3 farm laws; ಕಂಗನಾ ರಣಾವತ್ ಹೇಳಿಕೆಯಿಂದ ಅಂತರ ಕಾಯ್ದುಕೊಂಡ ಬಿಜೆಪಿ
Team Udayavani, Sep 25, 2024, 8:15 AM IST
ಹೊಸದಿಲ್ಲಿ: ರದ್ದುಗೊಂಡಿರುವ ವಿವಾದಿತ 3 ಕೃಷಿ ಕಾಯ್ದೆಗಳನ್ನು ಸರಕಾರ ವಾಪಸ್ ತರಬೇಕೆಂದು ಆಗ್ರಹಿಸಿರುವ ಸಂಸದೆ ಕಂಗನಾ ರಣಾವತ್ ಅವರ ಹೇಳಿಕೆ ಬಗ್ಗೆ ಬಿಜೆಪಿ ಅಂತರ ಕಾಯ್ದುಕೊಂಡಿದೆ.
ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಮಂಗಳವಾರ(ಸೆ24) ಈ ಕುರಿತು ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಕೇಂದ್ರ ಸರಕರ ಹಿಂಪಡೆದಿರುವ ಕೃಷಿ ಮಸೂದೆಗಳ ಕುರಿತು ನೀಡಿರುವ ಹೇಳಿಕೆ ವೈರಲ್ ಆಗುತ್ತಿದ್ದು, ಈ ಹೇಳಿಕೆಯು ವೈಯಕ್ತಿಕವಾಗಿದೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ಬಿಜೆಪಿ ಪರವಾಗಿ ಇಂತಹ ಹೇಳಿಕೆ ನೀಡಲು ಕಂಗನಾ ರಣಾವತ್ಗೆ ಅಧಿಕಾರವಿಲ್ಲ ಮತ್ತು ಈ ಹೇಳಿಕೆಯನ್ನು ನಾವು ಖಂಡಿಸುವುದಿಲ್ಲ” ಎಂದು ಹೇಳಿದ್ದಾರೆ.
ರೈತ ಪ್ರತಿಭಟನೆ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದ ಕಂಗನಾ ರಣಾವತ್ ವಿವಾದಿತ 3 ಕೃಷಿ ಕಾಯ್ದೆಗಳನ್ನು ಸರಕಾರ ವಾಪಸ್ ತರಬೇಕೆಂದು ಆಗ್ರಹಿಸಿದ್ದರು. ಈ ಹೇಳಿಕೆಯು ವಿವಾದಾಸ್ಪದವಾಗಬಹುದು ಎಂದು ನನಗೆ ತಿಳಿದಿದೆ ಆದರೂ ಮೂರು ಕೃಷಿ ಕಾನೂನುಗಳನ್ನು ವಾಪಸ್ ತರಬೇಕು. ಇದಕ್ಕೆ ರೈತರೇ ಒತ್ತಾಯಿಸಬೇಕು’ ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಆಕ್ರೋಶದ ಬಳಿಕ ಹೇಳಿಕೆ ಹಿಂಪಡೆದುಕೊಂಡ ಕಂಗನಾ ರಣಾವತ್
Uttar Pradesh: ಕಾಳಿಂಗ ಸರ್ಪವನ್ನು ಕೊಂದು ಮಗುವನ್ನು ರಕ್ಷಿಸಿದ ಪಿಟ್ ಬುಲ್ ಶ್ವಾನ!
Siddaramaiah ವಿರುದ್ಧ ಹೈ ಕೋರ್ಟ್ ತೀರ್ಪು: ಕಪಿಲ್ ಸಿಬಲ್ ಪ್ರತಿಕ್ರಿಯೆ
J&K; ಮತದಾನ ಪ್ರಕ್ರಿಯೆ ವೀಕ್ಷಿಸುತ್ತಿರುವ ವಿದೇಶಗಳ ಉನ್ನತ ಮಟ್ಟದ ರಾಜತಾಂತ್ರಿಕರು
Sanatana Dharma; ಮುಂದುವರೆದ ಪವನ್ ಕಲ್ಯಾಣ್ vs ಪ್ರಕಾಶ್ ರಾಜ್ ಸಮರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.