Shiroor landslide: ಕೊನೆಗೂ 71 ದಿನಗಳ ಬಳಿಕ ಅರ್ಜುನ್ ಲಾರಿ ಹಾಗೂ ಮೃತದೇಹ ಪತ್ತೆ
ಗಂಗಾವಳಿ ನದಿಯಲ್ಲಿ ಗ್ಯಾಸ್ ಟ್ಯಾಂಕರ್ ಸಹಿತ ಕೆಲ ವಾಹನಗಳು ಮುಳುಗಿದ್ದವು.
Team Udayavani, Sep 25, 2024, 3:46 PM IST
ಅಂಕೋಲಾ: ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿ ಎರಡು ತಿಂಗಳು ಕಳೆದಿದ್ದು, ಕೊನೆಗೂ ನಾಪತ್ತೆಯಾಗಿದ್ದ ಕೇರಳದ ಲಾರಿ ಹಾಗೂ ಚಾಲಕ ಅರ್ಜುನ್ ಅವರ ಮೃತದೇಹ ಬುಧವಾರ(ಸೆ.25ರಂದು) ಪತ್ತೆ ಆಗಿದೆ ಎಂದು ವರದಿಯಾಗಿದೆ.
ಕಳೆದ 6 ದಿನಗಳಿಂದ ನಡೆಯುತ್ತಿದ್ದ ಕಾರ್ಯಾಚರಣೆಯ ಮೂಲಕ ಗಂಗಾವಳಿ ನದಿಯಲ್ಲಿ ಮುಳುಗಿದ್ದ ಅರ್ಜುನ್ ಅವರ ಬೆಂಜ್ ಲಾರಿ ಪತ್ತೆಯಾಗಿದ್ದು, ಲಾರಿಯೊಳಗೆ ಅರ್ಜುನ್ ಅವರ ಮೃತದೇಹ ಪತ್ತೆಯಾಗಿದೆ ಎಂದು ಕಾರ್ಯಾಚರಣೆಯ ತಂಡದ ಮೂಲಗಳು ತಿಳಿಸಿವೆ.
ಲಾರಿಯ ಮಾಲೀಕ ಮನಾಫ್ ಅವರು ಇದು ತಮ್ಮದೆ ಲಾರಿಯೆಂದು ಗುರುತಿಸಿದ್ದು, ಲಾರಿಯೊಳಗೆ ಮೃತದೇಹ ಪತ್ತೆಯಾಗಿದೆ. ಇದು ಅರ್ಜುನ್ ಅವರ ಮೃತದೇಹವೆಂದು ಸ್ಪಷ್ಟಪಡಿಸಿರುವುದಾಗಿ ವರದಿ ವಿವರಿಸಿದೆ.
ಇವರ ಜೊತೆ ಸ್ಥಳೀಯ ಜಗನ್ನಾಥ ಮತ್ತು ಲೋಕೇಶ್ ಕಣ್ಮರೆಯಾಗಿದ್ದಾರೆ ಆಗಿದ್ದು ಅವರ ಶೋಧ ಕಾರ್ಯ ಮುಂದುವರೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: Harsha Sai: ಅತ್ಯಾಚಾರ, ವಂಚನೆ ಆರೋಪ; ಖ್ಯಾತ ಯೂಟ್ಯೂಬರ್ ಹರ್ಷ ಸಾಯಿ ವಿರುದ್ಧ ದೂರು ದಾಖಲು
ಬೆಂಜ್ ಲಾರಿಯ ಕ್ಯಾಬಿನ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಲಾರಿಯಲ್ಲಿಯೇ ಅರ್ಜುನ್ ದೇಹ ಸಿಲುಕಿಕೊಂಡಿದ್ದು ದೇಹವು ಸಂಪೂರ್ಣವಾಗಿ ಅಪಚ್ಚಿಯಾಗಿದೆ. ಅರ್ಜುನ್ ದೇಹ ಸಂಪೂರ್ಣ ಹೋಗಿ ಮೂಳೆ ದೊರೆತಿದ್ದು ಆತ ಧರಿಸಿದ ಪ್ಯಾಂಟ್ ಮೂಳೆಗೆ ಸಿಲಿಕಿತ್ತು. ಮೂಳೆಯನ್ನು ಮರಣೋತ್ತರ ಪರೀಕ್ಷೆಗೆ ತಾಲೂಕಾಸ್ಪತ್ರೆಗೆ ಸಾಗಿಸಲಾಗಿದೆ.
ಶಿರೂರು ಗುಡ್ಡ ಕುಸಿತ ದುರಂತದ ಬಳಿಕ ಗಂಗಾವಳಿ ನದಿಯಲ್ಲಿ ಗ್ಯಾಸ್ ಟ್ಯಾಂಕರ್ ಸಹಿತ ಕೆಲ ವಾಹನಗಳು ಮುಳುಗಿದ್ದವು. ಇದರಲ್ಲಿ ಕೆಲ ವಾಹನಗಳ ಅವಶೇಷಗಳು ಪತ್ತೆಯಾಗಿದ್ದವು. ಆದರೆ ಅರ್ಜುನ್ ಹಾಗೂ ಲಾರಿಯ ಸುಳಿವು ಸಿಕ್ಕಿರಲಿಲ್ಲ. ಈ ಕಾರ್ಯಾಚರಣೆಗೆ ಈಶ್ವರ್ ಮಲ್ಪೆ ಸೇರಿದಂತೆ ಹಲವು ತಂಡ ಕಾರ್ಯಾಚರಣೆ ನಡೆಸಿದ್ದವು.
ಕಳೆದ ಆರು ದಿನಗಳಿಂದ ನಾನು ಇಲ್ಲೇ ಇದ್ದು ಕಾರ್ಯಾಚರಣೆ ನೋಡುತ್ತಿದ್ದು, ಚಾಲಕ ಅರ್ಜುನ್ ಅವರು ಮರಳಿ ಬರುವುದಿಲ್ಲ ಎಂಬುವುದು ಗೊತ್ತಿತ್ತು. ಆದರೆ ಕೊನೆಯ ಪಕ್ಷ ಅವಶೇಷವಾದರೂ ದೊರಕಬಹುದು ಎಂಬ ನಿರೀಕ್ಷೆ ನಮ್ಮದಾಗಿತ್ತು. ಅದು ನಿಜವಾಗಿದೆ ಎಂದು ಅವರ ಬಾವ ಜಿತಿನ್ (ಸಹೋದರಿ ಗಂಡ) ಪ್ರತಿಕ್ರಿಯೆ ನೀಡಿದ್ದಾರೆ.
ಅರ್ಜುನ್ ಅವರ ಜತೆ ಮತ್ತೊಬ್ಬರ ಮೃತದೇಹವೂ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಜು.16ರಂದು ಭೀಕರ ಮಳೆಯಿಂದ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಉಂಟಾಗಿ ಒಂದೇ ಕುಟುಂಬದ ಐವರು ಸೇರಿದಂತೆ ಒಟ್ಟು 10 ಮಂದಿ ಮೃತಪಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ
Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ
Chikkamagaluru: ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವು
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
Panaji: ಇಲೆಕ್ಟ್ರಿಕ್ ಮೀಟರ್ ಕಳ್ಳತನ ಪ್ರಕರಣ; ಆರೋಪಿ ಬಂಧನ
MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.