MUDA Scam: ಈ ಪ್ರಕರಣದ ತನಿಖೆ ಬೇಡವೆಂದರೆ, ಇನ್ಯಾವ ಪ್ರಕರಣದ ತನಿಖೆಯಾಗಬೇಕು?: ಹೈಕೋರ್ಟ್‌

ಡಾ| ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಿದ್ದರೂ ಮೌನ ಎಂಬ ಅರ್ಜಿದಾರರ ವಾದ ಹಾಸ್ಯಾಸ್ಪದ: ಹೈಕೋರ್ಟ್‌

Team Udayavani, Sep 25, 2024, 7:45 AM IST

High-Court–CM

ಬೆಂಗಳೂರು: “ಮೈಸೂರಿನ ಮುಡಾದ ನಿವೇಶನ ಹಂಚಿಕೆ ಪ್ರಕರಣದ ಬಗ್ಗೆ ತನಿಖೆ ಬೇಡವೆಂದರೆ ಇನ್ನು ಯಾವ ಪ್ರಕರಣದ ಬಗ್ಗೆ ತನಿಖೆ ನಡೆಸಬಹುದು ಎಂಬುದು ನನಗೆ ಅರ್ಥವಾಗುವುದಿಲ್ಲ. ಈ ಪ್ರಕರಣದ ಫ‌ಲಾನುಭವಿಗಳು ಅಪರಿಚಿತರಲ್ಲ, ಮುಖ್ಯಮಂತ್ರಿಗಳ ಕುಟುಂಬವೇ ಲಾಭ ಪಡೆದಿದೆ’. ಇದು ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ತೀರ್ಪಿನಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿಗಳು ವ್ಯಕ್ತಪಡಿಸಿರುವ ಅಭಿಪ್ರಾಯ.

ಮುಡಾದ ನಿಯಮಗಳ ಪ್ರಕಾರ 3 ಎಕರೆಗಿಂತ ಹೆಚ್ಚು ಜಮೀನು ಕಳೆದುಕೊಂಡ ವ್ಯಕ್ತಿ 4,800 ಚದರಡಿ ವಿಸ್ತೀರ್ಣದ 40×60ರ 2 ನಿವೇಶನಗಳನ್ನು ಪಡೆಯಲು ಅರ್ಹರಾಗಿರುತ್ತಾರೆ. ಆದರೆ ಈ ಪ್ರಕರಣದಲ್ಲಿ ದೂರುದಾರರಿಗೆ (ಮುಖ್ಯಮಂತ್ರಿ ಸಿದ್ದರಾಮಯ್ಯ) 38,284 ಚದರಡಿ ನೀಡಲಾಗಿದೆ. 2 ನಿವೇಶನಗಳು 14 ಆಗಿವೆ.

ದೂರುದಾರರಿಗೆ 4,800 ಚದರಡಿ ವಿಸ್ತೀರ್ಣದ ಜಮೀನು ಪಡೆಯಲು ಅರ್ಹತೆ ಇದ್ದವರಿಗೆ ಎಷ್ಟೊಂದು ನೀಡಲಾಗಿದೆ ಎಂಬುದು ನ್ಯಾಯಾಲಯದ ಪ್ರಜ್ಞೆಗೆ ಆಘಾತಕಾರಿಯಾಗಿದೆ. ದೂರುದಾರರ ಪತ್ನಿ 56 ಕೋಟಿ ರೂ. ಮೌಲ್ಯದ 14 ನಿವೇಶನಗಳ ಹೆಮ್ಮೆಯ ಮಾಲಕಿ ಆಗಿದ್ದಾರೆ ಎಂದು ನ್ಯಾ. ನಾಗಪ್ರಸನ್ನ ತನ್ನ ತೀರ್ಪಿನಲ್ಲಿ ಅಚ್ಚರಿ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಪ್ರಕರಣವನ್ನು ವಿವಿಧ ಆಯಾಮಗಳಲ್ಲಿ ವಿಶ್ಲೇಷಿಸಿರುವ ನ್ಯಾಯಮೂರ್ತಿಗಳು ಪ್ರಕರಣದಲ್ಲಿ ತನಿಖೆ ಅಗತ್ಯವಿದೆ ಎಂಬುದು ಸ್ಪಷ್ಟವಾಗಿ ಮನದಟ್ಟಾಗುತ್ತದೆ ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ.

“ಯತೀಂದ್ರ ಮೌನ’ ವಾದ ಹಾಸ್ಯಾಸ್ಪದ: ಹೈಕೋರ್ಟ್‌
ಮೈಸೂರಿನ ಮುಡಾದ ನಿವೇಶನ ಹಂಚಿಕೆ ಸಂಬಂಧ ನಡೆದಿದ್ದ ಸಭೆಯಲ್ಲಿ ಡಾ| ಯತೀಂದ್ರ ಸಿದ್ದರಾಮಯ್ಯ ಭಾಗಿಯಾಗಿದ್ದರೂ ಮೌನವಾಗಿದ್ದರು ಎಂಬ ಅರ್ಜಿ ದಾರರವಾದ ಹಾಸ್ಯಾಸ್ಪದ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ. ಸಿಎಂ ವಿರುದ್ಧ ರಾಜ್ಯಪಾಲರು ಆಭಿಯೋಜನೆಗೆ ಅನುಮತಿ ನೀಡಿರುವ ತೀರ್ಪಿನಲ್ಲಿ ಹೈಕೋರ್ಟ್‌ ನ್ಯಾಯಮೂರ್ತಿಗಳು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪತ್ನಿ 50:50 ಅನುಪಾತದಲ್ಲಿ ಪರಿಹಾರ ಅಥವಾ ಪರಿಹಾರ ನಿವೇಶನ ನೀಡುವಂತೆ ಮುಡಾಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಮಾದರಿಯಲ್ಲಿ ಪರಿಹಾರ ಪ್ರಕಟಿಸುವಾಗಲೂ ನಿಯಮಗಳ ಉಲ್ಲಂಘನೆಯಾಗಿದೆ. 50:50 ಅನುಪಾತದಲ್ಲಿ ಪರಿಹಾರ ನೀಡುವ ಬಗ್ಗೆ ನಡೆದ ಮುಡಾ ಸಭೆಯಲ್ಲಿ ದೂರುದಾರರ ಮಗ (ಡಾ|ಯತೀಂದ್ರ) ಭಾಗಿಯಾಗಿದ್ದರು. ಆದರೆ ಸಭೆಯಲ್ಲಿ ಅವರು ಮೌನವಾಗಿದ್ದರು ಎಂದು ದೂರುದಾರರ ಪರ ವಾದ ಮಂಡನೆ ಮಾಡಲಾಗಿದೆ. ಈ ವಾದ ಹಾಸ್ಯಾಸ್ಪದ.

ಒಬ್ಬ ಕಾನೂನು ನಿರ್ಮಾತೃ, ಮಾಜಿ ಮುಖ್ಯಮಂತ್ರಿಯ ಮಗ ಮತ್ತು ಆಗಿನ ವಿಪಕ್ಷದ ನಾಯಕನ ಮಗ ವಿಷಯದ ಬಗ್ಗೆ ಚರ್ಚೆ ನಡೆಯುವಾಗ ಮೌನವಾಗಿದ್ದರು ಎಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಇಲ್ಲಿ ಫ‌ಲಾನುಭವಿ ಅವರ ತಾಯಿಯಾಗಿದ್ದರು ಎಂದು ನ್ಯಾಯಾಲಯ ಹೇಳಿದೆ.

ಟಾಪ್ ನ್ಯೂಸ್

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

1-jk

J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

Sudeep: ನನ್ನ ಕೆಲಸವನ್ನು ಅಚ್ಚುಕಟ್ಟಾಗಿ ಮುಗಿಸಿದ್ದೇನೆ.. ಮ್ಯಾಕ್ಸ್‌ ಬಗ್ಗೆ ಕಿಚ್ಚ ಮಾತು

1-kammala

Arizona;ಕಮಲಾ ಹ್ಯಾರಿಸ್ ಚುನಾವಣ ಪ್ರಚಾರ ಕಚೇರಿಯ ಮೇಲೆ ಗುಂಡಿನ ದಾಳಿ

ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

Ravi Katapadi: ರಕ್ಕಸ ವೇಷದ ಒಳಗಿನ ಮಾನವೀಯ ಮುಖ; ರವಿ ಕಟಪಾಡಿ ಎಂಬ ಸೇವಕ

1-urmila

Divorce; 8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

SSLC ವಿಜ್ಞಾನ ಪರೀಕ್ಷೆಗೆ ಶೇ. 20 ಕಠಿನ ಪ್ರಶ್ನೆಗಳು!

High-Court–CM

MUDA Scam: ಮುಖ್ಯಮಂತ್ರಿ ವಿರುದ್ಧ ತನಿಖೆಯ ಅಗತ್ಯವಿದೆ: ಹೈಕೋರ್ಟ್‌

MUDA Case: ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಏನಾಗಲಿದೆ: ಭಾರೀ ಕುತೂಹಲ

MUDA Case: ಜನಪ್ರತಿನಿಧಿಗಳ ಕೋರ್ಟ್‌ನಲ್ಲಿ ಏನಾಗಲಿದೆ: ಭಾರೀ ಕುತೂಹಲ

ಇಂದು ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಮೇಲ್ಮನವಿ

ಇಂದು ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮುಖ್ಯಮಂತ್ರಿ ಮೇಲ್ಮನವಿ

Congress-Symbol

High Court Order: ಮುಖ್ಯಮಂತ್ರಿ ಬದಲಾವಣೆ ಕೂಗಿಗೆ ಮತ್ತೆ ರೆಕ್ಕೆಪುಕ್ಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Crime: ಪತ್ನಿಯ ಶೀಲ ಶಂಕಿಸಿ 5 ವರ್ಷದ ಪುತ್ರಿಯ ಕೊಂದ ತಂದೆ ಬಂಧನ

Crime: ಪತ್ನಿಯ ಶೀಲ ಶಂಕಿಸಿ 5 ವರ್ಷದ ಪುತ್ರಿಯ ಕೊಂದ ತಂದೆ ಬಂಧನ

6

Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್‌ ಅಮಾನತು

Kapil Sibal;

Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.