BBK11: ಈ ಬಾರಿ ಬಿಗ್ ಬಾಸ್ ಸ್ಪರ್ಧಿಗಳ ಆಯ್ಕೆಗೆ ಪ್ರೇಕ್ಷಕರೇ ಪ್ರಭುಗಳು
ವೋಟ್ ಮಾಡಿ ಆಯ್ಕೆ ಮಾಡಿ
Team Udayavani, Sep 25, 2024, 8:41 PM IST
ಬೆಂಗಳೂರು: ಬಿಗ್ ಬಾಸ್ ಕನ್ನಡ -11(Bigg Boss Kannada-11) ಇದೇ ಭಾನುವಾರದಿಂದ (ಸೆ.29ರಿಂದ) ಆರಂಭಗೊಳ್ಳಲಿದೆ.
ಈ ಬಾರಿ ಬಿಗ್ ಬಾಸ್ ಸಖತ್ ಟ್ವಿಸ್ಟ್ ನೊಂದಿಗೆ ಬರಲಿದೆ. ಇದೇ ಮೊದಲ ಬಾರಿಗೆ ಶೋ ಆರಂಭಕ್ಕೂ ಮುನ್ನ ಸ್ಪರ್ಧಿಗಳ ಮುಖ ರಿವೀಲ್ ಆಗಲಿದೆ. ದೊಡ್ಮನೆ ಈ ಬಾರಿ ಸ್ವರ್ಗ – ನರಕ ಎನ್ನುವ ಎರಡು ಭಾಗವಾಗಲಿದೆ. ಕೆಲ ಸ್ಪರ್ಧಿಗಳು ಸ್ವರ್ಗದಲ್ಲಿ ಇನ್ನು ಕೆಲವರು ನರಕದಲ್ಲಿರಲಿದ್ದಾರೆ.
11 ಬಿಗ್ ಬಾಸ್ ನಲ್ಲಿ ಒಂದಲ್ಲ – ಎರಡು ಮನೆ. ಸ್ವರ್ಗ – ನರಕ. ಬಿಗ್ ಬಾಸ್ ಇತಿಹಾಸದಲ್ಲೇ ಪ್ರಪ್ರಥಮ ಬಾರಿ ಅಸಲಿ ಆಟ ನಿಮ್ಮಿಂದ ಶುರುವಾಗುತ್ತಿದೆ. ಮನೆಯೊಳಗೆ ಹೋಗುವ ಸ್ಪರ್ಧಿಗಳ ಹೆಸರನ್ನು ನಾವು ಹೇಳುತ್ತೇವೆ. ಅವರು ಸ್ವರ್ಗಕ್ಕೆ ಹೋಗಬೇಕಾ, ನರಕಕ್ಕೆ ಹೋಗಬೇಕಾ ಅನ್ನೋ ನಿರ್ಧಾರ ನಿಮ್ಮ ಕೈಯಲ್ಲಿದೆ ಎಂದು ಸುದೀಪ್ ಹೇಳುವ ವಿಡಿಯೋವನ್ನು ಕಲರ್ಸ್ ಕನ್ನಡ ಹಂಚಿಕೊಂಡಿದೆ.
ಇದೇ ಶನಿವಾರ(ಸೆ.28 ರಂದು) ರಾಜಾರಾಣಿ ಶೋವಿನ ಫಿನಾಲೆ ನಡೆಯಲಿದೆ. ಈ ಸಂದರ್ಭದಲ್ಲಿ ಬಿಗ್ ಬಾಸ್ 11ರ ಕೆಲ ಸ್ಪರ್ಧಿಗಳ ಹೆಸರು ರಿವೀಲ್ ಆಗಲಿದೆ. ಅಲ್ಲಿ ಪ್ರೇಕ್ಷಕರು ವೋಟ್ ಮಾಡಿ ಯಾರು ಸ್ವರ್ಗಕ್ಕೆ ಹೋಗಬೇಕು, ನರಕಕ್ಕೆ ಹೋಗಬೇಕು ಎನ್ನುವುದನ್ನು ನಿರ್ಧಾರ ಮಾಡಬಹುದಾಗಿದೆ.
ಕಾರ್ಯಕ್ರಮ ಆರಂಭದ ದಿನಾಂಕ ರಿವೀಲ್ ಆದ ಬೆನ್ನಲ್ಲೇ ಸ್ಪರ್ಧಿಗಳ ಹೆಸರು ಕೂಡ ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿ ಹರಿದಾಡುತ್ತಿದೆ.
ಸಂಭಾವ್ಯರ ಪಟ್ಟಿ ಇಲ್ಲಿವೆ:
ಚೈತ್ರಾ ಕುಂದಾಪುರ,ಅವಿನಾಶ್ (ಜೂನಿಯರ್ ದರ್ಶನ್),ಪವಿ ಪಡುಕೋಣೆ,ಕರಣ್ ಕೆಆರ್,ಅನುಷಾ ರೈ,ಕೆಜಿಎಫ್ ಬಾಬು,
ಹುಲಿ ಕಾರ್ತಿಕ್, ಗೌರವ್ ಶೆಟ್ಟಿ, ಮಾನಸ ಸಂತು, ನಟಿ ಪ್ರೇಮಾ, ಹರೀಶ್ ನಾಗರಾಜ್, ಐಶ್ವರ್ಯಾ ರಂಗರಾಜನ್, ಅಮೂಲ್ಯ ಭಾರದ್ವಾಜ್, ಭವ್ಯಾ ಗೌಡ, ದೀಪಕ್ ಗೌಡ, ಅಕ್ಷಯ್ ನಾಯಕ್, ಲೇಖಿ ಗೋಸ್ವಾಮಿ, ರೇಷ್ಮಾ, ಚಂದ್ರಪ್ರಭ, ರಾಘವೇಂದ್ರ, ಜಾಹ್ನವಿ, ಶರ್ಮಿತಾ ಗೌಡ, ನಟ ತ್ರಿವಿಕ್ರಮ್, ನಟಿ ಸುಕೃತಾ ನಾಗ್, ನಟಿ ಗೌತಮಿ ಜಾಧವ್, ಶರತ್ ಕುಮಾರ್ ಹೆಸರು ಸಹ ಬಿಗ್ ಬಾಸ್ ಸ್ಪರ್ಧಿಗಳ ಪಟ್ಟಿಯಲ್ಲಿ ಕೇಳಿ ಬರುತ್ತಿದೆ.
ಇದೇ ಭಾನುವಾರ ಸಂಜೆ 6 ಗಂಟೆಗೆ ಬಿಗ್ ಬಾಸ್ ಗ್ರ್ಯಾಂಡ್ ಪ್ರಿಮಿಯರ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BB18: ಬಿಗ್ಬಾಸ್ ಮನೆಗೆ ಸ್ಪರ್ಧಿಯಾಗಿ ಹೋಗಲಿದ್ದಾರೆ ನಟ ಮಹೇಶ್ ಬಾಬು ಸಂಬಂಧಿ; ಯಾರೀಕೆ?
BBK11: ಸ್ಪರ್ಧಿಗಳ ಆಯ್ಕೆಗೆ ವೋಟಿಂಗ್ To ಫೇಸ್ ರಿವೀಲ್; ಹೇಗಿರಲಿದೆ ಈ ಬಾರಿ ಬಿಗ್ಬಾಸ್?
Bigg Boss Kannada11: ಸ್ವರ್ಗನೂ ಇಲ್ಲೇ, ನರಕನೂ ಇಲ್ಲೇ.. ಬಿಗ್ಬಾಸ್ ಮನೆಯ ಫೋಟೋಸ್ ವೈರಲ್
Bigg Boss 18: ಬಿಗ್ ಬಾಸ್ ಆರಂಭಕ್ಕೆ ಡೇಟ್ ಫಿಕ್ಸ್; ನಿರೂಪಣೆಗೆ ರೆಡಿಯಾದ ಸಲ್ಮಾನ್
BBK11: ಈ ಬಾರಿ ಬಿಗ್ ಬಾಸ್ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ
MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್
MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Manipal: ಬ್ಯಾಂಕ್ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್ ಬಾಯಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.