MUDA Case: ಇಂದು ವಿಧಾನಸೌಧದಲ್ಲಿ ಪ್ರತಿಭಟನೆಗೆ ಬಿಜೆಪಿ ಸಜ್ಜು, ಸಿಎಂ ಮನೆಗೆ ಮುತ್ತಿಗೆ

ಗಾಂಧಿ ಪ್ರತಿಮೆ ಮುಂಭಾಗ ಧರಣಿ, ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ

Team Udayavani, Sep 26, 2024, 7:45 AM IST

BJP-Protset

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷ ನಾಯಕ ಆರ್‌. ಅಶೋಕ್‌ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ 10.30ಕ್ಕೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿ ಬಳಿಕ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಿರ್ಧರಿಸಿದೆ.

ಈ ಬಗ್ಗೆ ವಿಪಕ್ಷ ನಾಯಕ ಆರ್‌. ಅಶೋಕ್‌ ಸುದ್ದಿಗಾರರ ಜತೆಗೆ ಮಾತನಾಡಿ, ಬಿಜೆಪಿಯ ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್‌ ಸದಸ್ಯರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದರು. ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಿ ರಾಜ್ಯಕ್ಕೆ ಮಾದರಿಯಾಗಲಿ. ತಾವು ಸಜ್ಜನ ಎಂದು ಯಾವಾಗಲೂ ಹೇಳಿಕೊಳ್ಳುತ್ತಾರೆ. ಅಂತಹ ಸಜ್ಜನರಾಗುವ ಅವಕಾಶ ಎಂದರೆ ಅದು ರಾಜೀನಾಮೆ. ಹೈಕೋರ್ಟ್‌ ಆದೇಶ ಬಂದಾಗಲೇ ರಾಜೀನಾಮೆ ನೀಡಬೇಕಿತ್ತು ಅಥವಾ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ನೀಡಿದ ಕೂಡಲೇ ರಾಜೀನಾಮೆ ಕೊಡಬೇಕಿತ್ತು. ಎಫ್ಐಆರ್‌ ಆದ ಬಳಿಕ ಪೊಲೀಸರ ಮುಂದೆ ನಿಲ್ಲಲು ಸಿದ್ದರಾಮಯ್ಯಗೆ ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟರು.

ಬಿಜೆಪಿಯಿಂದ ಸದನದಲ್ಲಿ ಈ ಕುರಿತು ಹೋರಾಟ ಮಾಡಿದಾಗ, ಇದು ಬಿಜೆಪಿ ಪ್ರೇರಿತ, ಇದು ಷಡ್ಯಂತ್ರ ಎಂದು ಸಚಿವರು ಆರೋಪ ಮಾಡಿದ್ದರು. ರಾಜಭವನಕ್ಕೆ ಮುತ್ತಿಗೆ ಹಾಕಿದ ಶಾಸಕರು, ಬಾಂಗ್ಲಾ ಮಾದರಿ ಹೋರಾಟ ಮಾಡುತ್ತೇವೆಂದು ಬೆದರಿಕೆ ಹಾಕಿದ್ದರು. ಈಗ ಇದು ತನಿಖೆಗೆ ಸೂಕ್ತ ಎಂದು ನ್ಯಾಯಾಂಗದಿಂದಲೇ ತಿಳಿದುಬಂದಿದೆ. ಅದಕ್ಕೆ ಸ್ಪಷ್ಟವಾದ ಕಾರಣವನ್ನೂ ನ್ಯಾಯಾಲಯ ಹೇಳಿದೆ ಎಂದರು.

ಬೇರೆ ದಾರಿ ಇಲ್ಲ
ಈಗ ಸಿದ್ದರಾಮಯ್ಯನವರಿಗೆ ಬೇರೆ ದಾರಿಯಿಲ್ಲ. ಅವರು ಯಾವುದಕ್ಕೆ ಕಾಯುತ್ತಿದ್ದಾರೆ ಎಂದು ತಿಳಿಯುತ್ತಿಲ್ಲ. ಬಿಜೆಪಿಯವರು ಪ್ರಕರಣ ದಾಖಲಿಸಿಲ್ಲ. ದೂರು ದಾಖಲಿಸಿದ್ದು ಆರ್‌ ಟಿಐ ಕಾರ್ಯಕರ್ತರು ಹಾಗೂ ಹೋರಾಟಗಾರರು. ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆ ಎಂದು ಆಪಾದನೆ ಮಾಡಿದ್ದರು. ಈಗ ನ್ಯಾಯಾಲಯಕ್ಕೆ ಯಾವ ರೀತಿಯ ಆಪಾದನೆ ಮಾಡುತ್ತಾರೆ? ಎಂದು ಅಶೋಕ್‌ ಪ್ರಶ್ನಿಸಿದರು.

ಎರಡೂ ಕೋರ್ಟ್‌ಗಳಲ್ಲಿ ಅವರಿಗೆ ಹಿನ್ನಡೆಯಾಗಿದೆ. ಮೇಲಿನ ಕೋರ್ಟ್‌ಗೆ ಹೋಗುವ ಅವಕಾಶ ಇದ್ದೇ ಇದೆ. ಬಿಜೆಪಿ ಏನೂ ಹೇಳಿಲ್ಲ. ಎಲ್ಲವನ್ನೂ ಕೋರ್ಟ್‌ ಹೇಳಿದೆ. ಲೋಕಾಯುಕ್ತ ತನಿಖೆಗೆ ವಹಿಸಿರುವುದರಿಂದ ಎಫ್ಐಆರ್‌ ಆಗಲಿದೆ. ಲೋಕಾಯುಕ್ತ ಸ್ವತಂತ್ರ ಸಂಸ್ಥೆಯಾದರೂ ಪೊಲೀಸರು, ಪೊಲೀಸ್‌ ಇಲಾಖೆಯಡಿಯಲ್ಲೇ  ಬರುತ್ತಾರೆ. -ಆರ್‌. ಅಶೋಕ್‌, ವಿಪಕ್ಷ ನಾಯಕ

ಟಾಪ್ ನ್ಯೂಸ್

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

CM-vidhna

MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್‌ ನುಡಿ

MUDA Scam: ಸಿಎಂ ರಾಜೀನಾಮೆಗೆ ಕೋಳಿವಾಡ ಆಗ್ರಹ; ಕಾಂಗ್ರೆಸ್‌ ನಾಯಕರ ಭಿನ್ನರಾಗ

western-Ghat

Cabinet Decision: ನಿರೀಕ್ಷೆಯಂತೆ ಕಸ್ತೂರಿ ರಂಗನ್‌ ವರದಿ ತಿರಸ್ಕಾರ

BJp-Protest

MUDA Scam: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು ಬಿಗಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

3-thirthahalli

Thirthahalli: ಹಣ ಇಟ್ಟು ಇಸ್ಪೀಟ್ ಆಡುತ್ತಿದ್ದವರ ಬಂಧನ!

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.