Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ
ಸೆ.29, 30ರಂದು ಬೃಹತ್ ಸಮ್ಮೇಳನ
Team Udayavani, Sep 25, 2024, 3:01 PM IST
ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳ ಮೇಲೆ ಒತ್ತಡ ತರಲು ಅಖಿಲ ಭಾರತ ಕಬ್ಬು ಬೆಳೆಗಾರರ ಸಂಘದ ರಾಷ್ಟ್ರ ಸಮಿತಿ ಆಶ್ರಯದಲ್ಲಿ ಕಲಬುರಗಿಯಲ್ಲಿ ಇದೇ ದಿ.29 ಹಾಗೂ 30 ರಂದು ಬೃಹತ್ ಸಮ್ಮೇಳನವನ್ನು ಆಯೋಜನೆ ಮಾಡಿದೆ.
ಈ ಕುರಿತು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯ ಸಂಚಾಲಕ ಎನ್.ಎಲ್.ಭರತರಾಜ್ ಹೇಳಿಕೆ ನೀಡಿದ್ದು.
ಕೇಂದ್ರ ಮತ್ತು ರಾಜ್ಯ ಸರಕಾರಗಳು ಒಂದು ಟನ್ ಕಬ್ಬಿಗೆ ಐದು ಸಾವಿರ ರೂ. ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹ. ಸಕ್ಕರೆ ಕಾರ್ಖಾನೆಯ ಮಾಲೀಕರ ಲಾಬಿಗೆ ಸರಕಾರಗಳು ಮಣಿದಿವೆ. ಇದರಿಂದ ರೈತರಿಗೆ ನ್ಯಾಯ ಸಿಗುತ್ತಿಲ್ಲ. ಕರ್ನಾಟಕ ರಾಜ್ಯದ ಕೃಷಿ ಬೆಲೆ ಆಯೋಗ ಒಂದು ಟನ್ ಕಬ್ಬು ಬೆಳೆಯಲು 3,580 ರೂ.ವೆಚ್ಚವಾಗುತ್ತದೆ ಎಂದು ವರದಿ ನೀಡಿದೆ ಮತ್ತು ಸಕ್ಕರೆ ನಿರ್ದೇಶಕರ ಮಂಡಳಿಯು ಇದಕ್ಕೆ ಶೇ.10 ಲಾಭಾಂಶ ಸೇರಿಸಿ ಶೇ.9.5 ಇಳುವರಿ ಆಧಾರದ ಮೇಲೆ ಒಂದು ಟನ್ ಕಬ್ಬಿಗೆ 3938 ರೂ.ಗಳನ್ನು ನೀಡಬೇಕೆಂದು ಕೇಂದ್ರ ಸರಕಾರಕ್ಕೆ ವರದಿ ನೀಡಿದೆ.
ಈ ಹಿನ್ನೆಲೆಯಲ್ಲಿ ಎಂ.ಎಸ್.ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ತರಬೇಕೆಂದು ಸಮ್ಮೇಳನದಲ್ಲಿ ಒತ್ತಾಯಿಸಲಾಗುವುದು ಎಂದರು.
ಸಮ್ಮೇಳನದಲ್ಲಿ ಕರ್ನಾಟಕ, ಉತ್ತರ ಪ್ರದೇಶ ಪಂಜಾಬ್, ಹರಿಯಾಣ, ತೆಲಂಗಾಣ, ಆಂದ್ರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ತಮಿಳುನಾಡು ಮೊದಲಾದ ರಾಜ್ಯದಿಂದ ಕಬ್ಬು ಬೆಳೆಗಾರರು ಆಗಮಿಸಲಿದ್ದಾರೆ.
ಸಮ್ಮೇಳನದಲ್ಲಿ ಕಬ್ಬು ಹೋರಾಟಗಾರರ ಮುಂದಿನ ಚಳವಳಿಯ ರೂಪರೇಷೆಯ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: “ದೇಶದ ಯಾವುದೇ ಭಾಗವನ್ನು ಪಾಕ್ ಎಂದು ಕರೆಯಬೇಡಿ: ಸುಪ್ರೀಂಕೋರ್ಟ್ ಆದೇಶದಲ್ಲೇನಿದೆ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ
Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ
Chikkamagaluru: ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವು
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
Panaji: ಇಲೆಕ್ಟ್ರಿಕ್ ಮೀಟರ್ ಕಳ್ಳತನ ಪ್ರಕರಣ; ಆರೋಪಿ ಬಂಧನ
MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.