Congress: ಪಕ್ಷದ ಬೆಂಬಲ ಸಿಎಂಗೆ: ಮಂಜುನಾಥ ಭಂಡಾರಿ
Team Udayavani, Sep 25, 2024, 12:17 AM IST
ಉಡುಪಿ: ಕಾಂಗ್ರೆಸ್ ಪಕ್ಷ ಮತ್ತು ರಾಜ್ಯದ ಜನತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗಿದ್ದಾರೆ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಹೇಳಿದರು.
ಉಡುಪಿಯಲ್ಲಿ ಪತ್ರಕರ್ತರ ಜತೆ ಅವರು ಮಾತನಾಡಿ, ಪ್ರಜಾಪ್ರಭುತ್ವವನ್ನು ಯಾರೋ ಒಬ್ಬರಿಂದ ಕಗ್ಗೊಲೆ ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಕಾನೂನು ಹೋರಾಟ ಮುಂದುವರಿಸಲಿದೆ. ಅಧಿಕಾರ ಶಾಶ್ವತವಲ್ಲ. ಕೇಂದ್ರದಲ್ಲಿ ಬಿಜೆಪಿ ಯಾವ ಸ್ಥಿತಿಗೆ ಬಂದಿದೆಯೆಂದು ಎಲ್ಲರಿಗೂ ತಿಳಿದಿದೆ.
ಬಿಜೆಪಿಗೆ ನೇರವಾಗಿ ಜನರಿಂದ ಆಯ್ಕೆಯಾಗುವ ಶಕ್ತಿ ಇಲ್ಲ. ಹೀಗಾಗಿ ಸಿಬಿಐ, ಇಡಿ, ಎಲೆಕ್ಷನ್ ಕಮಿಷನ್ ಮೂಲಕ ಹಿಂಬಾಗಿಲಿನಿಂದ ಬರುತ್ತಿದೆ ಎಂದು ದೂರಿದರು.
ರಾಷ್ಟ್ರಪತಿ, ರಾಜ್ಯಪಾಲ ಹುದ್ದೆಗೆ ಬಹಳ ಗೌರವ ಇತ್ತು. ಇಂದು ಈ ಪರಿಸ್ಥಿತಿ ಬಂದಿರುವುದು ದುರದೃಷ್ಟಕರ. ಈ ಬಗ್ಗೆ ಜನರು ಯೋಚನೆ ಮಾಡುತ್ತಾರೆ ಮತ್ತು ತೀರ್ಮಾನ ಅವರ ವಿವೇಚನೆಗೆ ಬಿಟ್ಟಿದ್ದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.