Chikkamagaluru: ಓವರ್ ಟೇಕ್ ಮಾಡಲು ಹೋಗಿ ಸೇತುವೆಗೆ ಗುದ್ದಿದ ಬಸ್; ವಿದ್ಯಾರ್ಥಿಗಳಿಗೆ ಗಾಯ
Team Udayavani, Sep 25, 2024, 2:41 PM IST
ಚಿಕ್ಕಮಗಳೂರು: ಖಾಸಗಿ ಬಸ್ ವೊಂದು ಓವರ್ ಟೇಕ್ ಮಾಡಲು ಹೋಗಿ ಸೇತುವೆಗೆ ಗುದ್ದಿದ್ದು, ಸ್ವಲ್ಪದರಲ್ಲೇ ಭಾರಿ ಅನಾಹುತ ತಪ್ಪಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ಬಳಿ ಸೆ.25ರ ಬುಧವಾರ ನಡೆದಿದೆ.
ಘಟನೆಯ ಪರಿಣಾಮ ಬಸ್ಸಿನಲ್ಲಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದ್ದು, ಚಾಲಕನ ಅಜಾಗರೂಕತೆ, ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಗಾಯಾಳು ವಿದ್ಯಾರ್ಥಿಗಳಿಗೆ ತರೀಕೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಭದ್ರಾವತಿಯಿಂದ ತರೀಕೆರೆಗೆ ಬರುತ್ತಿದ್ದ ಖಾಸಗಿ ಬಸ್, ಕಿರಿದಾದ ಸೇತುವೆ ಬಳಿ ಮತ್ತೊಂದು ಬಸ್ ಓವರ್ ಟೇಕ್ ಮಾಡಲು ಹೋದಾಗ ಈ ಅನಾಹುತ ಸಂಭವಿಸಿದ್ದು, ಖಾಸಗಿ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ
Crime: ಪತ್ನಿಯ ಶೀಲ ಶಂಕಿಸಿ 5 ವರ್ಷದ ಪುತ್ರಿಯ ಕೊಂದ ತಂದೆ ಬಂಧನ
ಪ್ರಸ್ತುತ ರಾಜಕೀಯ ನಾಯಕರಿಗೆ ಸಮಾಜ ಕಟ್ಟುವ ಕೈಂಕರ್ಯ ಮರೆತಿದೆ: ಹಿರೇಮಗಳೂರು ಕಣ್ಣನ್
Kottigehara: ಮೇಗೂರು ಚಹಾ ತೋಟಕ್ಕೆ ಕಾಡಾನೆ ದಾಳಿ; ಬಾಳೆ, ಕಾಫಿ ಗಿಡಗಳು ಧ್ವಂಸ
Mudigere: ಅಂಗನವಾಡಿ ಟೀಚರ್ ಹುದ್ದೆಗೆ ಕನ್ನಡದ ಜೊತೆ ಉರ್ದು ಭಾಷೆಗೆ ಆದ್ಯತೆ: ಬಿಜೆಪಿ ಕಿಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.