Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!


Team Udayavani, Sep 25, 2024, 11:38 AM IST

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ಕೊಲೆಗೀಡಾದ ಮಹಾಲಕ್ಷ್ಮೀ ಮರಣೋತ್ತರ ಪರೀಕ್ಷೆ ನಡೆಸಿರುವ ಬೌರಿಂಗ್‌ ಆಸ್ಪತ್ರೆ ವೈದ್ಯರು ಪೊಲೀಸರಿಗೆ ಪ್ರಾಥಮಿಕ ಮಾಹಿತಿ/ವರದಿ ಸಲ್ಲಿಸಿದ್ದಾರೆ.

ಮಹಾಲಕ್ಷ್ಮೀ ಮೃತ ದೇಹದ 50ಕ್ಕೂ ಅಧಿಕ ತುಂಡುಗಳನ್ನು ಮರು ಜೋಡಣೆ ಮಾಡಿರುವ ವೈದ್ಯರು ಬಳಿಕ ಮರಣೋ ತ್ತರ ಪರೀಕ್ಷೆ ನಡೆಸಿದ್ದಾರೆ. ಸದ್ಯ ತನಿಖೆಗೆ ಸಹಕಾರ ಆಗುವ ನಿಟ್ಟಿನಲ್ಲಿ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯನ್ನು ವೈದ್ಯರು ವೈಯಾಲಿ ಕಾವಲ್‌ ಪೊಲೀಸರಿಗೆ ಸಲ್ಲಿಸಿದ್ದಾರೆ. ಒಂದೆರಡು ದಿನಗಳಲ್ಲಿ ಡಿಎನ್‌ಎ ಪರೀಕ್ಷೆ ಸೇರಿ ಕೆಲ ಪರೀಕ್ಷೆಗಳು ನಡೆಯಲಿದ್ದು, ಒಂದು ವಾರದೊಳಗೆ ಸಂಪೂರ್ಣ ವರದಿ ನೀಡಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಮಹಾಲಕ್ಷ್ಮೀಯ ಎದೆ ಮತ್ತು ಹೊಟ್ಟೆ ಭಾಗಕ್ಕೆ ಇರಿದು ಕೊಂದಿರುವ ಹಂತಕ, ಬಳಿಕ ತಲೆಯನ್ನು ಬೇರ್ಪಡಿಸಿ, ಆ ನಂತರ ದೇಹದ ಇತರೆ ಭಾಗಗಳನ್ನು ಸುಮಾರು 50 ತುಂಡುಗಳನ್ನಾಗಿ ಮಾಡಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಆರೋಪಿಗಾಗಿ ಶೋಧ: ಅಕ್ರಮ ಸಂಬಂಧ ಹಿನ್ನೆಲೆಯಲ್ಲೇ ಮಹಾಲಕ್ಷ್ಮೀಯನ್ನು ಭೀಕರವಾಗಿ ಹತ್ಯೆಗೈದಿರುವ ಹಂತಕ ಬಂಧನಕ್ಕಾಗಿ ಪೊಲೀಸರು, ಪಶ್ಚಿಮ ಬಂಗಾಳ, ಒಡಿಶಾ ಸೇರಿ ಈಶಾನ್ಯ ರಾಜಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕೊಲೆ ಬಳಿಕ ಆರೋಪಿಯು ಪಶ್ಚಿಮ ಬಂಗಾಳಕ್ಕೆ ತೆರಳಿ ಮೊಬೈಲ್‌ ಸ್ವಿಚ್ಡ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾನೆ.

ಪೊಲೀಸರ ಎರಡು ತಂಡಗಳು ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಹಂತಕನ ಪತ್ತೆಗೆ ಹುಡುಕಾಟ ತೀವ್ರಗೊಳಿಸಿವೆ. ಆರೋಪಿ ಮೊಬೈಲ್‌ ಸ್ವಿಚ್ಡ್ ಆಫ್ ಮಾಡಿಕೊಂಡಿರುವುದರಿಂದ ಆತನ ಲೋಕೇಶನ್‌ ಪತ್ತೆಯಾಗುತ್ತಿಲ್ಲ. ಈಗಾಗಲೇ ಪೊಲೀಸರು ಒಡಿಶಾದಲ್ಲಿನ ಆರೋಪಿಯ ಸಂಬಂಧಿಕರ ಸಂಪರ್ಕಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆರೋಪಿ ಬೇರೆ ಮೊಬೈಲ್‌ ನಂಬರ್‌ ಬಳಸಿ ಕುಟುಂಬದ ಸದಸ್ಯರು ಅಥವಾ ಸ್ನೇಹಿತರನ್ನು ಸಂಪರ್ಕಿಸುವ ಸಾಧ್ಯತೆಯಿದೆ. ಹೀಗಾಗಿ ಪೊಲೀಸರು, ಸ್ನೇಹಿತರು ಹಾಗೂ ಕುಟುಂಬದ ಸದಸ್ಯರಿಗೆ ಬರುವ ಮೊಬೈಲ್‌ ಕರೆಗಳ ಬಗ್ಗೆಯೂ ನಿಗಾವಹಿಸಿದ್ದಾರೆ.

ಪದೇ ಪದೆ ವಾಸ್ತವ್ಯ  ಬದಲಿಸುತ್ತಿರುವ ಹಂತಕ:

ಹಂತಕ ಪದೇ ಪದೆ ತನ್ನ ವಾಸ್ತವ್ಯ ಬದಲಿಸುತ್ತಿರುವುದರಿಂದ ಬಂಧನ ಸ್ವಲ್ಪ ತಡವಾಗುತ್ತಿದ್ದು, ಮಹಾಲಕ್ಷ್ಮೀಗೆ ಆರೇಳು ತಿಂಗಳಿಂದ ಪರಿಚಯವಾಗಿರುವ ಹಂತಕ ಆಕೆ ಜತೆ ಅಕ್ರಮ ಸಂಬಂಧ ಹೊಂದಿದ್ದ. ಇನ್ನು ಮಹಾಲಕ್ಷ್ಮೀ ಮನೆಯ ಗೋಡೆಗಳು ಮತ್ತು ಫ್ರಿಡ್ಜ್ನಲ್ಲಿ ನಾಲ್ಕೈದು ಮಂದಿಯ ಬೆರಳಚ್ಚಿನ ಗುರುತುಗಳು ಪತ್ತೆಯಾಗಿವೆ. ಹೀಗಾಗಿ ಒಬ್ಬನೇ ಕೊಲೆ ಮಾಡಿದ್ದಾನೆಯೇ ಅಥವಾ 3-4 ಮಂದಿ ಕೃತ್ಯ ಎಸಗಿದ್ದಾರೆಯೇ? ಎಂಬುದು ಖಚಿತವಾಗಬೇಕಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

00025

Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್‌ ಲಾರಿ ಹಾಗೂ ಮೃತದೇಹ ಪತ್ತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಭೇಟೆಯಾಡಿದ ಚಿರತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ

siddaramaiah

Siddaramaiah ಬೆಂಬಲಿಸಿ ಅಹಿಂದದಿಂದ ಹುಬ್ಬಳ್ಳಿ-ಬೆಂಗಳೂರು ಜಾಗೃತಿ ಜಾಥಾ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ

Harsha Sai: ಅತ್ಯಾಚಾರ, ವಂಚನೆ ಆರೋಪ; ಖ್ಯಾತ ಯೂಟ್ಯೂಬರ್‌ ಹರ್ಷ ಸಾಯಿ ವಿರುದ್ಧ ದೂರು ದಾಖಲು

Harsha Sai: ಅತ್ಯಾಚಾರ, ವಂಚನೆ ಆರೋಪ; ಖ್ಯಾತ ಯೂಟ್ಯೂಬರ್‌ ಹರ್ಷ ಸಾಯಿ ವಿರುದ್ಧ ದೂರು ದಾಖಲು

“ದೇಶದ ಯಾವುದೇ ಭಾಗವನ್ನು ಪಾಕ್‌ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್‌ ಆದೇಶದಲ್ಲೇನಿದೆ?

“ದೇಶದ ಯಾವುದೇ ಭಾಗವನ್ನು ಪಾಕ್‌ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್‌ ಆದೇಶದಲ್ಲೇನಿದೆ?

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ

Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್‌ ಅಮಾನತು

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

3

Crime: ಬುಲೆಟ್‌ ಖರೀದಿಸಲು ಸಾಧ್ಯವಾಗದ್ದಕ್ಕೆ ಹತಾಶೆ; 3 ಬೈಕ್‌ಗಳಿಗೆ ಬೆಂಕಿ ಹಚ್ಚಿದವ ಸೆರೆ

Lokayukta: 62 ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ

Lokayukta: 62 ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ

1-bng

Bengaluru: ಇಂದಿನಿಂದ ಶಾಲೆಗಳಲ್ಲಿ ವಾರದ 6 ದಿನ ಮೊಟ್ಟೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

12-thirthahalli

ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ; ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು!

00025

Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್‌ ಲಾರಿ ಹಾಗೂ ಮೃತದೇಹ ಪತ್ತೆ

5(1)

Surathkal: ಹೊಸ ಆಕರ್ಷಣೆಗಳಿಲ್ಲದೆ ಸೊರಗುತ್ತಿವೆ ಬೀಚುಗಳು!

eshwarappa

Siddaramaiah ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು; ಅನ್ಯಾಯವಾಗಬಾರದು: ಈಶ್ವರಪ್ಪ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಭೇಟೆಯಾಡಿದ ಚಿರತೆ

Kota: ನೈಲಾಡಿಯಲ್ಲಿ ಹೊಂಚು ಹಾಕಿ ಸಾಕು ನಾಯಿಯನ್ನು ಬೇಟೆಯಾಡಿದ ಚಿರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.