Western Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

ಕೊಡಗು, ವಯನಾಡು ದುರಂತ ಬಳಿಕ ಚರ್ಚೆ ಬಿರುಸು; ಕಾಡು-ನಾಡು ಬೇರ್ಪಡಿಸಲು ಆಗ್ರಹ

Team Udayavani, Sep 25, 2024, 7:30 AM IST

weWestern Ghat: ಹಳ್ಳಿ ಹಳ್ಳಿಗೂ ವಿಸ್ತರಿಸುತ್ತಿದೆ ಕಸ್ತೂರಿ ಹೋರಾಟ ಕಿಚ್ಚು

ಕಾರ್ಕಳ: ಪಶ್ಚಿಮ ಘಟ್ಟಕ್ಕೂ ಗ್ರಾಮೀ ಣ ಪ್ರದೇಶಕ್ಕೂ ಗಡಿ ಗುರುತು ಮಾಡಿ ನಾಡು, ಕಾಡು ಬೇರ್ಪಡಿಸಿ ಪಶ್ಚಿಮ ಘಟಕ್ಕೆ ಬರುವ ಕಾನೂನನ್ನು ಜನವಸತಿ ಪ್ರದೇಶಕ್ಕೆ ಅನ್ವಯ ಆಗದಂತೆ ಸರಕಾರ ನೋಡಿಕೊಳ್ಳಬೇಕು ಎಂಬುದು ಕಸ್ತೂರಿ ರಂಗನ್‌ ವರದಿ ಜಾರಿ ಯಾಗುವ ಪ್ರದೇಶಗಳ ಜನರ ಆಗ್ರಹ.

ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರ ಮತ್ತು ಜೀವವೈವಿಧ್ಯ ರಕ್ಷಣೆಗಾಗಿ ವಿಜ್ಞಾನಿ ಡಾ| ಕೆ ಕಸ್ತೂರಿ ರಂಗನ್‌ ನೀಡಿರುವ ವರದಿ ಅನುಷ್ಠಾನಕ್ಕೆ ಕೇಂದ್ರ ಪರಿಸರ ಸಚಿವಾಲಯ ಕರಡು ಅಧಿ ಸೂಚನೆ ಹೊರಡಿಸುವುದು, ಬಳಿಕ ನನೆಗುದಿಗೆ ಬೀಳುವುದು ಇದ್ದದ್ದೇ. ಆದರೀಗ 5ನೇ ಕರಡು ಅಧಿಸೂಚನೆ ಹೊರಬಿದ್ದ ಬೆನ್ನಲ್ಲೇ ಸರಕಾರ ಒತ್ತು ನೀಡಬೇಕೆನ್ನುವ ಬೇಡಿಕೆ ಮುನ್ನಲೆಗೆ ಬಂದಿದೆ. ಕೊಡಗು, ವಯನಾಡು ದುರಂತದ ಬಳಿಕ ವರದಿ ಜಾರಿ ಆಗಬೇಕೋ ಬೇಡವೋ ಎನ್ನುವ ಚರ್ಚೆ ಬಿರುಸು ಪಡೆದಿದೆ. ವರದಿ ಜಾರಿ ವಿರುದ್ಧದ ಹೋರಾಟದ ಕಿಚ್ಚು ಮಲೆನಾಡು ಭಾಗದಲ್ಲಿ ಹಳ್ಳಿಗಳಿಗೆ ವಿಸ್ತರಿಸುತ್ತಿದೆ.

ಕೇಂದ್ರಕ್ಕೆ ಸರ್ವ ಪಕ್ಷ ನಿಯೋಗ
ಕೇಂದ್ರ ಸರಕಾರ ಕಸ್ತೂರಿ ರಂಗನ್‌ ವರದಿಯ ಕರಡು ಅಧಿಸೂಚನೆ ಹೊರಬಿದ್ದಾಗಲೆಲ್ಲ ಪಶ್ಚಿಮ ಘಟ್ಟ ತಪ್ಪಲಿನ ಜನತೆ ಬೆಚ್ಚಿ ಬೀಳುತ್ತಾರೆ.ಈ ಬಾರಿ ಐದನೇ ಅಧಿಸೂಚನೆ ಹೊರಬಿದ್ದಾಗ ಜನ ಚಳವಳಿಗೆ ಇಳಿದಿದ್ದಾರೆ. ಬಾಧಿತ ಹಳ್ಳಿಗಳಲ್ಲಿ ಹೋರಾಟದ ಕಿಚ್ಚು ದಿನದಿಂದ ದಿನಕ್ಕೆ ವಿಸ್ತರಿಸುತ್ತಿದೆ. ಕೇಂದ್ರದ ಬಳಿಗೆ ಸರ್ವ ಪಕ್ಷ ನಿಯೋಗ ತೆರಳಲು ಸಲಹೆ ಕೇಳಿಬಂದಿದೆ.

ಸರಕಾರ ಆರಂಭದಿಂದ ಇದುವರೆಗೂ ಅಂತಿಮ ಕರಡು ಅಧಿಸೂಚನೆ ಹೊರಡಿಸುತ್ತಿಲ್ಲ. ಜನವಿರೋಧದ ಬದಲು 545 ದಿನಗಳ ಗಡುವು ನೀಡುವುದು. ಅವಧಿ ಸಮೀಪಿಸುತ್ತಿದ್ದಂತೆ ಹೊಸ ಕರಡು ಅಧಿಸೂಚನೆ ಹೊರಡಿಸುವುದು ಇದನ್ನೆ ಮಾಡುತ್ತಿದೆ. ಇದರಿಂದ ಕರಡು ಅಧಿಸೂಚನೆ ಹೊರಬಿದ್ದಾಗಲೆಲ್ಲ ತಪ್ಪಲಿನ ನಿವಾಸಿಗಳು ಬೆಚ್ಚಿ ಬೀಳುವುದು ತಪ್ಪುತಿಲ್ಲ.

ಸೆ. 2: ರಾಜ್ಯ ಸರಕಾರದ ಅಭಿಪ್ರಾಯ
ಕೇರಳ, ಕೊಡಗು ದುರಂತದ ಬಳಿಕ ಜನ ಆತಂಕ್ಕಿಡಾಗಿದ್ದಾರೆ. ಕೇಂದ್ರ ಕೂಡ ಈ ವಿಷ ಯವನ್ನು ಗಂಭಿರವಾಗಿ ತೆಗೆದುಕೊಂಡಿದೆ.
ರಾಜ್ಯ ಸರಕಾರಕ್ಕೂ ಇದರ ಬಿಸಿ ತಟ್ಟಿದ್ದು ರಾಜ್ಯ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಕಸ್ತೂರಿ ರಂಗನ್‌ ವರದಿ ಅನುಷ್ಠಾನ ಕುರಿತು ಚರ್ಚಿಸಲಾಗಿದೆ. ರಾಜ್ಯ ಸರಕಾರ ಮತ್ತು ಶಾಸಕರು ವಿರೋಧ ವ್ಯಕ್ತಪಡಿಸಿದ್ದಾರೆ. ಸಂಪುಟದ ನಿರ್ಣಯ ಆಧರಿಸಿ ಸೆ. 27ರಂದು ಕೇಂದ್ರಕ್ಕೆ ರಾಜ್ಯ ಸರಕಾರ ತನ್ನ ಅಭಿಪ್ರಾಯ ಮಂಡಿಸಲಿದೆ.

ಅಹವಾಲಿಗೆ ಸಮಿತಿ ರಚಿಸಲು ಆಗ್ರಹ
ಗಾಡ್ಗಿಳ್‌ ಸಮಿತಿ ವರದಿ ಕಠಿನವೆಂದು ಕಸ್ತೂರಿ ರಂಗನ್‌ ಸಮಿತಿಯನ್ನು ನೇಮಿಸಲಾಯಿತು. ಸಮಿತಿ 2013ರ ಎ. 15ರಂದು ವರದಿ ಸಲ್ಲಿಸಿತು. ಇತರ 10 ಸದಸ್ಯರ ಸಮಿತಿಯ ಜತೆ ಕೆ. ಕಸ್ತೂರಿರಂಗನ್‌ ಸಿದ್ಧಪಡಿಸಿದ ಪಶ್ಚಿಮ ಘಟ್ಟಗಳ ಈ ಕಸ್ತೂರಿ ರಂಗನ್‌ ವರದಿಯನ್ನು ಸರಕಾರ ಸ್ವೀಕರಿಸಿತು. 59.949 ಸಾವಿರ ಚ.ಕಿ.ವ್ಯಾಪ್ತಿಯ ಪ್ರದೇಶ (ಶೇ. 36.49) ಇಕೋಸೆನ್ಸಿಟಿವ್‌ ಏರಿಯಾ (ಇಎಸ್‌ಎ)ಕ್ಕೆ ಒಳಪಟ್ಟು ನಿರ್ಬಂಧಿತವಾಗಿರುತ್ತದೆ. ಹಲವು ನಿರ್ಬಂಧಗಳು ಹೇರಲ್ಪಟ್ಟು ಸಮಸ್ಯೆ ಗಳಾಗುತ್ತವೆ. ವರದಿಯನ್ನು ಸಂಪೂರ್ಣ ತಿರಸ್ಕರಿಸಬೇಕು. ಜನರ ಅಹವಾಲು ಆಲಿಸಲು ಸಮಿತಿ ರಚಿಸಿ, ಕಾಲಾವಕಾಶ ಪಡೆದ ಬಳಿಕ ಮುಂದುವರೆಯಬೇಕು ಎನ್ನುವ ಒತ್ತಾಯ ವ್ಯಕ್ತವಾಗಿದೆ.

ದ.ಕ.: ಬಾಧಿತ ಗ್ರಾಮಗಳು
ಸುಳ್ಯದ ಬಳ್ಪ, ಯೇನೆಕಲ್ಲು, ಸುಬ್ರಹ್ಮಣ್ಯ, ಸಂಪಾಜೆ, ತೊಡಿಕಾನ, ನಾಲ್ಕೂರು, ಕೂತುRಂಜ, ಐನಕಿದು, ದೇವಚಳ್ಳ, ಹರಿಹರ ಪಳ್ಳತ್ತಡ್ಕ, ಮಿತ್ತೂರು, ಬಾಳುಗೋಡು, ಮಡಪ್ಪಾಡಿ, ಉಬರಡ್ಕ, ಕಲ್ಮಕಾರು, ಅರಂತೋಡು, ಆಲೆಟ್ಟಿ, ಕಡಬ, ಕೌಕ್ರಾಡಿ, ಗೋಳಿತೊಟ್ಟು, ಶಿರಾಡಿ, ಅಲಂತಾಯ, ಸಿರಿಬಾಗಿಲು, ಕೊಂಬಾರು, ಇಚ್ಲಂಪ್ಪಾಡಿ, ಬಲ್ಯ, ಬಿಳಿನೆಲೆ, ದೋಳ್ಪಾಡಿ, ಬೆಳ್ತಂಗಡಿ ತಾ|ನ ನಾರಾವಿ, ಮಲವಂತಿಗೆ, ಕುತ್ಲೂರು, ಸುಲ್ಕೇರಿ ಮೊಗ್ರು, ಶಿರ್ಲಾಲು, ನಾವರ, ಸವಣಾಲು, ನಾಡ, ಚಾರ್ಮಾಡಿ, ನಾವೂರು, ನೆರಿಯ, ಕಳಂಜ, ಪುದುವೆಟ್ಟು, ಶಿಶಿಲ, ಶಿಬಾಜೆ, ರೆಖ್ಯಾ.

ಉಡುಪಿ ಜಿಲ್ಲೆ
ಕುಂದಾಪುರದ ಹೊಸೂರು, ಬೈಂದೂರು, ಕೊಲ್ಲೂರು, ಯಳಚಿತ್‌, ತಗ್ಗರ್ಸೆ, ಮುದೂರು, ಗೋಳಿಹೊಳೆ, ಜಡ್ಕಲ್‌, ಇಡೂರು- ಕುಂಜ್ಞಾಡಿ, ಕೆರಾಡಿ, ಹಳ್ಳಿಹೊಳೆ, ಆಲೂರು, ಚಿತ್ತೂರು, ಯೆಡಮೊಗೆ, ಬೆಳ್ಳಾಲ, ವಂಡ್ಸೆ, ಹೊಸಂಗಡಿ, ಮಚ್ಚಟ್ಟು, ಅಮಾಸೆಬೈಲು, ಶೇಡಿಮನೆ, ಮಡಾಮಕ್ಕಿ, ಬೆಳ್ವೆ. ಮೂಡಿನಗದ್ದೆ, ನೂಜಾಡಿ, ಸಂಸೆ, ಶೇಡಿಮನೆ, ತೆಂಕಹೊಲ,
ಕಾರ್ಕಳದ ಬೆಳಿಂಜೆ, ನಾಡಾ³ಲು, ಕುಚ್ಚಾರು, ಚಾರ, ಹೆಬ್ರಿ, ಕಬ್ಬಿನಾಲೆ, ಅಂಡಾರು, ಶಿರ್ಲಾಲು, ಕೆರ್ವಾಶೆ, ದುರ್ಗ, ಮಾಳ, ಈದು, ನೂರಾಳ್‌ಬೆಟ್ಟು,

ಕೊಲ್ಲಮೊಗ್ರು ಗ್ರಾಮ ಪಟ್ಟಿಯಿಂದ ಹೊರಕ್ಕೆ !
ಪಶ್ಚಿಮ ಘಟ್ಟ ತಪ್ಪಲು ವ್ಯಾಪ್ತಿಯ ಕೊಡಗು -ದ.ಕ. ಜಿಲ್ಲೆ ಗಡಿಭಾಗದಲ್ಲಿರುವ ಪುಷ್ಪಗಿರಿ ತಪ್ಪಲಿನ ಕೊಲ್ಲಮೊಗ್ರು ಗ್ರಾಮವು ಈ ಹಿಂದೆ ಸೂಕ್ಷ್ಮ ವಲಯ ಪಟ್ಟಿಯಲ್ಲಿ ಸೇರಿತ್ತು. ಆದರೀಗ ಪಟ್ಟಿಯಲ್ಲಿ ಗ್ರಾಮದ ಹೆಸರಿಲ್ಲದಿರುವುದು ಅಚ್ಚರಿ ಮೂಡಿಸಿದೆ. ಪಕ್ಕದ ಗ್ರಾಮಗಳು ಪಟ್ಟಿಯಲ್ಲಿ ಸೇರಿವೆ. ಗಾಡ್ಗಿಲ್‌, ಕಸ್ತೂರಿರಂಗನ್‌, ಆನೆಕಾರಿಡಾರ್‌, ಇನ್ನಿತರ ಯೋಜನೆ ಗಳ ವಿರುದ್ಧ ಮೊದಲಿಗೆ ಧ್ವನಿ ಎತ್ತಿ ಚಳವಳಿ ಆರಂಭ ಗೊಂಡಿದ್ದೆ ಇದೇ ಗ್ರಾಮ ಎನ್ನುವುದು ವಿಶೇಷ. ಕಾನೂ ನಿನ ಹೋರಾಟದಿಂದ ಗ್ರಾಮ ಕೈಬಿಡಲಾಗಿದೆ ಎಂಬುದು ನ್ಯಾಯವಾದಿ ಪ್ರದೀಪ್‌ ಕುಮಾರ್‌ ಎಲ್‌ ಅವರ ಹೇಳಿಕೆ.

ರಾಜ್ಯದ ಪರಿಸರ ಸೂಕ್ಷ್ಮ ವಲಯಗಳು
* 10 ಜಿಲ್ಲೆಗಳು * 30 ತಾಲೂಕು
* 1,573 ಗ್ರಾಮ
ಬೆಳಗಾವಿ ಜಿಲ್ಲೆ- 62 ಗ್ರಾಮ, ಕನಕಪುರ ತಾ. , ಉತ್ತರ ಕನ್ನಡ -630 ಗ್ರಾಮ, ಅಂಕೋಲಾ, ಭಟ್ಕಳ, ಹೊನ್ನಾವರ, ಜೋಯಿಡ, ಕಾರವಾರ, ಕುಮಟಾ, ಸಿದ್ಧಾಪುರ, ಶಿರಸಿ, ಯಲ್ಲಾಪುರ ತಾ|ಗಳು ,ಶಿವಮೊಗ್ಗ ಜಿಲ್ಲೆ -450 ಗ್ರಾಮ, ಹೊಸನಗರ, ಸಾಗರ, ಶಿಕಾರಿಪುರ, ತೀರ್ಥಹಳ್ಳಿ ತಾ|ಗಳು ,ಉಡುಪಿ ಜಿಲ್ಲೆ-39 ಗ್ರಾಮ, ಕಾರ್ಕಳ, ಕುಂದಾಪುರ ತಾ| ಗಳು. ,ದ.ಕ. ಜಿಲ್ಲೆ -46 ಗ್ರಾಮ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾ| ಗಳು ,ಕೊಡಗು- 55 ಗ್ರಾಮ, ಮಡಿಕೇರಿ, ಸೋಮವಾರ ಪೇಟೆ, ವಿಜಾಪುರ ತಾ|ಗಳು ,ಹಾಸನ-38 ಗ್ರಾಮ, ಆಲೂರು, ಸಕಲೇಶಪುರ ತಾ| ,ಮೈಸೂರು-62 ಗ್ರಾಮ ಹೆಗ್ಗಡೆವನ ಕೋಟೆ ತಾ| , ಚಾಮರಾಜ ನಗರ -22 ಗ್ರಾಮ ಗುಂಡ್ಲುಪೇಟೆ ತಾ| ,ಚಿಕ್ಕಮಗಳೂರು-156 ಗ್ರಾಮ, ಎನ್‌ ಆರ್‌ ಪುರ, ಮೂಡಿಗೆರೆ, ಶೃಂಗೇರಿ ತಾ|ಗಳು.

ಟಾಪ್ ನ್ಯೂಸ್

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

1-kammala

Arizona;ಕಮಲಾ ಹ್ಯಾರಿಸ್ ಚುನಾವಣ ಪ್ರಚಾರ ಕಚೇರಿಯ ಮೇಲೆ ಗುಂಡಿನ ದಾಳಿ

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupiಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಶಾಶ್ವತ ರಸ್ತೆ ಆಮೇಲೆ,ಸಂಚಾರ ಯೋಗ್ಯ ರಸ್ತೆಯೇ ಮೊದಲಾಗಲಿ

Udupiಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಶಾಶ್ವತ ರಸ್ತೆ ಆಮೇಲೆ,ಸಂಚಾರ ಯೋಗ್ಯ ರಸ್ತೆಯೇ ಮೊದಲಾಗಲಿ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi ಗೀತಾರ್ಥ ಚಿಂತನೆ-45: ನಮ್ಮ ದಾಖಲೆ ಶುದ್ಧವಾಗಿರುವುದು ಮುಖ್ಯ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕೃಷಿ ಪಂಪ್‌ಸೆಟ್‌ಗೆ ಶೇ.99 ಆಧಾರ್‌ ಜೋಡಣೆ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಕಸ್ತೂರಿ ರಂಗನ್‌ ವರದಿ ಬಡವರ ಮೇಲಿನ ದಾಳಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

Udupi: ಸಂತೆಕಟ್ಟೆ ಓವರ್‌ಪಾಸ್‌ ಕಾಮಗಾರಿ; ಸಂಸದ ಕೋಟ ಭೇಟಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Crime: ಪತ್ನಿಯ ಶೀಲ ಶಂಕಿಸಿ 5 ವರ್ಷದ ಪುತ್ರಿಯ ಕೊಂದ ತಂದೆ ಬಂಧನ

Crime: ಪತ್ನಿಯ ಶೀಲ ಶಂಕಿಸಿ 5 ವರ್ಷದ ಪುತ್ರಿಯ ಕೊಂದ ತಂದೆ ಬಂಧನ

6

Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್‌ ಅಮಾನತು

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.