಸಾಧನೆಯನ್ನು ಮಾಜಿ ಸಚಿವ ಎಚ್‌.ಎಂ.ರೇವಣ್ಣ ಅವರು ಸಹ ಮೆಚ್ಚಿ ಕೊಂಡಾಡಿದ್ದರು. ಇದೇ ಗಂಗಣ್ಣ ಅವರು ಎಚ್‌.ಎಂ.ರೇವಣ್ಣ ಅವರನ್ನು ಸಹ ಕುಂಬಳಕಾಯಿ ಬೆಳೆಯುವಂತೆ ಪ್ರೇರೇ ಪಿಸಿದ್ದರು.
ಎಚ್‌.ಎಂ.ರೇವಣ್ಣ ಸಹ ಕುಂಬಳಕಾಯಿ ಬೆಳೆದು ಉತ್ತಮ ಇಳುವರಿ ಪಡೆದು ಗಂಗಣ್ಣ ಅವರ ಮಾರ್ಗ ದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮಳೆ ನೀರಿನಿಂದಲೇ ಕನಿಷ್ಠ ಕೆ.ಜಿ.ಕುಂಬಳಕಾಯಿಗೆ 20 ರಿಂದ 25ರೂ.ಸಿಗಬಹುದು ಎಂಬ ನಿರೀಕ್ಷೆಯಲ್ಲಿದ್ದರು. ಆದರೆ ಆಗಿದ್ದೆ ಬೇರೆ. ಬೆಲೆ ಸಿಗದೆ ತಲಾ ಕೆ.ಜಿಗೆ 8 ರಿಂದ 10ರೂ.ಗೆ ಖರೀದಿ ಕೇಳುತ್ತಿದ್ದಾರೆ. ಸುಮಾರು 40 ರಿಂದ 50 ಟನ್‌ ಕುಂಬಳಕಾಯಿ ಬೆಳೆದಿದ್ದು, ಸಾಲದ ಬಾಧೆಯಿಂದ ವಿಧಿಯಿಲ್ಲದೆ ಈಗಾಗಲೇ 2 ಟನ್‌ ಕುಂಬಳಕಾಯಿಯನ್ನು ಕೇವಲ 8ರೂ.ಗೆ ಮಾರಾಟ ಮಾಡಿದ್ದಾಗಿ ಇಂಥ ಪರಿಸ್ಥಿತಿ ಯಾರಿಗೂ ಬರಬಾರದು ಎಂದು ನೋವಿನಿಂದ ಗಂಗಣ್ಣ ನುಡಿಯುತ್ತಾರೆ ಗಂಗಣ್ಣ. ಸದ್ಯಕ್ಕೆ ಮಳೆಯಾಗುತ್ತಿರುವುದರಿಂದ ಸ್ಟೋರೇಜ್‌ ರೂಂ ಇಲ್ಲದ ಕಾರಣೆ ಹೆಚ್ಚು ದಿನಗಳ ಕಾಲ ಇಟ್ಟುಕೊಳ್ಳಲು ಸಾಧ್ಯವಿಲ್ಲ,

ಕೃಷಿ ಕ್ರಮಗಳನ್ನು ಚಾಚೂ ತಪ್ಪದೇ ಪಾಲನೆ: ಸಿಹಿ ಕುಂಬಳಕಾಯಿ ಬೆಳೆದ ಗಂಗಣ್ಣನಿಗೆ ಅದೃಷ್ಟ ಕುಲಾಯಿಸಲಿಲ್ಲ. ಕೃಷಿಯಲ್ಲಿ ಸದಾ ಏನಾದರೊಂದು ಮಾಡ ಬೇಕೆಂಬ ತುಡಿತದಲ್ಲಿದ್ದ ಗಂಗಣ್ಣ ಅವರು ಕುಂಬಳಕಾಯಿ ಬೀಜವನ್ನು ಬಿತ್ತಿ ಕೃಷಿ ಆರಂಭಿ
ಸಿದ್ದರು. ಇದು ಅಲ್ಪಾವಧಿ ಬೆಳೆ ಯಾದ್ದರಿಂದ ನೋಡಿಯೇ ಬಿಡೋಣ ಎಂದು ಕೃಷಿ ಕ್ರಮಗಳನ್ನು ಚಾಚೂ ತಪ್ಪದೇ ಮಾಡಿದರು. ಈ ಕೃಷಿ ಇವರಿಗೇನು ಹೊಸದಲ್ಲ. ಹಲವು ವರ್ಷಗಳಿಂದಲೂ ಸಿಹಿ ಮತ್ತು ಬೂದ ಕುಂಬಳಕಾಯಿ ಬೆಳೆಯುವ ಪರಿಣಿತರು.

ರೈತರಿಗೆ ಮಾದರಿಯಾದ ಗಂಗಣ್ಣ: ಆಯಾಯ ಸಂದರ್ಭಕ್ಕೆ ತಕ್ಕಂತೆ ಯಾವ ಬೆಳೆ ಬೆಳೆದರೆ ಅನು ಕೂಲವಾಗಬಹುದು ಎಂಬುದನ್ನು ಅರಿತು ಅದನ್ನು ಬೆಳೆದು ಆರ್ಥಿಕ ಮಟ್ಟ ಸುಧಾರಿಸಿ ಕೊಳ್ಳಲು ಮುಂದಾಗಬೇಕು ಎಂಬುದನ್ನು ಗುಡ್ಡಹಳ್ಳಿ ಗ್ರಾಮದ ಪ್ರಗತಿ ಪರ ರೈತ ಗಂಗಣ್ಣ ತೋರಿಸಿಕೊಟ್ಟಿದ್ದಾರೆ.

ರೈತ ಸಂಘದ ದಿನಾಚರಣೆಯಲ್ಲಿ ಕುಂಬಳಕಾಯಿ ಗಂಗಣ್ಣ ಅವರನ್ನು ಸನ್ಮಾನಿಸಿ ಗೌರವಿಸಿದ್ದೇನೆ. ಕುಂಬಳ ಕಾಯಿ ಗಂಗಣ್ಣ ಅವರಿಗೆ ತೋಟಗಾರಿಕೆ ಇಲಾಖೆ ಪ್ರೋತ್ಸಾಹಿಸ ಬೇಕು. ಕುಂಬಳ ಕಾಯಿ ಗಂಗಣ್ಣ ಕಷ್ಟಪಟ್ಟು ಕುಂಬಳ ಕಾಯಿ ಬೆಳೆದಿದ್ದಾರೆ. ಬೆಲೆ ಸಿಗದೆ ಕಂಗಾಲಾಗಿರುವ ರೈತ ಗಂಗಣ್ಣ ಅವರಿಗೆ ಸರ್ಕಾರದ ನೆರವು ಅಗತ್ಯವಿದೆ.
●ಹೊಸಪಾಳ್ಯದ ಲೋಕೇಶ್‌,
ತಾ.ರೈತ ಸಂಘದ ಅಧ್ಯಕ್ಷ

*ತಿರುಮಲೆ ಶ್ರೀನಿವಾಸ್‌

ಟಾಪ್ ನ್ಯೂಸ್

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

12-mng

ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ

18-nail-polish

Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

11-bellary

Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ

CM-preess

MUDA Scam: ಹೈಕೋರ್ಟ್‌ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್‌ ಗೆ ಹೊಡೆದ ಯುವಕ!

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

10

Channapatnam by-election: ಡಿಕೆಸು ಕೈ ಅಭ್ಯರ್ಥಿ ಮಾಡಲು ಕಾರ್ಯಕರ್ತರ ಒತ್ತಡ

ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

Munirathna: ಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್ ಆರೋಪ‌ ಮಾಡಿದ ಮಹಿಳೆ; ಎಫ್‌ಐಆರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mudbidri ಅರಮನೆ ಆನೆಬಾಗಿಲಿಗೆ ಟ್ರಕ್‌ ಡಿಕ್ಕಿ ಹೊಡೆದು ಹಾನಿ

Mudbidri ಅರಮನೆ ಆನೆಬಾಗಿಲಿಗೆ ಟ್ರಕ್‌ ಡಿಕ್ಕಿ ಹೊಡೆದು ಹಾನಿ

14-mudhol-2

Mudhol: ಲೈಂಗಿಕ ದೌರ್ಜನ್ಯ, ಯತ್ನಾಳ್ ವಿರುದ್ದ ಅವಹೇಳನಕ್ಕೆ‌ ಖಂಡನೆ; ಮನವಿ ಸಲ್ಲಿಕೆ

SSM

High Court Order: ನಾವು ಸಿದ್ದರಾಮಯ್ಯ ಪರ ಗಟ್ಟಿಯಾಗಿ ನಿಲ್ಲುತ್ತೇವೆ: ಸಚಿವ ಎಸ್ಸೆಸ್ಸೆಂ

13-hunsur

Hunsur: ಮಾಜಿ ಶಾಸಕ ಮಂಜುನಾಥ್‌ಗೆ ಎಚ್1ಎನ್1 ದೃಢ; ಖಾಸಗಿ ಆಸ್ಪತ್ರೆಗೆ ದಾಖಲು

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.