Kodiyalabailu: ಖೈಬರ್ಪಾಸ್ ರಸ್ತೆ ಮತ್ತೆ ಹೊಂಡಮಯ!
Team Udayavani, Sep 24, 2024, 5:11 PM IST
ಕೊಡಿಯಾಲಬೈಲು: ಪಿವಿಎಸ್ ಜಂಕ್ಷನ್-ಕೆ.ಎಸ್.ರಾವ್ ರಸ್ತೆಗಳ ನಡುವೆ ಸಂಪರ್ಕ ಕಲ್ಪಿಸುವ ಒಳರಸ್ತೆ ʼಖೈಬರ್ಪಾಸ್’ನಲ್ಲಿ ಮತ್ತೆ ಗುಂಡಿಗಳು ಉಂಟಾಗಿವೆ. ನಡೆಯುವುದಕ್ಕೂ ಅಯೋಗ್ಯವಾಗಿದ್ದ ಈ ರಸ್ತೆಗೆ ಸುಮಾರು ಒಂದು ತಿಂಗಳ ಹಿಂದೆ ಜಲ್ಲಿಕಲ್ಲುಗಳನ್ನು ಹಾಕಿ ಸಮತಟ್ಟುಗೊಳಿಸಲಾಗಿತ್ತು.
ಅನಂತರ ವಾಹನಗಳ ಓಡಾಟವೂ ಹೆಚ್ಚಾಗತೊಡಗಿತು. ಪರಿಣಾಮವಾಗಿ ಇದೀಗ ಹಲವೆಡೆ ಜಲ್ಲಿಕಲ್ಲುಗಳು ಕಿತ್ತು ಹೋಗಿ ಹೊಂಡಗಳುಂಟಾಗಿವೆ. ಮಳೆನೀರು ಆ ಹೊಂಡಗಳಲ್ಲಿ ನಿಂತಿದೆ. ವಾಹನಗಳ ಸಂಚಾರಕ್ಕೆ, ಪಾದಚಾರಿಗಳಿಗೆ ಸಮಸ್ಯೆಯಾಗುತ್ತಿದೆ. ಒಳರಸ್ತೆಯಾಗಿರುವುದರಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸಹಿತ ಪಾದಚಾರಿಗಳು ಇದನ್ನು ಬಳಕೆ ಮಾಡುತ್ತಾರೆ. ಹಗಲು ರಾತ್ರಿಯೆನ್ನದೆ ಇದರಲ್ಲಿ ಸಂಚರಿಸುತ್ತಾರೆ. ಆದರೆ ಸದ್ಯ ವಾಹನಗಳ ಓಡಾಟವೂ ಹೆಚ್ಚಾಗಿದೆ. ಹಾಗಾಗಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಬೇಕಾದ ಅವಶ್ಯಕತೆ ಇದೆ. ಸಮರ್ಪಕವಾದ ಬೆಳಕಿನ ವ್ಯವಸ್ಥೆ ಕೂಡ ಆಗಬೇಕಿದೆ. ಈ ಹಿಂದೆ ದ್ವಿಚಕ್ರ ವಾಹನ ಮತ್ತು ಪಾದಚಾರಿಗಳ ಸಂಚಾರಕ್ಕೆ ಮಾತ್ರವೇ ಅವಕಾಶ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.