![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 25, 2024, 11:18 PM IST
ಕಿನ್ನಿಗೋಳಿ: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಏಳಿಂಜೆ ಗ್ರಾಮದ ಪಟ್ಟೆ ಕ್ರಾಸ್ ಬಳಿ ಶಾಂಭವಿ ನದಿಗೆ ಹೋಗುವ ರಸ್ತೆಯಲ್ಲಿ ಮರಳು ತುಂಬಿದ ಲಾರಿಯೊಂದು ಮುಗುಚಿ ಬಿದ್ದಿರುವುದಾಗಿ ಮಾಹಿತಿ ತಿಳಿದು ಮೂಲ್ಕಿ ಪೊಲೀಸರು ಪಟ್ಟೆ ಕ್ರಾಸ್ ಎಂಬಲ್ಲಿಗೆ ತೆರಳಿ ಪರಿಶೀಲಿಸಿದಾಗ ಅಕ್ರಮ ಮರಳು ಸಾಗಾಟ ಬಯಲಿಗೆ ಬಂದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಮರಳು ಸಹಿತ ಕ್ರೇನ್ ಹಾಗೂ ಜೆಸಿಬಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಿನ್ನಿಗೋಳಿ ಸಮೀಪದ ಎಳಿಂಜೆ ಪಟ್ಟೆ ಕ್ರಾಸ್ ನಂದಿನಿ ನದಿ ಬದಿಗೆ ಹಾದು ಹೋಗುವ ಕಚ್ಚಾ ಮಣ್ಣು ರಸ್ತೆಯ ಇಳಿಜಾರು ಪ್ರದೇಶದಲ್ಲಿ ಸುಮಾರು 1 ಟಿಪ್ಪರ್ ಲಾರಿ ಲೋಡಿನಷ್ಟು ಸಾಮಾನ್ಯ ಮರಳು ಬಿದ್ದುಕೊಂಡಿತ್ತು. ಸ್ಥಳದಲ್ಲಿದ್ದ ಕ್ರೇನ್ನ ಆಪರೇಟರ್ ಜಬ್ಬರ್ ಬಳಿ ವಿಚಾರಿಸಿದಾಗ ಮರಳು ತುಂಬಿದ ಟಿಪ್ಪರ್ ರಸ್ತೆ ಬದಿಗೆ ಬಿದ್ದಿದೆ. ಅದನ್ನು ಮೇಲಕ್ಕೆತ್ತಲು ಲಾರಿಯ ಮಾಲಕ ಸುಜಿತ್ ತಿಳಿಸಿದಂತೆ ಬಂದಿದ್ದಾಗಿ ತಿಳಿಸಿದ್ದ.
ಆರೋಪಿ ಸುಜಿತ್ ಮತ್ತು ಅಜಿತ್ ಅವರನ್ನು ವಿಚಾರಿಸಿದಾಗ ತಾವು ಪಕ್ಕದ ನದಿಯಿಂದ ಸಾಮಾನ್ಯ ಮರಳನ್ನು ತೆಗೆದು ಅದನ್ನು ಟಿಪ್ಪರ್ನಲ್ಲಿ ಸಾಗಾಟ ಮಾಡುತ್ತಿದ್ದಾಗ ರಾತ್ರಿ ಹೊತ್ತಿನಲ್ಲಿ ಮಳೆಯ ಕಾರಣ ಟಯರ್ ಕೆಸರಿನಲ್ಲಿ ಹೂತು ಟಿಪ್ಪರ್ ಪಲ್ಟಿಯಾಗಿದ್ದಾಗಿ ಒಪ್ಪಿಕೊಂಡಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.