Udupi: ವಾರದ 4 ದಿನ ಬಿಸಿಯೂಟದ ಜತೆಗೆ ಪೌಷ್ಟಿಕ ಆಹಾರ: ಅಜೀಂ ಪ್ರೇಮ್ಜಿ ಫೌಂಡೇಷನ್
Team Udayavani, Sep 26, 2024, 12:06 AM IST
ಉಡುಪಿ: ಕೇಂದ್ರ ಪುರಸ್ಕೃತ ಮಧ್ಯಾಹ್ನ ಬಿಸಿಯೂಟ ಯೋಜನೆಯಲ್ಲಿ ರಾಜ್ಯ ಸರಕಾರದ ಅನುದಾನದಿಂದ ವಾರಕ್ಕೆ
2 ದಿನ ಪೂರಕ ಪೌಷ್ಟಿಕ ಆಹಾರವಾಗಿ ಮೊಟ್ಟೆ ಅಥವಾ ಚಿಕ್ಕಿ, ಬಾಳೆಹಣ್ಣು ವಿತರಿಸಲಾಗುತ್ತಿತ್ತು. ಈಗ ಅಜೀಂ ಪ್ರೇಮ್ಜಿ ಫೌಂಡೇಶನ್ ವತಿಯಿಂದ ಉಳಿದ ನಾಲ್ಕು ದಿನಗಳ ಕಾಲ ಹೆಚ್ಚುವರಿಯಾಗಿ ಪೌಷ್ಟಿಕ ಆಹಾರ ನೀಡುವ ಕಾರ್ಯಕ್ರಮಕ್ಕೆ ಬುಧವಾರ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಚಾಲನೆ ನೀಡಿದರು.
ವಿದ್ಯಾರ್ಥಿಗಳು ಭೌತಿಕ ಮತ್ತು ಬೌದ್ಧಿಕವಾಗಿ ಬೆಳವಣಿಗೆ ಹೊಂದಲು ಈ ಯೋಜನೆ ಸಹಕಾರಿಯಾಗಿದ್ದು, ಸರಕಾರ ದೊಂದಿಗೆ ಒಡಂಬಡಿಕೆ ಮಾಡಿಕೊಂಡು ಯೋಜನೆ ಜಾರಿಗೆ ತರಲಾಗಿದೆ.
ವಾರದ ಎಲ್ಲ ದಿನಗಳಲ್ಲೂ ಸರಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ಬೇಯಿಸಿದ ಮೊಟ್ಟೆ ಅಥವಾ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ವಿತರಿಸಲು 1,500 ಕೋ. ರೂ. ಮಿಕ್ಕಿ ಅನುದಾನವನ್ನು ನೀಡಿರುವ ಕ್ರಮ ಶ್ಲಾಘನೀಯ ಎಂದರು.
ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಣಪತಿ ಕೆ., ಬಿಇಒ ಡಾ| ಯಲ್ಲಮ್ಮ, ಪಿಎಂ ಪೋಷಣ್ ಶಕ್ತಿ ನಿರ್ಮಾಣ- ಅಕ್ಷರ ದಾಸೋಹ ಜಿಲ್ಲಾ ಶಿಕ್ಷಣಾಧಿಕಾರಿ ಡಾ| ಅಶೋಕ ಕಾಮತ್, ಡಯಟ್ ಉಪನ್ಯಾಸಕ ಯೋಗ ನರಸಿಂಹಸ್ವಾಮಿ, ತಾಲೂಕು ಸಹಾಯಕ ನಿರ್ದೇಶಕ ವಿವೇಕ್ ಗಾಂವ್ಕರ್, ಕಾಲೇಜಿನ ಪ್ರಾಂಶುಪಾಲ ಲೀಲಾಬಾಯಿ ಭಟ್, ಉಪ ಪ್ರಾಂಶುಪಾಲೆ ಭಾಗೀರಥಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ
Protest: ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರ: ಕಂದಾಯ ಸೇವೆ ವ್ಯತ್ಯಯ
Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್: ಅಬ್ರಹಾಂ
Udupi: ಜೀನ್ ಚಿಕಿತ್ಸೆ, ನಿಖರ ಔಷಧ ಸಮ್ಮೇಳನ: ಡಾ| ಕೃಷ್ಣಪ್ರಸಾದ್ ಕೂಡ್ಲು ಅವರಿಗೆ ಸಮ್ಮಾನ
New Industrial Area Construction: ಭೂ ಸ್ವಾಧೀನ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸೂಚನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.