Lokayukta: 62 ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ


Team Udayavani, Sep 25, 2024, 11:23 AM IST

Lokayukta: 62 ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ

ಬೆಂಗಳೂರು: ಲೋಕಾಯುಕ್ತ ನ್ಯಾ.ಬಿ.ಎಸ್‌. ಪಾಟೀಲ್‌, ಉಪಲೋಕಾಯುಕ್ತ ಬಿ.ವೀರಪ್ಪ ಬೆಂಗಳೂರು ನಗರ ಅಬಕಾರಿ ಜಿಲ್ಲಾ ವ್ಯಾಪ್ತಿಯ ಯಶವಂತಪುರ ಹಾಗೂ ಬ್ಯಾಟರಾಯನಪುರ ಅಬಕಾರಿ ಕಚೇರಿಗಳಿಗೆ ಖುದ್ದಾಗಿ ಭೇಟಿ ನೀಡಿ ತಪಾಸಣೆ ನಡೆಸಿದಾಗ ಅನಧಿಕೃತ ಗಾಂಜಾ, ಅನೇಕ ಮದ್ಯದ ಬಾಟಲುಗಳು, 2 ಲಕ್ಷ ರೂ. ಮೌಲ್ಯದ ನೋಟುಗಳು ಪತ್ತೆಯಾಗಿವೆ.

ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ  ದೂರುಗಳು ಬರುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಅಬಕಾರಿ ಜಿಲ್ಲಾ ವ್ಯಾಪ್ತಿಯ 62 ಅಬಕಾರಿ ಕಚೇರಿಗಳ ಮೇಲೆ ಏಕಕಾಲದಲ್ಲಿ ಮಂಗಳವಾರ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿ ಹಲವು ಲೋಪ ಪತ್ತೆಹಚ್ಚಿದ್ದಾರೆ. ಇನ್ನು ಲೋಕಾಯುಕ್ತ ನ್ಯಾ.ಬಿ.ಎಸ್‌.ಪಾಟೀಲ್‌ ಹಾಗೂ ಉಪಲೋಕಾಯುಕ್ತ ಬಿ.ವೀರಪ್ಪ ಖುದ್ದು ಯಶವಂತಪುರ ಹಾಗೂ ಮೈಸೂರು ರಸ್ತೆಯ ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ಸಿಬ್ಬಂದಿ ಜೊತೆ ಪರಿಶೀಲಿಸಿದಾಗ ಯಾವುದೇ ಸೀಲ್‌ ಹಾಕಿರದ ಸುಮಾರು ಅರ್ಧ ಕೆಜಿಯಷ್ಟು ಅನಧಿಕೃತ ಗಾಂಜಾ, ಮದ್ಯದ ಬಾಟಲಿಗಳು ಹಾಗೂ ದಾಖಲೆ ಇಲ್ಲದ 2 ಲಕ್ಷ ರೂ. ಕಂಡು ಒಂದು ಕ್ಷಣ ಲೋಕಾ ಸಿಬ್ಬಂದಿಯೇ ದಂಗಾದರು. ಸೂಕ್ತ ಸ್ಪಷ್ಟನೆ ನೀಡದಿದ್ದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಲೋಕಾಯುಕ್ತ ಮುಂದಾಗಿದೆ. ದಾಳಿ ನಡೆದ 62 ಕಚೇರಿಗಳ ಪೈಕಿ ಬಹುತೇಕ ಕಡೆ ಹಲವಾರು ಲೋಪಗಳು ಪತ್ತೆಯಾಗಿವೆ.

ಅನಧಿಕೃತ ಗಾಂಜಾ: ಎನ್‌ಡಿಪಿಎಸ್‌ ಪ್ರಕರಣದಲ್ಲಿ ಅಬಕಾರಿ ಇಲಾಖೆಯವರಿಗೆ ಗಾಂಜಾ ಜಪ್ತಿ ಮಾಡಲು ಅವಕಾಶವಿದೆ. ಜಪ್ತಿ ಮಾಡಿದ ಗಾಂಜಾಗೆ ಸೀಲ್‌ಗ‌ಳು, ಕ್ರೈಂ ನಂಬರ್‌, ಮಹಜರು ಕವರ್‌ಗಳೆಲ್ಲ ಇರಬೇಕು. ಕೋರ್ಟ್‌ಗೆ ಹಾಜರುಪಡಿಸಿರುವ ದಾಖಲೆಗಳಿರಬೇಕು ಎಂಬಿತ್ಯಾದಿ ನಿಯಮಗಳಿವೆ. ಆದರೆ, ಇಲ್ಲಿ ಜಪ್ತಿ ಮಾಡಿರುವ ಡ್ರಗ್ಸ್‌ಗಳನ್ನು ನಿಯಮ ಉಲ್ಲಂ ಸಿ ಪ್ರತ್ಯೇ ಕವಾಗಿಟ್ಟಿದ್ದರು. ಇನ್ನು ಯಶವಂತಪುರ ಕಚೇರಿಯಲ್ಲಿ ಸುಮಾರು 15 ಅನಧಿಕೃತ ಮದ್ಯದ ಬಾಟಲಿಗಳು ಸಿಕ್ಕಿವೆ.

ಅಬಕಾರಿ ಅಕ್ರಮಗಳ ವಿರುದ್ಧ 132 ದೂರು: ದಾಳಿ ನಡೆಸಿದ ಬಳಿಕ ಲೋಕಾಯುಕ್ತ ನ್ಯಾ.ಬಿ.ಎಸ್‌. ಪಾಟೀಲ್‌ ಮಾಧ್ಯಮದ ಜೊತೆಗೆ ಮಾತನಾಡಿ, ಈ ಅಬಕಾರಿ ಇಲಾಖೆಗಳಲ್ಲಿ ದುಡ್ಡು ಕೊಡದೇ ನಮ್ಮ ಅರ್ಜಿ ಮುಂದೆ ಸಾಗುವುದಿಲ್ಲ. ಸಾಕಷ್ಟು ಭ್ರಷ್ಟಾಚಾರ ಇದೆ. ಬಹಳ ಸತಾಯಿಸುತ್ತಿದ್ದಾರೆ ಎಂಬ ಬಗ್ಗೆ ಒಟ್ಟಾರೆ 132ಕ್ಕೂ ಅಧಿಕ ದೂರುಗಳು ಲೋಕಾಯುಕ್ತಕ್ಕೆ ಬಂದಿದ್ದವು. ದಾಳಿ ವೇಳೆ ಪತ್ತೆಯಾಗಿರುವ ಕೆಲ ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದೇವೆ. ಸಾರ್ವ ಜನಿಕರ ಅರ್ಜಿಗಳು ಏಕೆ ವಿಲೇವಾರಿ ಆಗುತ್ತಿಲ್ಲ ಎಂಬುದರ ಬಗ್ಗೆ ಪ್ರಶ್ನಿಸಿದರೆ ಇನ್‌ಸ್ಪೆಕ್ಟರ್‌ಗಳನ್ನು ಕಳುಹಿಸಲಾಗಿದೆ. ಅಲ್ಲಿ ಕೆಲವೊಂದು ಪ್ರಕ್ರಿಯೆಗಳು ನಡೆದು ವರದಿ ಬಂದ ಬಳಿಕ ಪರವಾನಗಿ ನೀಡುವ ಸಂಬಂಧ ಅರ್ಜಿ ವಿಲೇವಾರಿ ಮಾಡಲಾಗುವುದು ಎನ್ನುತ್ತಿದ್ದಾರೆ. ಕೆಲವೊಮ್ಮೆ ಆನ್‌ಲೈನ್‌ ಮಾಡಬಹುದು ಎನ್ನುತ್ತಾರೆ, ಇನ್ನು ಕೆಲವು ಬಾರಿ ಆಫ್ಲೈನ್‌ನಲ್ಲೂ ಕೊಡಬಹುದು ಎನ್ನುತ್ತಿದ್ದಾರೆ. ಇದೀಗ ದಾಳಿ ವೇಳೆ ಜಪ್ತಿ ಮಾಡಿರುವ ಕಡತ ಪರಿಶೀಲಿಸಿ ತಪ್ಪಿತಸ್ಥ ಅಧಿಕಾರಿಗಳಿಂದ ಲೋಪಗಳ ಕುರಿತು ಸ್ಪಷ್ಟನೆ ಕೇಳಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಬಕಾರಿ ಇಲಾಖೆಯಲ್ಲಿ ಗಾಂಜಾ ಪತ್ತೆ: ನಾವು ದಾಳಿ ನಡೆಸಿದ ಯಶವಂತಪುರ ಹಾಗೂ ಬ್ಯಾಟರಾಯನಪುರ ಅಬಕಾರಿ ಕಚೇರಿಗಳಲ್ಲಿ ದಾಖಲೆಯಿಲ್ಲದ ಗಾಂಜಾ, ಮದ್ಯದ ಬಾಟಲಿಗಳು ಪತ್ತೆಯಾಗಿದೆ. ಗಾಂಜಾ ಇಲ್ಲಿಗೆ ಏಕೆ ಬಂದಿದೆ ಎಂಬುದರ ಬಗ್ಗೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಉತ್ತರಿಸುತ್ತಿಲ್ಲ. ಇದರ ಜೊತೆಗೆ ಹತ್ತಾರು ಲಿಕ್ಕರ್‌ ಬಾಟಲಿಗಳು ಸಿಕ್ಕಿರುವುದರ ಬಗ್ಗೆ ಪ್ರಶ್ನಿಸಿದರೆ ಗೊಂದಲದ ಹೇಳಿಕೆ ನೀಡುತ್ತಿದ್ದಾರೆ ಎಂದು ಲೋಕಾಯುಕ್ತ ನ್ಯಾ.ಬಿ.ಎಸ್‌.ಪಾಟೀಲ್‌ ಮಾಧ್ಯಮದ ಜೊತೆಗೆ ಮಾತನಾಡುವ ವೇಳೆ ಮಾಹಿತಿ ನೀಡಿದ್ದಾರೆ.

 

ಗೌಪ್ಯವಾಗಿ ಮಾಹಿತಿ ಸಂಗ್ರಹಿಸಿ ದಾಳಿ!:

ಬೆಂಗಳೂರು ನಗರ ಅಬಕಾರಿ ಜಿಲ್ಲಾ ವ್ಯಾಪ್ತಿಯಲ್ಲಿನ 62 ಅಬಕಾರಿ ಕಚೇರಿಗಳಲ್ಲಿ ಸಿಎಲ್‌-2, ಸಿಎಲ್‌-7, ಸಿಎಲ್‌-9 ಪರವಾನಗಿ ವಿಭಾಗ ವಿತರಣೆ, ನವೀಕರಿಸುವಿಕೆ, ಸ್ಥಳಾಂತರಿಸುವಿಕೆ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ಇತರೆ ಸಾರ್ವಜನಿಕ ಕೆಲಸ ಕಾರ್ಯಗಳಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅವ್ಯವಹಾರ ಹಾಗೂ ಅಕ್ರಮಗಳ ಬಗ್ಗೆ ಅಬಕಾರಿ ಪರವಾನಗಿದಾರರು ಹಾಗೂ ಸಾರ್ವಜನಿಕರು ದೂರು ನೀಡಿದ್ದರು. ಹೀಗಾಗಿ ಲೋಕಾಯುಕ್ತ ನ್ಯಾ.ಬಿ.ಎಸ್‌.ಪಾಟೀಲ್‌ ಲೋಕಾಯುಕ್ತ ಸಂಸ್ಥೆಯ ಅಧಿಕಾರಿಗಳ ಮುಖಾಂತರ ಗೌಪ್ಯ ತನಿಖೆ ನಡೆಸಿ ಮಾಹಿತಿ ಸಂಗ್ರಹಿಸಿ ಅಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಖಾತ್ರಿ ಪಡಿಸಿಕೊಂಡಿದ್ದರು. ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣಗಳನ್ನು ದಾಖಲಿಸಿಕೊಂಡು ಲೋಕಾಯುಕ್ತ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನ್ಯಾಯಾಂಗ ಹಾಗೂ ಪೊಲೀಸ್‌ ಅಧಿಕಾರಿಗಳ ತಂಡವನ್ನು ಸನ್ನದ್ಧಗೊಳಿಸಿ ಬೆಂಗಳೂರು ನಗರ ಅಬಕಾರಿ ಜಿಲ್ಲಾ ವ್ಯಾಪ್ತಿಯಲ್ಲಿನ 62 ಅಬಕಾರಿ ಕಚೇರಿಗಳಲ್ಲಿ ಏಕಕಾಲದಲ್ಲಿ ತಪಾಸಣೆ ಮಾಡಿ ಅಕ್ರಮಗಳನ್ನು ಪತ್ತೆ ಹಚ್ಚುವಂತೆ ಆದೇಶಿಸಿದ್ದರು. ಲೋಕಾಯುಕ್ತ ಸಂಸ್ಥೆಯಲ್ಲಿ ರಾಜ್ಯಾದ್ಯಂತ ಅಬಕಾರಿ ಇಲಾಖಾ ಕಚೇರಿಗಳಲ್ಲಿನ ಅವ್ಯವಹಾರಗಳಿಗೆ ಸಂಬಂಧಿಸಿದಂತೆ ದಾಖಲಾಗಿರುವ 132 ಪ್ರಕರಣ ಗಳು ವಿವಿಧ ಹಂತದ ತನಿಖೆಯಲ್ಲಿ ಮುಂದುವರಿ ದಿರುವುದು ಅಬಕಾರಿ ಇಲಾಖಾ ಕಚೇರಿಗಳಲ್ಲಿ ನಡೆಯುತ್ತಿರುವ ಅವ್ಯವಹಾರವನ್ನು ಪುಷ್ಟಿಕರಿಸುತ್ತವೆ.

ಅಕ್ರಮಕ್ಕಾಗಿ ಖಾಸಗಿ ವ್ಯಕ್ತಿಗಳ ನೇಮಕ!:

ಕೆಲವು ಕಡೆ ಅಬಕಾರಿ ಇನ್‌ಸ್ಪೆಕ್ಟರ್‌ಗಳೇ ಖಾಸಗಿ ವ್ಯಕ್ತಿಗಳನ್ನಿಟ್ಟುಕೊಂಡು ಅವ್ಯವಹಾರ ನಡೆಸುತ್ತಿದ್ದ ಸಂಗತಿ ಬಯಲಾಗಿದೆ. ಅಬಕಾರಿ ಇನ್‌ಸ್ಪೆಕ್ಟರ್‌ಗಳು ಖಾಸಗಿ ವ್ಯಕ್ತಿಗಳಿಗೆ ತಿಂಗಳಿಗೆ 15 ರಿಂದ 20 ಸಾವಿರ ರೂ. ವೇತನ ನೀಡಿ ಕೆಲಸ ಮಾಡಿಕೊಳ್ಳಲು ಇಟ್ಟು ಕೊಂಡಿರುವುದು ಗೊತ್ತಾಗಿದೆ. ಬ್ಯಾಟರಾಯನಪುರ, ಕೋರಮಂಗಲ ಕಚೇರಿಗಳಲ್ಲಿ ಹಲವು ಅಕ್ರಮ ಪತ್ತೆಯಾಗಿದೆ. ಕೋರಮಂಗಲ ಕಚೇರಿಯಲ್ಲಿ ಲೋಕಾಯುಕ್ತ ಸಿಬ್ಬಂದಿ ಎಂಟ್ರಿಯಾಗುತ್ತಿದ್ದಂತೆ ಅಟೆಂಡೆನ್ಸ್‌, ಕ್ಯಾಶ್‌ ರಿಜಿಸ್ಟ್ರರ್‌ ಪುಸ್ತಕವನ್ನೇ ತೆಗೆದು ಕೊಂಡು ಓಡಿ ಹೋಗಿರುವುದು ಪತ್ತೆಯಾಗಿದೆ.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.