Bengaluru: ದರ್ಶನ್‌ ಆತಿಥ್ಯಕ್ಕೆ ಜೈಲಾಧಿಕಾರಿಗಳಿಗೆ 8 ಲಕ್ಷ ಡೀಲ್‌?

ವಿಲ್ಸನ್‌ಗಾರ್ಡನ್‌ ನಾಗ, ತಂಡದಿಂದ ಲಂಚ? ; ಪೊಲೀಸರ ತನಿಖೆಯಲ್ಲಿ ಬಹಿರಂಗ

Team Udayavani, Sep 26, 2024, 9:15 AM IST

3-bng

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ ಮತ್ತು ಕುಖ್ಯಾತ ರೌಡಿಶೀಟರ್‌ ವಿಲ್ಸನ್‌ ಗಾರ್ಡನ್‌ ನಾಗ ಹಾಗೂ ಇತರರಿಗೆ ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಯೇ ಲಕ್ಷಾಂತರ ರೂ. ಆಸೆಗೆ ವಿಶೇಷ ಆತಿಥ್ಯ ನೀಡಿರುವುದು ಆಗ್ನೇಯ ವಿಭಾಗದ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು, ಸುಮಾರು 6-8 ಲಕ್ಷ ರೂ.ಗೆ ಡೀಲ್‌ ನಡೆದಿತ್ತು ಎಂದು ಹೇಳಲಾಗಿದೆ. ಈ ಸಂಬಂಧ ಈಗಾಗಲೇ ಆಗ್ನೇಯ ವಿಭಾಗದ ಪೊಲೀಸರು ವರದಿ ಸಿದ್ಧಪಡಿಸಿದ್ದು, ಒಂದೆರಡು ದಿನಗಳಲ್ಲೇ ನಗರ ಪೊಲೀಸ್‌ ಆಯುಕ್ತರಿಗೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ತನಿಖೆ ನಡೆಸುತ್ತಿದ್ದ ಆಗ್ನೇಯ ವಿಭಾಗದ ಪೊಲೀಸರ ತನಿಖೆಯಲ್ಲಿ ಈ ಸ್ಫೋಟಕ ಅಂಶಗಳು ಬಹಿರಂಗವಾಗಿದ್ದು, ಜೈಲಿನ ಅಂದಿನ ಮುಖ್ಯ ಅಧೀಕ್ಷಕರಿಂದ ವಾರ್ಡನ್‌ವರೆಗಿನ ಸುಮಾರು 10ಕ್ಕೂ ಅಧಿಕ ಅಧಿಕಾರಿ-ಸಿಬ್ಬಂದಿ ಈ ಡೀಲ್‌ನಲ್ಲಿ ಭಾಗಿಯಾಗಿದ್ದಾರೆ. ಅಲ್ಲದೆ, ಇಡೀ ಡೀಲ್‌ 6-8 ಲಕ್ಷ ರೂ.ನಲ್ಲಿ ನಡೆದಿದ್ದು, ವಿಲ್ಸನ್‌ಗಾರ್ಡನ್‌ ನಾಗ ಮತ್ತು ತಂಡ ಈ ಹಣವನ್ನು ನೀಡಿದೆ ಎಂದು ಮೂಲಗಳು ತಿಳಿಸಿವೆ.

ಪರಪ್ಪನ ಅಗ್ರಹಾರ ಜೈಲಿಗೆ ದರ್ಶನ್‌ ಎಂಟ್ರಿ ಕೊಡುತ್ತಿದ್ದಂತೆ, ವಿಲ್ಸನ್‌ಗಾರ್ಡನ್‌ ನಾಗ ಹಾಗೂ ಇತರೆ ರೌಡಿಶೀಟರ್‌ಗಳ ನಡುವೆ ವಿಶೇಷ ಆತಿಥ್ಯ ನೀಡುವ ಕುರಿತು ಪೈಪೋಟಿ ನಡೆದಿತ್ತು. ಈ ಮಧ್ಯೆ ವಿಲ್ಸನ್‌ಗಾರ್ಡನ್‌ ನಾಗನ ಸಹಚರರು, ದರ್ಶನ್‌ ಬ್ಯಾರಕ್‌ಗೆ ತೆರಳಿ ವಿಶೇಷ ಆತಿಥ್ಯದ ಬಗ್ಗೆ ತಿಳಿಸಿ ಜೈಲಿನ ಆವರಣದಲ್ಲಿ ಟೀ ಜತೆ ಸಿಗರೆಟ್‌ ವ್ಯವಸ್ಥೆ ಮಾಡಿದ್ದರು. ಅದರಂತೆ ದರ್ಶನ್‌ ಆವರಣಕ್ಕೆ ಹೋಗಿ, ನಾಗ, ತನ್ನ ಮ್ಯಾನೇಜರ್‌ ನಾಗರಾಜ್‌, ರೌಡಿ ಕುಳ್ಳ ಸೀನನ ಜತೆ ಕುಳಿತು ಟೀ, ಸಿಗರೆಟ್‌ ಸೇದುತ್ತ ವಿಶೇಷ ಆತಿಥ್ಯ ಸ್ವೀಕರಿಸಿದ್ದಾರೆ. ಆದರೆ, ಆತನಿಗೆ ಡೀಲ್‌ ಬಗ್ಗೆ ಮಾಹಿತಿ ಇಲ್ಲ. ನಾಗನ ಯುವಕರು ಬಂದು ಬಾಸ್‌(ನಾಗ) ಕರೆಯುತ್ತಿದ್ದಾರೆ ಬನ್ನಿ ಎಂದು ಕರೆದರೂ, ಆಗ ವಾರ್ಡನ್‌ಗೆ ತಿಳಿಸಿದಾಗ, ಅವರು ಕೂಡ ಹೋಗುವಂತೆ ಹೇಳಿದರೂ ಹೀಗಾಗಿ ಆವರಣಕ್ಕೆ ಹೋಗಿದ್ದೆ. ಹೆಚ್ಚಿನ ಮಾಹಿತಿ ಇಲ್ಲ ಎಂದಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ವಿಶೇಷ ಆತಿಥ್ಯ ನೀಡಿದ ಸಂಬಂಧ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತೀಮಾ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಇದೀಗ ತನಿಖೆ ಪೂರ್ಣಗೊಳಿಸಿ ಸದ್ಯದಲ್ಲೇ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರಿಗೆ ವರದಿ ಸಲ್ಲಿಸಲಿದೆ ಎಂದು ತಿಳಿದು ಬಂದಿದೆ.

ಏನಿದು ಘಟನೆ? ಕಳೆದ ಆಗಸ್ಟ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನ ಹೈಸೆಕ್ಯೂರಿಟಿ ಬ್ಯಾರಕ್‌ನಲ್ಲಿರುವ ವಿಚಾರಣಾಧೀನ ಕೈದಿಗಳ ಆವರಣದಲ್ಲಿ ನಟ ದರ್ಶನ್‌, ರೌಡಿಶೀಟರ್‌ ವಿಲ್ಸನ್‌ಗಾರ್ಡನ್‌ ನಾಗ, ಕುಳ್ಳ ಸೀನಾ, ದರ್ಶನ್‌ ಮ್ಯಾನೆಜರ್‌ ನಾಗರಾಜ್‌ ಕುರ್ಚಿಯಲ್ಲಿ ಕುಳಿತಿರುವ ಫೋಟೋ ವೈರಲ್‌ ಆಗಿತ್ತು. ಈ ಪೋಟೋದಲ್ಲಿ ದರ್ಶನ್‌ನ ಒಂದು ಕೈಯಲ್ಲಿ ಸಿಗರೆಟ್‌, ಮತ್ತೂಂದು ಕೈಯಲ್ಲಿ ಟೀ ಕಪ್‌ ಇತ್ತು. ಮತ್ತೂಂದೆಡೆ ರೌಡಿಶೀಟರ್‌ ಜನಾರ್ಧನ್‌ ಅಲಿಯಾಸ್‌ ಜಾನಿ ಪುತ್ರ ಸತ್ಯನ ಜತೆ ವಿಡಿಯೋ ಕಾಲ್‌ ಮಾತನಾಡಿದ್ದು, ಆಗಲೂ ರೌಡಿಶೀಟರ್‌ ಧರ್ಮ ಎಂಬಾತ ದರ್ಶನ್‌ಗೆ ವಿಡಿಯೋ ಕರೆ ಮಾಡಿ ಕೊಟ್ಟಿದ್ದ. ಈ ವಿಡಿಯೋ ಕೂಡ ವೈರಲ್‌ ಆಗಿತ್ತು. ಫೋಟೋಗಳು ವೈರಲ್‌ ಆಗುತ್ತಿದ್ದಂತೆ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಯಲ್ಲಿ ದರ್ಶನ್‌ ಮತ್ತು ನಾಗನ ವಿರುದ್ಧ ತಲಾ ಒಂದು ಮತ್ತು ವಿಶೇಷ ಆತಿಥ್ಯ ಸಂಬಂಧ ಜೈಲಿನ ಅಧಿಕಾರಿಗಳ ವಿರುದ್ಧ ಸೇರಿ ಮೂರು ಪ್ರತ್ಯೇಕ ಎಫ್ಐಆರ್‌ಗಳು ದಾಖಲಾಗಿದ್ದವು.

ಟಾಪ್ ನ್ಯೂಸ್

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ

CM-vidhna

MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್‌ ನುಡಿ

Legislative Council Election: ಅಂತಿಮಗೊಳ್ಳದ ಅಭ್ಯರ್ಥಿಗಳು

Legislative Council Election: ಅಂತಿಮಗೊಳ್ಳದ ಅಭ್ಯರ್ಥಿಗಳು

MUDA Scam: ಸಿಎಂ ರಾಜೀನಾಮೆಗೆ ಕೋಳಿವಾಡ ಆಗ್ರಹ; ಕಾಂಗ್ರೆಸ್‌ ನಾಯಕರ ಭಿನ್ನರಾಗ

western-Ghat

Cabinet Decision: ನಿರೀಕ್ಷೆಯಂತೆ ಕಸ್ತೂರಿ ರಂಗನ್‌ ವರದಿ ತಿರಸ್ಕಾರ

Puttur: ಸಾಲ ವಸೂಲಾತಿಗೆ ತೆರಳಿದ್ದ ಬ್ಯಾಂಕ್‌ ಸಿಬಂದಿಗೆ ಪಿಸ್ತೂಲ್‌ ತೋರಿಸಿ ಬೆದರಿಕೆ

Puttur: ಸಾಲ ವಸೂಲಾತಿಗೆ ತೆರಳಿದ್ದ ಬ್ಯಾಂಕ್‌ ಸಿಬಂದಿಗೆ ಪಿಸ್ತೂಲ್‌ ತೋರಿಸಿ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Milk

Incentive money: ಪ್ರತೀ ಲೀಟರ್‌ ಹಾಲಿಗೆ 10 ರೂ. ಪ್ರೋತ್ಸಾಹ ಧನ!

Bengaluru: ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಓಡಾಡುತ್ತಿದ್ದ ಚಿರತೆ ಸೆರೆ!

Bengaluru: ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ಓಡಾಡುತ್ತಿದ್ದ ಚಿರತೆ ಸೆರೆ!

6

Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್‌ ಅಮಾನತು

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ

CM-vidhna

MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್‌ ನುಡಿ

manjunath bhandari

CM ಸಿದ್ದರಾಮಯ್ಯ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ:ಮಂಜುನಾಥ ಭಂಡಾರಿ

Legislative Council Election: ಅಂತಿಮಗೊಳ್ಳದ ಅಭ್ಯರ್ಥಿಗಳು

Legislative Council Election: ಅಂತಿಮಗೊಳ್ಳದ ಅಭ್ಯರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.