Mangaluru: ಜಾಗ ಗುರುತಿಸಿದ್ದರೂ ತ್ಯಾಜ್ಯ ವಿಲೇವಾರಿಗೆ ಪರದಾಟ
ಸೂರಿಂಜೆ ಗ್ರಾ.ಪಂ.ಗೆ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಕೇಸು ಅಡ್ಡಿ!
Team Udayavani, Sep 24, 2024, 5:42 PM IST
ಸೂರಿಂಜೆ: ಸೂರಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿಗೆ ಸಮರ್ಪಕ ವ್ಯವಸ್ಥೆಯಿಲ್ಲದೆ ಪ್ಲಾಸ್ಟಿಕ್, ಮಾಂಸ ತುಂಬಿದ ಚೀಲಗಳು, ಬೇಡದ ವಸ್ತುಗಳು ವಿಲೇವಾರಿ ಮಾಡುವುದೇ ಸಮಸ್ಯೆಯಾಗಿ ಪರಿಣಮಿಸಿದೆ.
ಸ್ವತ್ಛತೆ ಹಾಗೂ ನೈರ್ಮಲ್ಯಕ್ಕೆ ಪ್ರತೀ ಪಂ.ಗೂ 20 ಲಕ್ಷ ರೂ. ಅನುದಾನ ಕಾದಿರಿಸಲಾಗಿದೆ. ಸರಕಾರದ ಮಟ್ಟ ದಲ್ಲಿ ಪೆರ್ಮುದೆ ಪಂ.ಗೆ ಸಮೀಪದಲ್ಲೇ ಸೂರಿಂಜೆ ಗ್ರಾಮದ ಖಾಲಿ ಸ್ಥಳಾವಕಾಶವಿದ್ದು, ಪಂಚಾಯತ್ ಹೆಸರಿನಲ್ಲಿ 44 ಜಾಗ ಸೆಂಟ್ಸ್ ಗುರುತಿಸಿ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಮುಂದಾಗುತ್ತಿದ್ದಂತೆ ಸ್ಥಳೀಯ ವ್ಯಕ್ತಿಯೋರ್ವರು ನ್ಯಾಯಾಲಯದಲ್ಲಿ ಮೊಕ್ಕದ್ದಮೆ ಹೂಡಿದ್ದರಿಂದ ಘಟಕ ನಿರ್ಮಾಣ ವಿಳಂಬವಾಗಿದೆ. ಪಂ. ವತಿ ಯಿಂದಲೂ ಕೇಸು ತೆರವಿಗೆ ಸತತ ಪ್ರಯತ್ನ ನಡೆದಿದ್ದು, ಬೆಳೆಯುತ್ತಿರುವ ಗ್ರಾಮಕ್ಕೆ ತ್ಯಾಜ್ಯ ವಿಲೇವಾರಿ ಘಟಕದ ಅಗತ್ಯ ಹೆಚ್ಚೇ ಇದೆ ಎನ್ನುತ್ತಾರೆ ಪಂಚಾಯತ್ ಸದಸ್ಯ ಅಬ್ದುಲ್ ರಝಾಕ್.
ಸ್ಥಳಾವಕಾಶದ ಕೊರತೆ
ಇಲ್ಲಿ ಮನೆ ಮನೆ ತ್ಯಾಜ್ಯ ಸಂಗ್ರಹಕ್ಕೆ ಗುತ್ತಿಗೆ ನೀಡಲಾಗಿದೆ. ಆದರೆ ವಿಲೇವಾರಿಗೆ ಸ್ಥಳಾವಕಾಶದ ಕೊರತೆಯಿದೆ.
ತೊಟ್ಟಿಯಿದ್ದರೂ ಕೆಲವು ಬಾರಿ ರಸ್ತೆ ಬದಿ ತ್ಯಾಜ್ಯ
ಕಸ ಹಾಕಲು ತೊಟ್ಟಿಯಿದ್ದರೂ ಕೆಲವು ಬಾರಿ ರಸ್ತೆ ಬದಿ ತ್ಯಾಜ್ಯ ಕಂಡು ಬರುತ್ತದೆ. ಸೂರಿಂಜೆ, ಶಿಬರೂರು, ಕಿನ್ನಿಗೋಳಿ ಸಂಪರ್ಕ ರಸ್ತೆಯ ನಂದಿನಿ ಸೇತುವೆ ಬಳಿ ಬಹುತೇಕ ತ್ಯಾಜ್ಯ ಉಚಿತವಾಗಿ ಬೆಳ್ಳಂಬೆಳಗ್ಗೆ ವಿಲೇವಾರಿಯಾಗುತ್ತದೆ. ಹೆಚ್ಚಿನ ವಸತಿ ಬಡಾವಣೆ, ಅಂಗಡಿ, ಮಾಂಸದ ಅಂಗಡಿಗಳು ಇರುವುದರಿಂದ ನಿತ್ಯ ಕೆ.ಜಿ. ಗಟ್ಟಲೆ ತ್ಯಾಜ್ಯ ಸಂಗ್ರಹವಾಗುತ್ತದೆ. ಪಂಚಾಯತ್ನಲ್ಲಿ ಈ ಭಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಮಾಡಿದಲ್ಲಿ ಪಂಚಾಯತ್ ಭಾಗದಲ್ಲಿ ಸ್ವತ್ಛತೆಯನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.