Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Team Udayavani, Sep 24, 2024, 6:13 PM IST
ಮಂಗಳೂರು: ಮಂಗಳೂರಿನಲ್ಲಿ 2019ರಲ್ಲಿ ನಡೆದಿದ್ದ ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣದ ಇಬ್ಬರು ಆರೋಪಿಗಳಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಎಚ್. ಎಸ್. ಅವರು ಜೀವಾವಧಿ ಶಿಕ್ಷೆ ವಿಧಿಸಿ ಮಂಗಳವಾರ (ಸೆ .24) ತೀರ್ಪು ನೀಡಿದ್ದಾರೆ.
ಜೋನಸ್ ಸ್ಯಾಮ್ಸನ್ ಮತ್ತು ಆಕೆಯ ಪತ್ನಿ ವಿಕ್ಟೋರಿಯಾ ಮಥಾಯಸ್ ಜೀವಾವಧಿ ಶಿಕ್ಷೆಗೊಳಗಾದವರು. ಇವರಿಗೆ ಸಹಕರಿಸಿದ ಇನ್ನೋರ್ವ ಆರೋಪಿ ರಾಜು ಎಂಬಾತನಿಗೆ ಆರೂವರೆ ತಿಂಗಳ ಸಾದಾ ಸಜೆ ವಿಧಿಸಲಾಗಿದೆ.
ಕುರಿ ಚಿಟ್ ಫಂಡ್ ನಡೆಸುತ್ತಿದ್ದ ನಗರದ ಅತ್ತಾವರದ ಶ್ರೀಮತಿ ಶೆಟ್ಟಿಯವರಿಗೆ ಸೂಟರ್ ಪೇಟೆಯ ಜೋನಸ್ ನೀಡಬೇಕಾಗಿದ್ದ ಹಣವನ್ನು ಕೇಳಲು ಆತನ ಮನೆಗೆ ಹೋಗಿದ್ದಾಗ ಜೋನಸ್ ಮತ್ತು ವಿಕ್ಟೋರಿಯಾ ಆಕೆಯನ್ನು ಕೊಲೆ ಮಾಡಿದ್ದರು. ಆಕೆಯ ಮೈಮೇಲಿದ್ದ ಚಿನ್ನಾಭರಣವನ್ನು ಸುಲಿಗೆ ಮಾಡಿದ್ದರು. ಬಳಿಕ ದೇಹವನ್ನು 29 ತುಂಡುಗಳನ್ನಾಗಿ ಮಾಡಿದ್ದರು. ಅದನ್ನು ರಾತ್ರಿ ಜೋನಸ್ ನಗರದ ಹಲವೆಡೆ ಎಸೆದು ಹೋಗಿದ್ದ.
ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕಿ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Badlapur Encounter: ಆರೋಪ-ಪ್ರತ್ಯಾರೋಪ; ಕೈಕೋಳ ಇದ್ದಾಗ ದಾಳಿ ಹೇಗೆ ಸಾಧ್ಯ?: ವಿಪಕ್ಷಗಳು
Monsoon: ದೇಶದಲ್ಲಿ ಮುಂಗಾರು ವಾಪಸಾತಿ ಆರಂಭ: ಈ ಬಾರಿ ಶೇ.5 ಹೆಚ್ಚುವರಿ ಮಳೆ
Rafale: ರಫೇಲ್ ಗಾಗಿ ನೋಯ್ಡಾದಲ್ಲಿ ಡಸಾಲ್ಟ್ ನಿರ್ವಹಣಾ ಕೇಂದ್ರ?
MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್
Bantwal: ಮನೆಯ ಮೆಟ್ಟಿಲಿನಿಂದ ಬಿದ್ದು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.