Government Order: ಪೊಲೀಸರಿಗೆ ಅರ್ಧ ಕೋಟಿ ರೂ. ಜೀವವಿಮೆ! ವಿಮಾ ಮೊತ್ತ ಇಲಾಖೆಯಿಂದಲೇ ಪಾವತಿ
20 ಲಕ್ಷ ದಿಂದ 50 ಲಕ್ಷರೂ.ಗೆ ವಿಮಾ ಮೊತ್ತ ಏರಿಸಿದ ರಾಜ್ಯ ಸರಕಾರ, ಇಲಾಖೆಯ 93,449 ಅಧಿಕಾರಿ, ಸಿಬಂದಿಗೆ ಅನುಕೂಲ
Team Udayavani, Sep 26, 2024, 7:10 AM IST
ಚಿಕ್ಕಬಳ್ಳಾಪುರ: ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಆಕಸ್ಮಿಕವಾಗಿ ಅಪಘಾತಕ್ಕೀಡಾದ ಅಥವಾ ಮೃತಪಡುವ ಆರಕ್ಷಕ ಅಧಿಕಾರಿ, ಸಿಬಂದಿಯ ಕುಟುಂಬಸ್ಥರಿಗೆ ರಾಜ್ಯ ಸರಕಾರ ಜೀವ ವಿಮಾ ಮೊತ್ತವನ್ನು 20 ಲಕ್ಷ ರೂ.ಗಳಿಂದ 50 ಲಕ್ಷ ರೂ.ಗೆ ಏರಿಸುವ ಮಹತ್ವದ ಆದೇಶವನ್ನು ಹೊರಡಿಸಿದೆ.
ಫಾಲೋಯರ್ ಹುದ್ದೆಯಿಂದ ಮಹಾ ನಿರ್ದೇಶಕರ ಹಾಗೂ ಆರಕ್ಷಕ ನಿರೀಕ್ಷಕರ ಹುದ್ದೆವರೆಗೂ ಈ ಜೀವ ವಿಮಾ ಸೌಲಭ್ಯ ಅನ್ವಯ ಆಗಲಿದೆ. ರಾಜ್ಯದಲ್ಲಿ ಒಟ್ಟು 93,449 ಅಧಿಕಾರಿ, ಸಿಬಂದಿಗೆ ಅನ್ವಯವಾಗಲಿದೆ. ಸರಕಾರದ ಒಳಾಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಎನ್. ವನಜಾ ಈ ಮಹತ್ವದ ಆದೇಶ ಹೊರಡಿಸಿದ್ದಾರೆ.
ಇದರ ಮತ್ತೊಂದು ವಿಶೇಷವೆಂದರೆ, ಈ ಯೋಜನೆಯನ್ನು ವಿಮಾ ಕಂಪೆನಿಗೆ ವಹಿಸದೆ ಆಕಸ್ಮಿಕ ಅಥವಾ ಅಪಘಾತದಲ್ಲಿ ಮೃತಪಟ್ಟ ಕರ್ತವ್ಯ ನಿರತ ಪೊಲೀಸ್ ಇಲಾಖೆ ಉದ್ಯೋಗಿಗಳ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕ ಶೀರ್ಷಿಕೆಯಡಿ ಪಾವತಿಸಲು ಸರಕಾರ ಸೂಚಿಸಿದೆ.
ಮನೋಸ್ಥೆರ್ಯ ಹೆಚ್ಚಿಸಲು ಈ ಕ್ರಮ
ಪೊಲೀಸ್ ಅಧಿಕಾರಿ, ಸಿಬಂದಿ ತಮ್ಮ ಪ್ರಾಣದ ಹಂಗು ತೊರೆದು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿರುವುದರಿಂದ ಹಾಗೂ ಕರ್ತವ್ಯ ನಿರತ ಸಿಬಂದಿ/ಅಧಿಕಾರಿಗಳ ಮತ್ತು ಅವರ ಕುಟುಂಬವರ ಏಳಿಗೆಗೆ ಇಲಾಖೆಯು ಮೊದಲ ಆದ್ಯತೆ ನೀಡಬೇಕಿದೆ. ಸಿಬಂದಿ, ಅಧಿಕಾರಿಗಳ ಮತ್ತು ಅವರ ಕುಟುಂಬದವರ ಮನೋಸ್ಥೈರ್ಯವನ್ನು ಹೆಚ್ಚಿಸಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕರ್ತವ್ಯ ನಿರೀಕ್ಷಿಸಬಹುದೆಂದು ಹೇಳಿ ಸರಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. 2023ರ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಗುಂಪು ವಿಮಾ ಮೊತ್ತವನ್ನು ಏರಿಸುವುದಾಗಿ ಘೋಷಿಸಿದ್ದರು.
– ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ
MUDA Scam: ಸಿಎಂ ರಾಜೀನಾಮೆಗೆ ಕೋಳಿವಾಡ ಆಗ್ರಹ; ಕಾಂಗ್ರೆಸ್ ನಾಯಕರ ಭಿನ್ನರಾಗ
Cabinet Decision: ನಿರೀಕ್ಷೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ
MUDA Scam: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು ಬಿಗಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.