State Govt: 14 ಜಿಲ್ಲಾಸ್ಪತ್ರೆಗಳಲ್ಲಿ ಸ್ಕ್ಯಾನ್ ಸೇವೆ ಸ್ಥಗಿತ
ಜಿಲ್ಲಾಸ್ಪತ್ರೆಗಳಲ್ಲಿ ಎಂಆರ್ಐ ಸ್ಕ್ಯಾನ್ ಇಲ್ಲದೆ ರೋಗಿಗಳಿಗೆ ಆಗಿದೆ ಸಮಸ್ಯೆ
Team Udayavani, Sep 25, 2024, 7:20 AM IST
ವಿಜಯಪುರ: ರಾಜ್ಯ ಸರಕಾರ ಕಳೆದ 6 ತಿಂಗಳುಗಳ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ 14 ಜಿಲ್ಲಾಸ್ಪತ್ರೆಗಳಲ್ಲಿ ನೀಡುತ್ತಿದ್ದ ಸಿಟಿ ಮತ್ತು ಎಂಆರ್ಐ ಸ್ಕ್ಯಾನ್ ಸೇವೆಯನ್ನು ಕೃಷ್ಣ ಡಯಾಗ್ನೊಸ್ಟಿಕ್ಸ್ ಲಿಮಿಟೆಡ್ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಮಹಾರಾಷ್ಟ್ರದ ಪುಣೆ ಮೂಲದ ಈ ಸಂಸ್ಥೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜತೆ 2017ರಲ್ಲಿ ಒಪ್ಪಂದ ಮಾಡಿಕೊಂಡಿತ್ತು. ಉಡುಪಿ, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರಕನ್ನಡ, ಚಾಮರಾಜನಗರ, ಕೊಡಗು, ವಿಜಯಪುರ, ಧಾರವಾಡ, ಹಾವೇರಿ, ದಾವಣಗೆರೆ, ಯಾದಗಿರಿ ಹಾಗೂ ಬಾಗಲಕೋಟೆಯ ಜಿಲ್ಲಾಸ್ಪತ್ರೆಗಳಲ್ಲಿ ಸೇವೆ ಒದಗಿಸುತ್ತಿತ್ತು.
ಆರು ವರ್ಷಗಳಿಂದ 14 ಜಿಲ್ಲೆಗಳಲ್ಲಿ ಸಿಟಿ ಸ್ಕ್ಯಾನ್ ಹಾಗೂ 5 ಜಿಲ್ಲೆಗಳಲ್ಲಿ ಎಂಆರ್ಐ ಸ್ಕ್ಯಾನ್ ಮಾಡಲಾಗು ತ್ತಿತ್ತು. ಯಾವುದೇ ಯಂತ್ರ ಕೆಟ್ಟರೆ ಅಥವಾ ದುರಸ್ತಿಗೆ ಬಂದರೆ ಕಂಪೆನಿಯವರೇ ಬೇರೆಡೆ ರೋಗಿಗಳಿಗೆ ಸ್ಕ್ಯಾನಿಂಗ್ ಮಾಡಿಸುತ್ತಿದ್ದರು. ಇದರ ಹಣವನ್ನೂ ಅವರೇ ಭರಿಸುತ್ತಿದ್ದರು. ಆದರೆ ಆರು ತಿಂಗಳುಗಳಿಂದ ಹಣವನ್ನು ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಎಲ್ಲ 14 ಜಿಲ್ಲೆಗಳ ಸರ್ಜನ್ಗಳಿಗೆ ಸೆ. 22ರಂದೇ ಸಂಸ್ಥೆಯು ಪತ್ರ ಬರೆದು, ರಾಜ್ಯದ ರಾಷ್ಟ್ರೀಯ ಆರೋಗ್ಯ ಮಿಷನ್ನಿಂದ ಹಣ ಪಾವತಿಯಾಗದ ಕಾರಣ ಸೆ. 24ರಿಂದ ರೋಗಿಗಳಿಗೆ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಿದ್ದೇವೆ. ಬಾಕಿ ಹಣದ ವಿಷಯ ಇತ್ಯರ್ಥ ಆಗುವವರೆಗೂ ಸೇವೆಯನ್ನು ನೀಡುವುದಿಲ್ಲ. ಒಂದು ವೇಳೆ ಗಂಭೀರ ಪರಿಸ್ಥಿತಿಯ ಸಂದರ್ಭದಲ್ಲಿ ರೋಗಿ ನೇರವಾಗಿ ಹಣ ಪಾವತಿಸಿದರಷ್ಟೇ ಸೇವೆ ನೀಡುತ್ತೇವೆ ಎಂದು ತಿಳಿಸಿತ್ತು. ಈಗ ಸೇವೆಯನ್ನು ಸ್ಥಗಿತಗೊಳಿಸಿದ್ದು, ಕೆಲವೆಡೆ ರೋಗಿಗಳ ಅನುಕೂಲಕ್ಕಾಗಿ ಮಂಗಳವಾರ ತುರ್ತು ಸೇವೆಯನ್ನು ಮಾತ್ರ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಎಲ್ಲೆಲ್ಲಿ ಸ್ಥಗಿತ?
ಉಡುಪಿ, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರಕನ್ನಡ, ಚಾಮರಾಜನಗರ, ಕೊಡಗು, ವಿಜಯಪುರ, ಧಾರವಾಡ, ಹಾವೇರಿ, ದಾವಣಗೆರೆ, ಯಾದಗಿರಿ ಹಾಗೂ ಬಾಗಲಕೋಟೆ ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆಯಲ್ಲಿ ಒಂದು ಸಿಟಿ ಮತ್ತು ಎಂಆರ್ಐ ಸ್ಕ್ಯಾನ್ ಯಂತ್ರವಿದೆ. ಸರಕಾರದ ಟೆಂಡರ್ ಪ್ರಕಾರ ಕೃಷ್ಣ ಡಯಾಗ್ನೊಸ್ಟಿಕ್ಸ್ ಲಿಮಿಟೆಡ್ ಮೂಲಕ ಸೇವೆ ನೀಡಲಾಗುತ್ತಿದೆ. ಮಂಗಳವಾರದಿಂದ ಸೇವೆ ಸ್ಥಗಿತಗೊಳಿಸಿದ್ದಾರೆ. ಜತೆಗೆ ಯಂತ್ರಗಳ ಸಮಸ್ಯೆಯೂ ಇದೆ.
-ಡಾ| ಶಿವಾನಂದ ಮಾಸ್ತಿಹೋಳಿ
ಜಿಲ್ಲಾ ಸರ್ಜನ್ ವಿಜಯಪುರ
ಎಂಆರ್ಐ ಹಾಗೂ ಸಿಟಿ ಸ್ಕ್ಯಾನ್ ನಡೆಸಲು ಗುತ್ತಿಗೆ ಪಡೆದ ಸಂಸ್ಥೆಯವರು ಸೇವೆ ಸ್ಥಗಿತಗೊಳಿಸುವ ಬಗ್ಗೆ ಪತ್ರ ನೀಡಿದ್ದರು. ಆದರೆ ಇದು ರಾಜ್ಯಮಟ್ಟದಲ್ಲಿ ಆಗಿರುವ ಒಪ್ಪಂದ. ಹೀಗಾಗಿ ಇಲ್ಲಿ ಸ್ಥಗಿತ ಮಾಡಲು ಸಾಧ್ಯವಿಲ್ಲ ಎಂಬುದನ್ನು ಮನವರಿಕೆ ಮಾಡಿದ್ದೇವೆ. ಹಾಗೆಯೇ ಈ ಸಮಸ್ಯೆಯ ಬಗ್ಗೆ ಇಲಾಖೆಯ ಆಯುಕ್ತರಿಗೂ ಪತ್ರ ಬರೆಯಲಾಗಿದೆ. ಉಡುಪಿಯಲ್ಲಿ ತುರ್ತು ಸೇವೆಗೆ ಯಾವುದೇ ಸಮಸ್ಯೆಯಾಗಿಲ್ಲ.
-ಡಾ| ಅಶೋಕ್, ಜಿಲ್ಲಾ ಸರ್ಜನ್, ಉಡುಪಿ
ದಕ್ಷಿಣ ಕನ್ನಡದಲ್ಲಿ ಅಬಾಧಿತ ಮಂಗಳೂರಿನಲ್ಲಿ ದ.ಕ. ಜಿಲ್ಲಾಸ್ಪತ್ರೆಗೆ ಸಂಬಂಧಿಸಿ ಸಿಟಿ ಸ್ಕಾನ್ ಮತ್ತು ಎಂಆರ್ಐಗೆ ಯಾವುದೇ ಸಮಸ್ಯೆಯಾಗಿಲ್ಲ, ವೆನ್ಲಾಕ್ ಆಸ್ಪತ್ರೆಯ ವಠಾರದಲ್ಲೇ ಇರುವ ಹಿಂಡ್ಲ್ಯಾಬ್ನವರಿಗೆ ಈ ಕೆಲಸವನ್ನು ಹೊರಗುತ್ತಿಗೆ ನೀಡಲಾಗಿದೆ. ಅವರು ಕಡಿಮೆ ದರಕ್ಕೆ ಸ್ಕ್ಯಾನ್ ಮಾಡಿಕೊಡುತ್ತಿದ್ದಾರೆ.
-ಡಾ| ಶಿವ್ರಪಕಾಶ್, ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕ
- ರಂಗಪ್ಪ ಗಧಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಲಾವೃತ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಭೂಬಾಲನ್ ಭೇಟಿ, ಪರಿಶೀಲನೆ
Vijayapura: ಜಿಲ್ಲೆಯಲ್ಲಿ 5 ಗಂಟೆಗೂ ಅಧಿಕ ಕಾಲ ಸುರಿದ ಮಳೆ… ತುಂಬಿ ಹರಿದ ಹಳ್ಳ-ಕೊಳ್ಳಗಳು
Rayanna Brigade ಸ್ಥಾಪನೆಗೆ ಶೀಘ್ರ ನಿರ್ಧಾರ: ಈಶ್ವರಪ್ಪ
Minister MB Patil: ಆಡಳಿತದಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಸಲ್ಲ
KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Crime: ಪತ್ನಿಯ ಶೀಲ ಶಂಕಿಸಿ 5 ವರ್ಷದ ಪುತ್ರಿಯ ಕೊಂದ ತಂದೆ ಬಂಧನ
Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್ ಅಮಾನತು
Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ
Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ
Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.