Siddaramaiah ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು; ಅನ್ಯಾಯವಾಗಬಾರದು: ಈಶ್ವರಪ್ಪ
ನ್ಯಾಯಾಂಗ ವ್ಯವಸ್ಥೆ ಗೆ ತಲೆಬಾಗಿ... ನಿಮಗೆ ನ್ಯಾಯ ಸಿಗಲಿ ಅನ್ನುವುದು ನನ್ನ ಬಯಕೆ...
Team Udayavani, Sep 25, 2024, 3:39 PM IST
ಶಿವಮೊಗ್ಗ :”ಸಿದ್ದರಾಮಯ್ಯ ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು.ಆ ತಾಯಿಗೆ ಅನ್ಯಾಯ ಆಗಬಾರದು ಎಂದು ನಾನು ಭಗವಂತನಿಗೆ ಪ್ರಾರ್ಥನೆ ಮಾಡುತ್ತೇನೆ” ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಬುಧವಾರ (ಸೆ25)ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ”ಸಿದ್ದರಾಮಯ್ಯ ಬಗ್ಗೆ ಹೈ ಕೋರ್ಟ್ ನಲ್ಲಿ ತೀರ್ಪು ಬಂದಿದೆ. ಇದು ಮಹತ್ವ ಪಡೆದುಕೊಂಡಿದ್ದು, ಸಿದ್ದರಾಮಯ್ಯ ಬಗ್ಗೆ ವೈಯಕ್ತಿಕವಾಗಿ ನಾನು ಏನೂ ಹೇಳುವುದಿಲ್ಲ. ತೀರ್ಪು ಬರುವ ಮುನ್ನ ನ್ಯಾಯ ಸಿಗುತ್ತದೆ ಎಂದು ಅವರು ಹೇಳುತ್ತಿದ್ದರು. ತೀರ್ಪು ಬಂದ ನಂತರ ತೀರ್ಪಿನ ಬಗ್ಗೆ ಮನ್ನಣೆ ಕೊಡುವುದಿಲ್ಲ ಎನ್ನುತ್ತಿದ್ದಾರೆ. ಕೋರ್ಟ್ ತೀರ್ಪಿಗೆ ಸಿದ್ದರಾಮಯ್ಯ ಬದ್ಧರಾಗುತ್ತಾರೋ ಇಲ್ಲವೋ” ಎಂದು ಪ್ರಶ್ನಿಸಿದರು.
ಸಹಿ ಮಾಡು ಅಂದರೆ ಮನೆಯವರು ಸಹಿ ಮಾಡುತ್ತಾರೆ. ಸಿದ್ದರಾಮಯ್ಯ ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು. ಆ ತಾಯಿಗೆ ಅನ್ಯಾಯ ಆಗಬಾರದು. ಭಗವಂತನ ಧಯೆಯಿಂದ ಸಿದ್ದರಾಮಯ್ಯ ಅವರ ಪರವಾಗಿ ನ್ಯಾಯ ಸಿಗಲಿ” ಎಂದು ಈಶ್ವರಪ್ಪ ಅನುಕಂಪದ ಮಾತಾಡಿದರು.
ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವುದಿಲ್ಲ ಅನ್ನುತ್ತಿದ್ದಾರೆ.ಹಾಗಾದರೆ ಕೋರ್ಟ್ ಮುಚ್ಚಿಬಿಡಿ, ಯಾಕೆ ಬೇಕು ಕೋರ್ಟ್?ಕಾಂಗ್ರೆಸ್ ಪಕ್ಷ ಸರಿಯಾಗಿ ತೀರ್ಮಾನ ತೆಗೆದುಕೊಳ್ಳಬೇಕು. ನಿಮ್ಮ ಪರ ವಾಗಿ ಬಂದರೆ ನ್ಯಾಯ, ನಿಮ್ಮ ವಿರುದ್ಧ ತೀರ್ಪು ಬಂದರೆ ಅನ್ಯಾಯವೇ” ಎಂದು ಪ್ರಶ್ನಿಸಿದರು.
”ಸಿದ್ದರಾಮಯ್ಯ ನವರೇ ನೀವು ಸುಪ್ರೀಂ ಕೋರ್ಟ್ ಗೆ ಹೋಗಿ, ನ್ಯಾಯಾಂಗ ವ್ಯವಸ್ಥೆ ಗೆ ತಲೆಬಾಗಿ. ನಿಮಗೆ ನ್ಯಾಯ ಸಿಗಲಿ ಅನ್ನುವುದು ನನ್ನ ಬಯಕೆ”ಎಂದರು.
ರಾಜೀನಾಮೆ ಗೆ ಕೊಡುವುದಿಲ್ಲ ಅನ್ನುವುದು ಕಾಂಗ್ರೆಸ್ ಪಕ್ಷಕ್ಕೆ ಶೋಭೆ ತರುವುದಿಲ್ಲ. ನಾನು ಮಾತಾನಾಡಲು ನೈತಿಕ ಹಕ್ಕಿದೆ. ಯಡಿಯೂರಪ್ಪ ಮೇಲೆ ಆರೋಪ ಬಂದಮೇಲೆ ತತ್ ಕ್ಷಣ ರಾಜೀನಾಮೆ ಕೊಟ್ಟಿದ್ದರು. ನನ್ನ ಮೇಲೆ ಬಂದ ಆರೋಪದಿಂದ ನಾನು ಕೂಡಲೇ ರಾಜೀನಾಮೆ ನೀಡಿದೆ” ಎಂದರು.
ಸಿದ್ದರಾಮಯ್ಯ ಪ್ರಕರಣವನ್ನ ಇಡೀ ಪ್ರಪಂಚ ನೋಡುತ್ತದೆ. ಹೈಕೋರ್ಟ್ ತೀರ್ಪು ಒಪ್ಪುವುದಿಲ್ಲ ಅನ್ನೋದು ಯಾವ ನ್ಯಾಯ? ಕೋರ್ಟಿನ ತೀರ್ಪು ಯಾರಿದಂಲೂ ಬದಲಾವಣೆ ಮಾಡಲು ಸಾಧ್ಯವಿಲ್ಲ. ಕೈ ಮುಗಿದು ಪ್ರಾರ್ಥನೆ ಮಾಡುತ್ತೇನೆ, ನ್ಯಾಯಾಂಗ ವ್ಯವಸ್ಥೆಗೆ ತಲೆ ಬಾಗಿ. ಕಾನೂನಿನಲ್ಲಿ ಏನೆಲ್ಲಾ ಅವಕಾಶ ಇದೆ ಅದನ್ನು ಮಾಡಿ” ಎಂದರು.
ಬಿಜೆಪಿ ಹಿರಿಯ ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರು ಮನೆಗೆ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿ ”ಅನೇಕ ಸ್ನೇಹಿತರು ನಮ್ಮ ಮನೆಗೆ ಬಂದಿದ್ದರು. ನೂರು ಮಾತಾನಾಡಿದ್ದೇವೆ, ಅದೆಲ್ಲಾ ಹೇಳಲು ಆಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ
Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ
Chikkamagaluru: ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವು
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
Panaji: ಇಲೆಕ್ಟ್ರಿಕ್ ಮೀಟರ್ ಕಳ್ಳತನ ಪ್ರಕರಣ; ಆರೋಪಿ ಬಂಧನ
MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.