Kodailbail: ಕೆ.ಎಸ್‌.ರಾವ್‌ ರಸ್ತೆ; ಪಾದಚಾರಿಗಳಿಗಿಲ್ಲ ಸುರಕ್ಷತೆ !

ರಸ್ತೆ ಅಗಲಗೊಂಡರೂ ಹಲವೆಡೆ ಫುಟ್‌ಪಾತ್‌ ಕೊರತೆ

Team Udayavani, Sep 25, 2024, 4:50 PM IST

10

ಕೊಡಿಯಾಲಬೈಲ್‌: ವಾಹನ ದಟ್ಟಣೆ, ಜನಸಂಚಾರ ಹೆಚ್ಚಾಗಿರುವ ನಗರದ ಕೊಡಿಯಾಲಬೈಲ್‌ ಮತ್ತು ಹಂಪನಕಟ್ಟೆ ಸಂಪರ್ಕಿಸುವ ಕಾರ್ನಾಡ್‌ ಸದಾಶಿವ ರಾವ್‌ (ಕೆ.ಎಸ್‌.ರಾವ್‌) ರಸ್ತೆಯ ಅಭಿವೃದ್ಧಿಯಾಗಿದ್ದರೂ ಈ ರಸ್ತೆಯ ಕೆಲವು ಕಡೆ ಫ‌ುಟ್‌ಪಾತ್‌ ಇಲ್ಲದೆ ಪಾದಚಾರಿಗಳು ಸುರಕ್ಷಿತವಾಗಿ ನಡೆದಾಡಲು ಸಾಧ್ಯವಾಗುತ್ತಿಲ್ಲ.

ಮಂಜೇಶ್ವರ ಗೋವಿಂದ ಪೈ ವೃತ್ತದಿಂದ(ನವಭಾರತ ವೃತ್ತ) ಹಂಪನಕಟ್ಟೆ ಜಂಕ್ಷನ್‌ವರೆಗಿನ ಸುಮಾರು ಒಂದು ಕಿ.ಮೀ ಉದ್ದದ ಈ ರಸ್ತೆಯಲ್ಲಿ ಮಾಲ್‌, ಬ್ಯಾಂಕ್‌, ಸಿನೆಮಾ ಮಂದಿರ, ಆಸ್ಪತ್ರೆ ಸೇರಿದಂತೆ ವಾಣಿಜ್ಯ, ಸೇವಾ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿವೆ. ಹಾಗಾಗಿ ಜನರ ಓಡಾಟವೂ ಹೆಚ್ಚು. ಆದರೆ ಈ ರಸ್ತೆಯ ಹಲವೆಡೆ ಫ‌ುಟ್‌ಪಾತ್‌ ಇಲ್ಲದೆ ಪಾದಚಾರಿಗಳು ರಸ್ತೆಯಲ್ಲಿಯೇ ಅಪಾಯಕಾರಿಯಾಗಿ ನಡೆದುಕೊಂಡು ಹೋಗಬೇಕಾಗಿದೆ.

ಮಂಜೇಶ್ವರ ಗೋವಿಂದ ಪೈ ವೃತ್ತದಿಂದ ಹಂಪನಕಟ್ಟೆ ಕಡೆಗೆ ಹೋಗುವಲ್ಲಿ ಬಲಬದಿಯಲ್ಲಿ ಗೋಲ್ಡ್‌ ಪ್ಯಾಲೇಸ್‌ನಿಂದ ಶರವು ಕ್ರಾಸ್‌ ರಸ್ತೆಯವರೆಗೂ ಫ‌ುಟ್‌ಪಾತ್‌ ಇಲ್ಲ. ಇಲ್ಲಿ ಕೆಲವೆಡೆ ಫ‌ುಟ್‌ಪಾತ್‌ಗಾಗಿ ಮೀಸಲಿಟ್ಟ ಸ್ಥಳದಲ್ಲಿಯೇ ವಾಹನಗಳನ್ನು ನಿಲ್ಲಿಸಲಾಗುತ್ತದೆ. ಇನ್ನು ಕೆಲವೆಡೆ ರಸ್ತೆ ಮಾತ್ರವಿದೆ.

ಪಾದಚಾರಿಗಳು ಕೂಡ ರಸ್ತೆಯಲ್ಲಿಯೇ ನಡೆದುಕೊಂಡು ಹೋಗಬೇಕು. ಇದು ಭಾರೀ ವಾಹನ ದಟ್ಟಣೆಯ ರಸ್ತೆಯಾಗಿರುವುದರಿಂದ ಅಪಾಯವೂ ಹೆಚ್ಚು. ಇನ್ನೊಂದು ಬದಿಯಲ್ಲಿ ಗಿರಿಯಾಸ್‌ನಿಂದ ಹಂಪನಕಟ್ಟೆ ಸಿಗ್ನಲ್‌ವರೆಗೆ ಫ‌ುಟ್‌ಪಾತ್‌ ಇಲ್ಲ. ರಸ್ತೆಯ ಅಂಚಿನಲ್ಲೇ ಅಪಾಯಕಾರಿ ನಡಿಗೆ ಅನಿವಾರ್ಯವಾಗಿದೆ. ರಸ್ತೆಯಲ್ಲಿಯೇ ನಡೆದುಕೊಂಡು ಹೋಗುವುದರಿಂದ ಪಾದಚಾರಿಗಳಿಗೆ ವಾಹನಗಳು ಢಿಕ್ಕಿ ಹೊಡೆಯುವ ಅಪಾಯ ಮಾತ್ರವಲ್ಲದೆ, ವಾಹನಗಳ ಸಂಚಾರಕ್ಕೂ ಅಡ್ಡಿಯಾಗುತ್ತಿದೆ.

ಬಸ್‌ ತಂಗುದಾಣ ಬಳಿಯೂ ಇಕ್ಕಟ್ಟು
ಹಂಪನಕಟ್ಟೆ ಕಡೆಯಿಂದ ಪಿವಿಎಸ್‌ ಕಡೆಗೆ ಸಂಚರಿಸುವ ಬಸ್‌ಗಳು ನಿಲುಗಡೆಯಾಗುವ ಕೆ.ಎಸ್‌.ರಾವ್‌ ರಸ್ತೆಯ ಶರವು ಕ್ರಾಸ್‌ ರಸ್ತೆ ಸಮೀಪದ ಬಸ್‌ ತಂಗುದಾಣದ ಬಳಿ ಪಾದಚಾರಿಗಳು ನಡೆದಾಡುವುದಕ್ಕೆ ಭಾರಿ ಪ್ರಯಾಸ ಪಡುವ ಸ್ಥಿತಿ ಇದೆ. ಒಂದೋ ಪಾದಚಾರಿಗಳು ಬಸ್‌ ನಿಲ್ದಾಣದೊಳಗಿಂದ ಪ್ರಯಾಣಿಕರ ನಡುವೆ ನುಸುಳಿಕೊಂಡು ಹೋಗಬೇಕು, ಇಲ್ಲವಾದರೆ ರಸ್ತೆಯ ನಡುವೆ ವಾಹನಗಳ ಮಧ್ಯೆ ಜೀವಭಯದಲ್ಲಿ ನಡೆಯಬೇಕು!.

ಟಾಪ್ ನ್ಯೂಸ್

ಕೃಷಿ ಕಾಯ್ದೆ ಹೇಳಿಕೆ ವಾಪಸ್‌ ಪಡೆದ ಕಂಗನಾ: ಮೋದಿ ಸ್ಪಷ್ಟನೆ ಕೇಳಿದ ರಾಹುಲ್‌

ಕೃಷಿ ಕಾಯ್ದೆ ಹೇಳಿಕೆ ವಾಪಸ್‌ ಪಡೆದ ಕಂಗನಾ: ಮೋದಿ ಸ್ಪಷ್ಟನೆ ಕೇಳಿದ ರಾಹುಲ್‌

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ಉ.ಪ್ರ. ಬಳಿಕ ಹಿಮಾಚಲದಲ್ಲೂ ಹೋಟೆಲ್‌ಗಳಲ್ಲಿ ಮಾಲೀಕರ ಹೆಸರು ಪ್ರದರ್ಶನ ಕಡ್ಡಾಯ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

vijayaendra

MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9(1)

Mangaluru: ಟ್ರಾಫಿಕ್‌ ಸಮಸ್ಯೆ: ಶಾಲಾ ಸಮಯ ವ್ಯತ್ಯಾಸ ಸೂತ್ರ ಮತ್ತೆ ಚರ್ಚೆಗೆ

5(1)

Surathkal: ಹೊಸ ಆಕರ್ಷಣೆಗಳಿಲ್ಲದೆ ಸೊರಗುತ್ತಿವೆ ಬೀಚುಗಳು!

Western Ghats: ಅರಣ್ಯ ನಾಶ ಅಬಾಧಿತ, ತಾಪ ಏರಿಕೆಗೆ ಇಲ್ಲ ಅಂಕುಶ

Western Ghats: ಅರಣ್ಯ ನಾಶ ಅಬಾಧಿತ, ತಾಪ ಏರಿಕೆಗೆ ಇಲ್ಲ ಅಂಕುಶ

ಯುವತಿಯರೊಂದಿಗೆ ಅನುಚಿತ ವರ್ತನೆ: ಯುವಕನ ಶರ್ಟ್‌ ಬಿಚ್ಚಿಸಿ ಪೊಲೀಸರಿಗೊಪ್ಪಿಸಿದರು

ಯುವತಿಯರೊಂದಿಗೆ ಅನುಚಿತ ವರ್ತನೆ: ಯುವಕನ ಶರ್ಟ್‌ ಬಿಚ್ಚಿಸಿ ಪೊಲೀಸರಿಗೊಪ್ಪಿಸಿದರು

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

Rain: ಚುರುಕಾದ ಮುಂಗಾರು; ವಿವಿಧೆಡೆ ಮಳೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಕೃಷಿ ಕಾಯ್ದೆ ಹೇಳಿಕೆ ವಾಪಸ್‌ ಪಡೆದ ಕಂಗನಾ: ಮೋದಿ ಸ್ಪಷ್ಟನೆ ಕೇಳಿದ ರಾಹುಲ್‌

ಕೃಷಿ ಕಾಯ್ದೆ ಹೇಳಿಕೆ ವಾಪಸ್‌ ಪಡೆದ ಕಂಗನಾ: ಮೋದಿ ಸ್ಪಷ್ಟನೆ ಕೇಳಿದ ರಾಹುಲ್‌

death

Mulur: ಮಾನಸಿಕ ಖನ್ನತೆಯಿಂದ ಮನನೊಂದು ಆತ್ಮಹತ್ಯೆ

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ

16

Moodubelle: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.