Thirthahalli: ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷ!
Team Udayavani, Sep 25, 2024, 9:53 PM IST
ತೀರ್ಥಹಳ್ಳಿ : ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷವಾಗಿದ್ದು ಅದನ್ನು ನೋಡಿದ ಮಕ್ಕಳು ಊಟವನ್ನು ಚೆಲ್ಲಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ಪಟ್ಟಣದ ಜೂನಿಯರ್ ಕಾಲೇಜು ಸಮೀಪದಲ್ಲಿರುವ ಸಮಾಜ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟಡಾ. ಬಿ ಆರ್ ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿ ಪರ ಬಾಲಕರ ವಿದ್ಯಾರ್ಥಿ ನಿಲಯದ ಹಾಸ್ಟೆಲ್ ನಲ್ಲಿ ಬುಧವಾರ ರಾತ್ರಿ ಊಟಕ್ಕೆ ಕುಳಿತ ವಿದ್ಯಾರ್ಥಿಗಳಿಗೆ ಅನ್ನ ಹಾಗೂ ಸಾಂಬಾರ್ ನಲ್ಲಿ ಹುಳ ಕಂಡಿವೆ. ತಕ್ಷಣ ಅಲ್ಲಿನ ವಾರ್ಡನ್ ಬಳಿ ಮಾಹಿತಿ ನೀಡಿ ಊಟವನ್ನು ಮಾಡದೆ 70 ಜನ ಮಕ್ಕಳು ಊಟ ಚೆಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸರ್ಕಾರ ನೀಡಿದ್ದ ಅಕ್ಕಿಯಲ್ಲಿ ಹುಳ ಆಗಿತ್ತಾ? ಅಥವಾ ಅದನ್ನು ಅಡುಗೆ ಮಾಡುವ ಸಂದರ್ಭದಲ್ಲಿ ಅಲ್ಲಿನ ಸಿಬ್ಬಂದಿಗಳು ಗಮನಿಸಲಿಲ್ಲವೇ? ಮಕ್ಕಳ ಬಗ್ಗೆ ಜಾಗ್ರತೆ ವಹಿಸಬೇಕಾದ ಅಲ್ಲಿನ ಸಿಬ್ಬಂದಿಗಳು ನಿರ್ಲಕ್ಷ್ಯತನ ತೋರಿಸಿದ್ದಾರಾ? ಎಂಬ ಅನುಮಾನ ವ್ಯಕ್ತವಾಗಿದೆ.
ನಿನ್ನೆ ಸೊಪ್ಪಿನ ಸಾಂಬಾರ್ ನಲ್ಲೂ ಹುಳ ಇತ್ತು ಎಂದು ಹೇಳಲಾಗುತ್ತಿದ್ದು ಇಂದು ಬೆಂಡೆಕಾಯಿ ಸಾಂಬಾರ್ ನಲ್ಲೂ ಹುಳ ಕಂಡಿದೆ. ಸುಮಾರು 70 ಕ್ಕೂ ಹೆಚ್ಚು ಮಕ್ಕಳು ಬುಧವಾರ ಹಾಸ್ಟೆಲ್ ನಲ್ಲಿ ಇದ್ದು ಮಕ್ಕಳ ಆರೋಗ್ಯವನ್ನು ಲೆಕ್ಕಿಸದೆ ಈ ರೀತಿ ನಿರ್ಲಕ್ಷ್ಯತನ ವಹಿಸಿರುವುದು ಸರಿಯಲ್ಲ ಎಂಬ ಮಾತು ಸಾರ್ವಜನಿಕರಿಂದ ಕೇಳಿಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸಂಬಂಧ ಪಟ್ಟ ಅಧಿಕಾರಿಗಳಾದ ಆಶಾಲತಾರವರು ತಕ್ಷಣ ಸ್ಥಳಕ್ಕೆ ಭೇಟಿ ಮಾಡಿ ಕ್ರಮ ಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಪ್ರಾಯೋಗಿಕ ಸ್ಫೋಟ: ಇಬ್ಬರ ವಿರುದ್ಧ ಎನ್ಐಎ ಚಾರ್ಜ್ಶೀಟ್
ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ; ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು!
Siddaramaiah ಪತ್ನಿ ಮುಗ್ದ, ಸಾತ್ವಿಕ ಹೆಣ್ಣು ಮಗಳು; ಅನ್ಯಾಯವಾಗಬಾರದು: ಈಶ್ವರಪ್ಪ
Thirthahalli: ಶುರುವಾಗಿದೆ ಡಿಜಿಟಲ್ ಮೋಸ!; ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ ನಾಟಕ!
ಈಗಾಗಲೇ ಸಿದ್ದರಾಮಯ್ಯ ರಾಜೀನಾಮೆ ನೀಡಿ ಹೊರ ಬಂದಿದ್ದರೆ ಅವರ ಗೌರವ ಸಹ ಹೆಚ್ಚಾಗುತ್ತಿತ್ತು:ಆರಗ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್ ಪಟ್ಟು, ಪ್ರತಿಭಟನೆ
Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ
MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್
MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.