MUDA Scam: ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್
ಕಾಂಗ್ರೆಸ್ ಸರ್ಕಾರ ರಾಜ್ಯದ ಖಜಾನೆ ಲೂಟಿ ಹೊಡೆದು ಅಧೋಗತಿಗೆ ತಂದಿದೆ: ಶಾಸಕ ಸಿದ್ದು ಸವದಿ
Team Udayavani, Sep 24, 2024, 9:16 PM IST
ರಬಕವಿ-ಬನಹಟ್ಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳಷ್ಟು ನುರಿತ, ಅನುಭವಿ ರಾಜಕಾರಣಿಯಾಗಿದ್ದು, ಹಿಂದಿನ ಪರಂಪರೆ ಅವಲೋಕಿಸಿದಾಗ ಇಂತಹ ತೀರ್ಮಾನ ಬಂದ ಸಂದರ್ಭದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗೆ ಅವಕಾಶ ನೀಡಬೇಕು ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ್ ಹೇಳಿದರು.
ಮಂಗಳವಾರ ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಸಾಮಾಜಿಕ ನ್ಯಾಯದ ವಿರುದ್ಧವಿದೆ ಎಂದು ಹೇಳಿದ್ದು ಸರಿಯಲ್ಲ. ಅವರ ಆಡಳಿತದಲ್ಲಿ ಹಲವು ಪ್ರಕರಣಗಳ ನೋಡಿದಾಗ ಕಾಂಗ್ರೆಸ್ ಪಕ್ಷವೇ ಸಾಮಾಜಿಕ ನ್ಯಾಯದ ವಿರುದ್ಧವಿದೆ ಎಂಬುದು ಗೊತ್ತಾಗುತ್ತದೆ ಎಂದು ಗದ್ದಿಗೌಡರ್ ತಿಳಿಸಿದರು.
ಶಾಸಕ ಸಿದ್ದು ಸವದಿ ಮಾತನಾಡಿ, ಇದು ಸತ್ಯಕ್ಕೆ ಜಯವಾಗಿದೆ. ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಮಾಡಿದ್ದು, ರಾಜ್ಯವನ್ನು ಅಧೋಗತಿಗೆ ತಂದು ಬಿಟ್ಟಿದೆ. ಬಿಜೆಪಿ ಮಿತ್ರ ಪಕ್ಷಗಳು ಮುಖಮಂತ್ರಿ ಸಿದ್ಧರಾಮಯ್ಯ ರಾಜೀನಾಮೆಗೆ ಹೋರಾಟ ಮಾಡುತ್ತವೆ. ಕೇವಲ ಮುಡಾ ಹಗರಣ ಮಾತ್ರವಲ್ಲ, ಎಸ್.ಟಿ ನಿಗಮದ ಹಣ ಲೂಟಿ ಹೊಡೆದಿದ್ದಾರೆ.
ಖರ್ಗೆಯವರು ಕೂಡ ಬೆಂಗಳೂರಿನ ಪ್ರಮುಖ ಪ್ರದೇಶದಲ್ಲಿ ತಮ್ಮ ಕುಟುಂಬಕ್ಕೆ ಐದು ಎಕರೆ ಭೂಪ್ರದೇಶ ಪಡೆದಿದ್ದು ಇದು ಕೂಡ ತನಿಖೆಯಾಗಲಿ. ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳ ಸರಿಯಾದ ಹಂಚಿಕೆ ಆಗುತ್ತಿಲ್ಲ ಈ ಮೂಲಕ ಸರ್ಕಾರ ನಾಟಕ ಆಡುತ್ತಿದೆ. ಸಿಎಂ ಸಿದ್ಧರಾಮಯ್ಯರಿಗೆ ರಾಜ್ಯದ ಜನರ ಬಗ್ಗೆ ಪ್ರೀತಿ ವಿಶ್ವಾಸವಿದ್ದರೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಶಾಸಕ ಸಿದ್ದು ಸವದಿ ಆಗ್ರಹಿಸಿದರು.
ಡಾ.ಎಂ.ಎಸ್.ದಡ್ಡೆನ್ನವರ, ಗೋವಿಂದ ಡಾಗಾ, ಶ್ರೀಶೈಲ ಯಾದವಾಡ, ಲಕ್ಕಪ್ಪ ಪಾಟೀಲ, ಶ್ರೀಶೈಲ ಬೀಳಗಿ, ಚಿದಾನಂದ ಹೊರಟ್ಟಿ, ಭೀಮಶಿ ಪಾಟೀಲ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ಸಂಭ್ರಮ ಸಡಗರದ ಶ್ರೀ ಕಾಡಸಿದ್ಧೇಶ್ವರರ ರಥೋತ್ಸವ
Mudhol: ಲೈಂಗಿಕ ದೌರ್ಜನ್ಯ, ಯತ್ನಾಳ್ ವಿರುದ್ದ ಅವಹೇಳನಕ್ಕೆ ಖಂಡನೆ; ಮನವಿ ಸಲ್ಲಿಕೆ
Mahalingpur: ಧಾರಕಾರ ಮಳೆ; ಪ್ರಸಕ್ತ ವರ್ಷದ ಮಳೆಗಳಲ್ಲಿಯೇ ಅತ್ಯುತ್ತಮ ಮಳೆ
Mudhol: ಅನೈತಿಕ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ
Rabkavi Banhatti: ಕಾಡಸಿದ್ಧೇಶ್ವರ ರಥಕ್ಕೆ 155 ವರ್ಷದ ಇತಿಹಾಸ …!
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.