Container Kannada Movie: ಕಂಟೈನರ್ನೊಳಗೆ ಹೊಸಬರ ಕನಸು
Team Udayavani, Sep 25, 2024, 6:49 PM IST
ವೈದ್ಯಕೀಯ ವಿಷಯಕ್ಕೆ ಸಂಬಂಧಪಟ್ಟ ಕಥೆಯನ್ನಿಟ್ಟು ಕೊಂಡು ತಯಾರಾಗಿರುವ “ಕಂಟೈನರ್’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದ್ದು, ಚಿತ್ರಕ್ಕೆ ಸೆನ್ಸಾರ್ನಿಂದ “ಯು’ ಪ್ರಮಾಣ ಪತ್ರ ಸಿಕ್ಕಿದೆ. ಎಸ್.ನರಸಿಂಹಮೂರ್ತಿ ಈ ಸಿನಿಮಾವನ್ನು ನಿರ್ಮಿಸಿ, ನಿರ್ದೇಶಿಸಿದ್ದಾರೆ.
ಈ ಹಿಂದೆ ಇವರು “ಗರುಡಾಕ್ಷ’ ಎಂಬ ಚಿತ್ರ ನಿರ್ಮಾಣ ಮಾಡಿದ್ದರು. ಇತ್ತೀಚೆಗೆ “ಕಂಟೈನರ್’ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಡಗಿನಲ್ಲಿ ಕಂಟೈನರ್ ಸಾಗಿಸುವಾಗ ಅಚಾತುರ್ಯದಿಂದ ಅದರ ಒಳಗಡೆ ಕಾರ್ಮಿಕನೊಬ್ಬ ಬಂದಿಯಾಗುತ್ತಾನೆ. ಒಂದು ದಿನದಲ್ಲಿ ನಡೆಯುವ ಘಟನೆಯಲ್ಲಿ ಆತ ಹೊರಗೆ ಬರುತ್ತಾನಾ? ಅಲ್ಲೇ ನರಳುತ್ತಾನಾ? ಎಂಬುದನ್ನು ಕುತೂಹಲದೊಂದಿಗೆ ತೋರಿಸಲಾಗಿದೆ ಎನ್ನುವುದು ತಂಡದ ಮಾತು.
ಕಾರ್ಮಿಕನಾಗಿ ದತ್ತಾತ್ರೇಯ ಪೂಜಾರಿ ತೆರಮೇಲೆ ಕಾಣಿಸಿಕೊಂಡಿದ್ದಾರೆ. ಪುಣ್ಯಗೌಡ ನಾಯಕಿ. ಉಳಿದಂತೆ ಮಂಜುನಾಥ್ .ಜಿ, ರಂಗನಾಥ್, ಮಂಜು.ಬಿ.ಕೆ, ಉದಯಕುಮಾರ್ ಮುಂತಾದವರು ನಟಿಸಿದ್ದಾರೆ.
ಅಲಂಕಾರ್ ಸಂಗೀತ, ಶ್ರೀನಿವಾಸ್ ಛಾಯಾಗ್ರಹಣವಿದೆ. ಬೆಂಗಳೂರು, ಮಂಗಳೂರು ತಾಣಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ದಸರಾ ನಂತರ ತೆರೆಗೆ ತರಲು ತಂಡವು ಯೋಜನೆ ರೂಪಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Maski: ಮೂತ್ರ ವಿಸರ್ಜನೆಗೆ ಶಾಲಾ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು
Harry Brook: ಮೊದಲ ಶತಕ, ಮೊದಲ ಜಯ… ಮೂರನೇ ಏಕದಿನ ಇಂಗ್ಲೆಂಡ್ ಪಾಲಿಗೆ
Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ
Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು
Belagavi: ವಿದ್ಯಾರ್ಥಿನಿಯಿಂದ ಹನಿಟ್ರ್ಯಾಪ್; ಯುವಕನಿಂದ ಹಣ ದೋಚಿದ್ದ ಗ್ಯಾಂಗ್ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.