Belagavi: ವಿದ್ಯಾರ್ಥಿನಿಯಿಂದ ಹನಿಟ್ರ್ಯಾಪ್; ಯುವಕನಿಂದ ಹಣ ದೋಚಿದ್ದ ಗ್ಯಾಂಗ್ ಬಂಧನ
ಶಹಾಪುರ ಠಾಣೆಯಲ್ಲಿ ದೂರು ಸಲ್ಲಿಸಿದ್ದ ಯುವಕ, ಆರೋಪಿಗಳಿಂದ 10 ಲಕ್ಷ ರೂ., 3 ದ್ವಿ ಚಕ್ರ ವಾಹನ ವಶಪಡಿಸಿಕೊಂಡ ಪೊಲೀಸರು
Team Udayavani, Sep 25, 2024, 10:09 PM IST
ಬೆಳಗಾವಿ: ನಗರದಲ್ಲಿ ಹನಿಟ್ರ್ಯಾಪ್ ಮಾಡಿ ಹಣ ದೋಚಿದ್ದ ಗ್ಯಾಂಗ್ ಅನ್ನು ಶಹಾಪುರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು 10 ಲಕ್ಷ ರೂ. ನಗದು ಹಾಗೂ ಮೂರು ದ್ವಿಚಕ್ರ ವಾಹನಗಳ ವಶಪಡಿಸಿಕೊಂಡಿದ್ದಾರೆ.
ಶಹಾಪುರ ಬಸವಣ ಗಲ್ಲಿಯ ವಿದ್ಯಾರ್ಥಿನಿ ದಿವ್ಯಾ (23), ಪ್ರಶಾಂತ ಉರೂಫ್ ಸ್ಪರ್ಶ ಕಲ್ಲಪ್ಪ ಕೋಲಕಾರ(25), ಕಣಬರ್ಗಿ ಜ್ಯೋತಿರ್ಲಿಂಗ ಗಲ್ಲಿಯ ಕುಮಾರ ಉರೂಫ್ ಡಾಲಿ ಅರ್ಜುನ ಗೋಕರಕ್ಕನವರ(29) ಕಣಬರ್ಗಿ ವಾಲ್ಮೀಕಿ ಗಲ್ಲಿಯ ರಾಜು ಸಿದ್ರಾಯಿ ಜಡಗಿ(29) ಎಂಬಾತರ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಘಟನೆ ಹಿನ್ನೆಲೆ:
ಟಿಳಕವಾಡಿಯ ವಿನಾಯಕ ಸುರೇಶ ಕುರಡೇಕರ ಎಂಬ ಯುವಕ ವಿದ್ಯಾರ್ಥಿನಿಯೊಂದಿಗೆ ಭುಜ ಮುಟ್ಟಿದ್ದ ವಿಡಿಯೋ ಇಟ್ಟುಕೊಂಡು ಹನಿಟ್ರ್ಯಾಪ್ ಮಾಡಿದ ವಿದ್ಯಾರ್ಥಿನಿ ಸೇರಿ ನಾಲ್ವರು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಅಪಹರಣ ಮಾಡಿ 25 ಲಕ್ಷ ರೂ. ಬೇಡಿಕೆ ಇಟ್ಟಿದ್ದಾರೆ. 15 ಲಕ್ಷ ರೂ. ಹಣ ಪಡೆದು ಇನ್ನೂ 10 ಲಕ್ಷ ರೂ. ಕೊಡುವಂತೆ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಶಹಾಪುರ ಠಾಣೆಯಲ್ಲಿ ಯುವಕ ದೂರು ನೀಡಿದ್ದಾರೆ.
ಮಾರ್ಕೆಟ್ ಎಸಿಪಿ ಸಂತೋಷ ಸತ್ಯನಾಯಿಕ ಮಾರ್ಗದರ್ಶನದಲ್ಲಿ ಶಹಾಪೂರ ಪೊಲೀಸ್ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಎಸ್.ಎಸ್. ಸಿಮಾನಿ ನೇತೃತ್ವದಲ್ಲಿ ಎಎಸ್ಐಗಳಾದ ಬಿ. ಎ. ಚೌಗಲಾ, ಆರ್.ಐ. ಸನದಿ, ನಾಗರಾಜ ಓಸಪ್ಪಗೋಳ, ಶಿವಶಂಕರ ಗುಡದೈಗೋಳ, ಸಿಬ್ಬಂದಿಗಳಾದ ಶ್ರೀಧರ ತಳವಾರ, ಜಗದೀಶ ಹಾದಿಮನಿ, ಸಂದೀಪ ಬಾಗಡಿ, ಸಿದ್ದರಾಮೇಶ್ವರ ಮುಗಳಖೋಡ, ವಿಜಯ ಕಮತೆ, ಕಾವೇರಿ ಕಾಂಬಳೆ, ಪ್ರತಿಭಾ ಕಾಂಬಳೆ ಕಾರ್ಯಾಚರಣೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
Bailhongal: ಸಾರಿಗೆ ಬಸ್ ಅಪಘಾತ; ನಿರ್ವಾಹಕ ಸೇರಿ 6 ಪ್ರಯಾಣಿಕರಿಗೆ ಗಾಯ
Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ
ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ
Belagavi: ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್ ಪಟ್ಟು, ಪ್ರತಿಭಟನೆ
Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ
MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್
MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.