Puttur: ಟ್ರೀ ಪಾರ್ಕ್‌ ನಿರ್ಲಕ್ಷ್ಯಕ್ಕೆ ದುಡ್ಡಿನ ಕೊರತೆ ನೆಪ

ಉದಯವಾಣಿ ಸುದಿನ ವರದಿ ಬಳಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

Team Udayavani, Sep 25, 2024, 2:44 PM IST

3

ಪುತ್ತೂರು: ನಗರದ ಬೀರಮಲೆ ಸಾಲುಮರದ ತಿಮ್ಮಕ್ಕ ಪಾರ್ಕ್‌ ನಿರ್ವಹಣೆಗೆ ಬಿಡಿಗಾಸು ಅನುದಾನ ನೀಡುತ್ತಿಲ್ಲ ಅನ್ನುವ ಕಾರಣ ನೆಪವಾಗಿಟ್ಟುಕೊಂಡು ವೃಕ್ಷೋದ್ಯಾನವನ ಪಾಳು ಬಿದ್ದಿದೆ ಅನ್ನುವ ಅಂಶವೀಗ ಬೆಳಕಿಗೆ ಬಂದಿದೆ.

ಪಾರ್ಕ್‌ ಅವ್ಯವಸ್ಥೆಯ ಬಗ್ಗೆ ಸೆ.24 ರಂದು ಉದಯವಾಣಿ ಸುದಿನ ಪ್ರಕಟಿಸಿದ ಸಮಗ್ರ ವರದಿ ಸಂಚಲನ ಮೂಡಿಸಿದೆ. ಪರಿಸರ ಪ್ರೇಮಿಯೋರ್ವರ ಹೆಸರಿನಲ್ಲಿ ಸ್ಥಾಪಿಸಲಾಗಿರುವ ಪಾರ್ಕ್‌ ನಿರ್ವಹಣೆಗೆ ಅರಣ್ಯ ಇಲಾಖೆ ಕಾಳಜಿ ತೋರದಿರುವ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರು ಅರಣ್ಯ ಇಲಾಖೆಗೆ ಕರೆ ಮಾಡಿ ನಿರ್ವಹಣೆ ಸಾಧ್ಯವಿಲ್ಲದಿದ್ದರೆ ಪಾರ್ಕ್‌ ಹೆಸರು ಬದಲಾಯಿಸುವಂತೆ ಆಗ್ರಹಿಸಿದ್ದಾರೆ.

ನಿರ್ವಹಣೆಗೆ ದುಡ್ಡಿಲ್ಲ
ನಿರ್ವಹಣೆ ವಿಚಾರದಲ್ಲಿ ಅರಣ್ಯ ಇಲಾಖೆಯೊಳಗೆ ಸಮನ್ವಯತೆ ಇಲ್ಲ ಅನ್ನುವ ಆರೋಪವೂ ಕೇಳಿ ಬಂದಿದೆ. ಒಂದು ಮೂಲಗಳ ಮಾಹಿತಿ ಪ್ರಕಾರ ನಿರ್ವಹಣೆಗೆ ದುಡ್ಡು ಬರುತ್ತಿದೆ. ಆದರೆ ಅದನ್ನು ಸಮರ್ಪಕವಾಗಿ ವಿನಿಯೋಗಿಸುತ್ತಿಲ್ಲ. ಅನುದಾನ ದುರ್ಬಳಕೆ ಆಗುತ್ತಿದೆ ಎನ್ನುವ ಆರೋಪ ಕೇಳಿ ಬಂದರೆ, ಇನ್ನೊಂದು ಮೂಲಗಳು ಕಳೆದ ಕೆಲ ವರ್ಷಗಳಿಂದ ನಿರ್ವಹಣೆಗೆ ಸರಕಾರದಿಂದ ದುಡ್ಡು ಬಂದಿಲ್ಲ. ಅನುದಾನ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಬಿಡುಗಡೆಯಾಗಿಲ್ಲ ಎಂಬ ಮಾತು ಕೇಳಿ ಬಂದಿದೆ.

ದುರಸ್ತಿಗೂ ಅನುಮತಿ ಬೇಕಂತೆ..?
ಪಾರ್ಕ್‌ನಲ್ಲಿ ಏಜೆನ್ಸಿ ವತಿಯಿಂದ ಓರ್ವ ಸಿಬಂದಿ, ಅರಣ್ಯ ಇಲಾಖೆಯಿಂದ ಓರ್ವ ಸಿಬಂದಿಯನ್ನು ನಿಯೋಜಿಸಲಾಗಿದೆ. ಈ ಸಿಬಂದಿ ಪ್ರವಾಸಿಗರ ಮೇಲೆ ನಿಗಾ ಇರಿಸುವುದಷ್ಟೇ. ನಿರ್ವಹಣೆ ಜವಾಬ್ದಾರಿ ಯಾರು ಎನ್ನುವ ಬಗ್ಗೆ ಯಾರಲ್ಲೂ ಸ್ಪಷ್ಟ ಮಾಹಿತಿ ಇಲ್ಲ. ವಾಕಿಂಗ್‌ ಪಾಥ್‌ಗೆ ಮರ ಬಿದ್ದು ಸಂಪರ್ಕವೇ ಕಡಿತಗೊಂಡಿದ್ದರೂ ಅರಣ್ಯ ಇಲಾಖೆಯ ಸ್ಥಳೀಯ ಸಿಬಂದಿಗೆ ತೆರವು ಮಾಡುವ ಅಧಿಕಾರ ಇಲ್ಲ. ಮಹಜರು ನಡೆಸಿ ಡಿಎಫ್‌ಒಗೆ ವರದಿ ಸಲ್ಲಿಸಿ ಅಲ್ಲಿಂದ ಅನುಮತಿಗೆ ಕಾಯಬೇಕು. ಇಂತಹ ದುಃಸ್ಥಿತಿಯಿಂದ ದುರಸ್ತಿ ಕಾರ್ಯ ಬೇಗ ಆಗದು ಅನ್ನುವ ಪರಿಸ್ಥಿತ ಇದೆ.

ಸಾಲು ಮರದ ತಿಮ್ಮಕ್ಕ ಪಾರ್ಕ್‌ ದುಸ್ಥಿತಿಯ ಬಗ್ಗೆ ಅರಣ್ಯ ಇಲಾಖೆಯ ಡಿಎಫ್‌ಒ ಅವರ ಬಳಿ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು.
-ಮುಲ್ಲೈ ಮುಗಿಲನ್‌ ಜಿಲ್ಲಾಧಿಕಾರಿ ದ.ಕ.

ಪಾರ್ಕ್‌ ನಿರ್ವಹಣೆ ಸಮಸ್ಯೆಯ ವಿಚಾರ ಗಮನಕ್ಕೆ ಬಂದಿದೆ. ಅನುದಾನ ಕಡಿಮೆ ಇರುವ ಕಾರಣ ಕೆಲಸ ಆಗಿಲ್ಲ. ಬೇರೆ ಮೂಲಗಳನ್ನು ಬಳಸಿಕೊಂಡು ದುರಸ್ತಿಗೆ ಬಗ್ಗೆ ಯೋಜನೆ ರೂಪಿಸಲಾಗುವುದು.
-ಸುಬ್ಬಯ್ಯ ಎಸಿಎಫ್‌,ಪುತ್ತೂರು ಉಪ ವಲಯ ಅರಣ್ಯ ವಿಭಾಗ

ಟ್ರೀ ಪಾರ್ಕ್‌ ನಮ್ಮ ವ್ಯಾಪ್ತಿಗೆ ಬರುತ್ತಿದ್ದು ದುರಸ್ತಿ ನಡೆಸಲು ಅನುದಾನ ಬಂದಿಲ್ಲ. ಪಾರ್ಕ್‌ನ ಸ್ವಂತ ಆದಾಯದಿಂದಲೇ ನಿರ್ವಹಣೆ ಮಾಡಬೇಕು. ಆದರೆ ಅಷ್ಟು ಆದಾಯ ಅಲ್ಲಿ ಸಂಗ್ರಹವಾಗುತ್ತಿಲ್ಲ .ಅಲ್ಲಿನ ಕೆಲವು ಅಗತ್ಯಗಳ ಬಗ್ಗೆ ಪಟ್ಟಿ ಮಾಡಿ ಅನುದಾನ ನೀಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಅನುದಾನ ಬಿಡುಗಡೆಯಾದ ಬಳಿಕ ಕೆಲಸ ಪ್ರಾರಂಭಗೊಳ್ಳಲಿದೆ.
-ಉಲ್ಲಾಸ್‌, ಉಪವಲಯ ಅರಣ್ಯಾಧಿಕಾರಿ

ಟಾಪ್ ನ್ಯೂಸ್

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ

17-v-somanna

Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!

Israel: ಲೈವ್‌ ಸಂದರ್ಶನದ ವೇಳೆಯೇ ಪತ್ರಕರ್ತನ ಮನೆ ಮೇಲೆ ಇಸ್ರೇಲ್‌ ಮಿಸೈಲ್‌ ದಾಳಿ!

High-Court

High Court Order: ಕೋರ್ಟ್‌ ಕಲಾಪ ವೀಡಿಯೋ ಬಳಕೆಗೆ ನಿಷೇಧ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ

Yadgir: ಸಿಎಂ ಸಿದ್ದರಾಮಯ್ಯನವರ ಜೊತೆ ಕರ್ನಾಟಕದ ಜನ‌ ಇದ್ದಾರೆ… ಸಚಿವ ಮಧು ಬಂಗಾರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(2)

Vitla: ಟ್ರಾಫಿಕ್‌ ಜಾಮ್‌ ವಿಟ್ಲ ಪೇಟೆಯಲ್ಲಿ ನಿತ್ಯ ಸಂಕಟ

6-belthanagdy

ಬೆಳ್ತಂಗಡಿ:ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Bantwal: ಮುಂಬಯಿ ಪೊಲೀಸರೆಂದು ಹೇಳಿ ವಂಚನೆ

Bantwal: ಮುಂಬಯಿ ಪೊಲೀಸರೆಂದು ಹೇಳಿ ವಂಚನೆ

sulliaHindu ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

Hindu ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣ ದಾಖಲು; ಸುಳ್ಯದಲ್ಲಿ ಭಾರೀ ಪ್ರತಿಭಟನೆ

Belthangady ಹೃದಯಾಘಾತ: ಶಾಮಿಯಾನ ಉದ್ಯಮಿ ಸಾವು

Belthangady ಹೃದಯಾಘಾತ: ಶಾಮಿಯಾನ ಉದ್ಯಮಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

Kaalapatthar Celebrity Show: ಸೆಲೆಬ್ರೆಟಿ ಶೋನಲ್ಲಿ ಕಾಲಾಪತ್ಥರ್‌

Kaalapatthar Celebrity Show: ಸೆಲೆಬ್ರೆಟಿ ಶೋನಲ್ಲಿ ಕಾಲಾಪತ್ಥರ್‌

15

Container Kannada Movie: ಕಂಟೈನರ್‌ನೊಳಗೆ ಹೊಸಬರ ಕನಸು

14

Life Of Mrudula Kannada Movie: ಮೃದುಲಾಗೆ ಮೆಚ್ಚುಗೆ

Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ

Gopilola Trailer: ನೈಸರ್ಗಿಕ ಕೃಷಿಯತ್ತ ಗೋಪಿಲೋಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.