Siddaramaiah ವಿರುದ್ಧ ಹರಿಯಾಣದಲ್ಲಿ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ
ಹೈಕಮಾಂಡ್ ಭ್ರಷ್ಟವಾಗಿರುವಾಗ, ಕೆಳಗೆ ಲೂಟಿ ಮಾಡಲು ಮುಕ್ತ ಪರವಾನಗಿ...
Team Udayavani, Sep 25, 2024, 4:20 PM IST
ಸೋನಿಪತ್(ಹರಿಯಾಣ) : ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ(ಸೆ25) ಹರಿಯಾಣ ಚುನಾವಣ ಪ್ರಚಾರ ಸಭೆಯಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ‘ ಸಿದ್ದರಾಮಯ್ಯ ಅವರ ಮೇಲಿನ ಮುಡಾ ಹಗರಣ ಪ್ರಸ್ತಾವಿಸಿ ”ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇದ್ದು ಆಡಳಿತಕ್ಕೆ ಬಂದ ಎರಡೇ ವರ್ಷದೊಳಗೆ ಕರ್ನಾಟಕ ರಾಜ್ಯವನ್ನು ಕುಲಗೆಡಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿಯ ವಿರುದ್ಧ ಭೂ ಹಗರಣದ ಆರೋಪವಿದೆ. ಕರ್ನಾಟಕ ಹೈಕೋರ್ಟ್ ಕಾಂಗ್ರೆಸ್ ಸಿಎಂ ವಿರುದ್ಧ ತನಿಖೆ ನಡೆಸಲು ಆದೇಶ ನೀಡಿದೆ. ದಲಿತರಿಗೆ ಮೀಸಲಾಗಿದ್ದ ಅನುದಾನವನ್ನೂ ಕಾಂಗ್ರೆಸ್ನವರು ದುರ್ಬಳಕೆ ಮಾಡಿಕೊಂಡಿದ್ದಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷದಷ್ಟು ನಂಬಿಕೆದ್ರೋಹದ ಪಕ್ಷ ಇನ್ನೊಂದಿಲ್ಲ” ಎಂದು ಆಕ್ರೋಶ ಹೊರ ಹಾಕಿದ್ದಾರೆ.
”ಕಾಂಗ್ರೆಸ್ನ ರಾಜಮನೆತನವು ದೇಶದ ಅತ್ಯಂತ ಭ್ರಷ್ಟ ಕುಟುಂಬವಾಗಿದ್ದು, ಹೈಕಮಾಂಡ್ ಭ್ರಷ್ಟವಾಗಿರುವಾಗ, ಕೆಳಗೆ ಲೂಟಿ ಮಾಡಲು ಮುಕ್ತ ಪರವಾನಗಿ ಇದೆ” ಎಂದು ಕಿಡಿ ಕಾರಿದರು.
” ಕಾಂಗ್ರೆಸ್ ಯಾವಾಗಲೂ SC/ST/OBC ಭಾಗಿಯಾಗುವುದನ್ನು ವಂಚಿಸುತ್ತಿದೆ. ದಲಿತರಿಗೆ ಮೀಸಲಾತಿ ನೀಡಿದವರು ಬಾಬಾ ಸಾಹೇಬ್ ಅಂಬೇಡ್ಕರ್, ಇಲ್ಲದಿದ್ದರೆ ಒಬಿಸಿಯಂತೆ ದಲಿತರೂ ಮೀಸಲಾತಿಗಾಗಿ ಕಾಂಗ್ರೆಸ್ ಸೋಲನ್ನು ಕಾಯಬೇಕಾಗುತ್ತಿತ್ತು.ಕಾಂಗ್ರೆಸ್ ಸರ್ಕಾರದಿಂದ ದೂರ ಉಳಿದಿದ್ದಾಗಲೆಲ್ಲಾ ಬಡವರು, ಎಸ್ಸಿ/ಎಸ್ಟಿ/ಒಬಿಸಿಗಳು ತಮ್ಮ ಹಕ್ಕುಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್, ಸರ್ಕಾರ ಇದ್ದಾಗಲೆಲ್ಲ ದಲಿತರು ಮತ್ತು ಹಿಂದುಳಿದವರ ಹಕ್ಕುಗಳನ್ನು ಕಿತ್ತುಕೊಂಡಿದೆ” ಎಂದು ಪ್ರಧಾನಿ ಮೋದಿ ಕಿಡಿ ಕಾರಿದರು.
”10 ವರ್ಷಗಳ ಹಿಂದೆ ಹರಿಯಾಣದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯವನ್ನು ಹೇಗೆ ಲೂಟಿ ಮಾಡಲಾಗಿತ್ತು ಎಂಬುದನ್ನು ನೆನಪಿಸಿಕೊಳ್ಳಿ. ಇಲ್ಲಿ ರೈತರ ಜಮೀನುಗಳನ್ನು ಲೂಟಿ ಮಾಡಿ ರಾಜ್ಯವನ್ನು ದಲ್ಲಾಳಿಗಳಿಗೆ ಮತ್ತು ಅಳಿಯಂದಿರಿಗೆ ಹಸ್ತಾಂತರಿಸಲಾಯಿತು’ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.