Mulur: ಮಾನಸಿಕ ಖಿನ್ನತೆಯಿಂದ ಮನನೊಂದು ಆತ್ಮಹತ್ಯೆ
Team Udayavani, Sep 25, 2024, 8:51 PM IST
ಕಾಪು: ಖಿನ್ನತೆಗೊಳಗಾಗಿ ಮನನೊಂದಿದ್ದ ಆರ್ಡಿ ಮತ್ತು ಪಿಗ್ಮಿ ಸಂಗ್ರಾಹಕ ಮೂಳೂರು ರಾಜಮನೆ ಕೆ. ಸುಭಾಶ್ಚಂದ್ರ ಮೂಳೂರು (70) ಅವರು ಬುಧವಾರ (ಸೆ. 25) ರಂದು ಮುಂಜಾನೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮೃತರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮನೆಯಲ್ಲಿ ಮಲಗಿದ್ದ ಅವರು ಬುಧವಾರ ಮುಂಜಾನೆ 4 ಗಂಟೆಗೆ ಎಂದಿನಂತೆ ವಾಕಿಂಗ್ಗೆ ತೆರಳಿದ್ದು, ಬೆಳಗ್ಗೆಯಾದರೂ ಮರಳಿ ಮನೆಗೆ ಬಾರದೆ ಇದ್ದುದರಿಂದ ಮನೆಯವರು ವಿವಿಧೆಡೆ ಹುಡುಕಾಡಿದ್ದರು. ಈ ವೇಳೆ ಮೂಳೂರು ಸಂಘದ ಬಳಿಯಲ್ಲಿರುವ ಸಹೋದರನ ಖಾಲಿ ಜಾಗದ ಬಾವಿಯ ಬಳಿ ಅವರ ಚಪ್ಪಲಿಗಳು ಪತ್ತೆಯಾಗಿದ್ದವು. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.
ಬಿಲ್ಲವ ಸಮಾಜದ ಒಂದನೇ ಗುರಿಕಾರರಾಗಿದ್ದ ಅವರು, ರಾಜಮನೆ ಕುಟುಂಬದ ದೈವದ ಆರಾಧಕರಾಗಿದ್ದರು. ಮೂಳೂರು ಬಿಲ್ಲವರ ಸಂಘದ ಅಧ್ಯಕ್ಷರಾಗಿ, ಮೂಳೂರು ಸರ್ವೇಶ್ವರ ಕೊಡಮಣಿತ್ತಾಯ ಬಬ್ಬರ್ಯ ದೈವಸ್ಥಾನದ ಆಡಳಿತ ಮಂಡಳಿ, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.
ಅವರ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಸಹಿತ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಬ್ಯಾಂಕ್ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್ ಬಾಯಲ್
Hebri: ಕುಚ್ಚಾರು, ಮಾತ್ಕಲ್: ಆನೆ ಹಾವಳಿ; ಕೃಷಿಗೆ ಹಾನಿ
Udupi: ವಾರದ 4 ದಿನ ಬಿಸಿಯೂಟದ ಜತೆಗೆ ಪೌಷ್ಟಿಕ ಆಹಾರ: ಅಜೀಂ ಪ್ರೇಮ್ಜಿ ಫೌಂಡೇಷನ್
Brahmavar ಸಕ್ಕರೆ ಕಾರ್ಖಾನೆ ಮಹಾಸಭೆ: ಕೃಷಿ ಉದ್ದಿಮೆ ಸ್ಥಾಪನೆಗೆ ರೈತರ ಆಗ್ರಹ
Theft Case: 2 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Manipal: ಬ್ಯಾಂಕ್ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್ ಬಾಯಲ್
Ajjampura: ಪತ್ನಿಯ ಶೀಲ ಶಂಕಿಸಿ 5 ವರ್ಷದ ಮಗಳನ್ನೇ ಕೊಂದ ತಂದೆ ಬಂಧನ
Belthangady: ಐ.ಡಿ.ಬಿ.ಐ. ಬ್ಯಾಂಕ್ನಿಂದ ಧರ್ಮಸ್ಥಳ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.