IPL Auction: ಐವರು ಆಟಗಾರರ ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ? ಇಲ್ಲಿದೆ ಹರಾಜು ವಿವರ


Team Udayavani, Sep 26, 2024, 10:23 AM IST

IPL Auction: ಐವರು ಆಟಗಾರರ ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ?

ನವದೆಹಲಿ: ಈ ಬಾರಿ ಐಪಿಎಲ್‌ ಹರಾಜಿನ (IPL Auction) ವೇಳೆ ಫ್ರಾಂಚೈಸಿಗಳಿಗೆ ಐವರು ಆಟಗಾರರನ್ನು ಉಳಿಸಿಕೊಳ್ಳಲು ಬಿಸಿಸಿಐ (BCCI) ಅವಕಾಶ ನೀಡುವ ಸಾಧ್ಯತೆಯಿದೆ. ಇದೇ ವೇಳೆ ಆರ್‌ಟಿಎಮ್‌ (Right To Match Card) ಆಯ್ಕೆಯನ್ನು ರದ್ದು ಮಾಡಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಒಂದು ವೇಳೆ ಇದು ಸಾಧ್ಯವಾದರೆ ಆರ್‌ಸಿಬಿ ಸೇರಿದಂತೆ ಪ್ರಮುಖ ಫ್ರಾಂಚೈಸಿಗಳಿಗೆ ತಮ್ಮ ತಾರೆಯರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ. ಮುಖ್ಯವಾಗಿ ಚೆನ್ನೈ ಕಿಂಗ್ಸ್‌, ಮುಂಬೈ ಇಂಡಿಯನ್ಸ್‌ ನಂತಹ ತಂಡಗಳಿಗೆ ಭಾರೀ ಅನುಕೂಲವಾಗಲಿದೆ.

ಚೆನ್ನೈ ತನ್ನ ಖ್ಯಾತ ಆಟಗಾರ ಎಂ.ಎಸ್‌.ಧೋನಿಯನ್ನು ಉಳಿಸಿಕೊಳ್ಳಲು ಹೋರಾಡುತ್ತಿದೆ. ಈ ಹಿಂದಿನಂತೆ ನಾಲ್ವರನ್ನು ಮಾತ್ರ ಉಳಿಸಿಕೊಳ್ಳಲು ಅವಕಾಶ ನೀಡಿದ್ದರೆ ಚೆನ್ನೈಗೆ ಅದು ಕಷ್ಟವಾಗುತ್ತಿತ್ತು. ಇನ್ನು ಮುಂಬೈಗೆ ತನ್ನ ತಾರಾ ಆಟಗಾರರಾದ ಹಾರ್ದಿಕ್‌ ಪಾಂಡ್ಯ, ರೋಹಿತ್‌ ಶರ್ಮಾ, ಜಸ್‌ಪ್ರೀತ್‌ ಬುಮ್ರಾ, ಸೂರ್ಯಕುಮಾರ್‌ ಯಾದವ್‌ರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿದೆ.

ಇತ್ತೀಚೆಗೆ ನಡೆದ ಐಪಿಎಲ್‌ ಫ್ರಾಂಚೈಸಿಗಳೊಂದಿಗಿನ ಬಿಸಿಸಿಐ ಸಭೆಯಲ್ಲಿ, ಹಲವು ಫ್ರಾಂಚೈಸಿಗಳು ಕನಿಷ್ಠ 5ರಿಂದ 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿ ಎಂದು ವಿನಂತಿಸಿದ್ದವು. ಅದಕ್ಕೆ ಬಿಸಿಸಿಐ ಸಮ್ಮತಿಸಿದೆ ಎನ್ನಲಾಗಿದೆ. ಈ ವರ್ಷ ನವೆಂಬರ್‌ನಲ್ಲಿ ಐಪಿಎಲ್‌ ಹರಾಜು ನಡೆಯಲಿದೆ.

ಲಾಭವೇನು?: ಕನಿಷ್ಠ ಐವರನ್ನು ಉಳಿಸಿಕೊಳ್ಳುವುದರಿಂದ ಫ್ರಾಂಚೈಸಿಗಳು ತಮ್ಮ ತಾರಾ ಆಟಗಾರರನ್ನು ಉಳಿಸಿಕೊಳ್ಳಬಹುದು. ಹಾಗೆಯೇ ತಮ್ಮ ಬ್ರಾಂಡ್‌ ಮೌಲ್ಯವನ್ನೂ ಕಾಪಾಡಿಕೊಳ್ಳಬಹುದು ಎಂದು ಬಿಸಿಸಿಐ ಚಿಂತಿಸಿದೆ ಎನ್ನಲಾಗಿದೆ.

ಮುಂಚೆ ಹೇಗಿತ್ತು?: 2022 ಐಪಿಎಲ್‌ ಋತುವಿನಿಂದಲೇ ಫ್ರಾಂಚೈಸಿಗಳು ನಾಲ್ವರನ್ನು ಉಳಿಸಿಕೊಳ್ಳಲು ಅವಕಾಶವಿತ್ತು. ಈ ಪೈಕಿ ಗರಿಷ್ಠ ಮೂವರು ಭಾರತೀಯರನ್ನು ಉಳಿಸಿಕೊಳ್ಳಬಹುದಿತ್ತು. ಗರಿಷ್ಠವೆಂದರೆ ಇಬ್ಬರು ವಿದೇಶಿ ಆಟಗಾರರನ್ನು ಉಳಿಸಿಕೊಳ್ಳಲು ಸಾಧ್ಯವಿತ್ತು. ಆ ಹೊತ್ತಿಗೆ ಆರ್‌ಟಿಎಂ ಅವಕಾಶವನ್ನು ರದ್ದು ಮಾಡಲಾಗಿತ್ತು. ಈ ಬಾರಿಯೂ ಅದನ್ನು ಮರುಸ್ಥಾಪಿಸುವ ಸಾಧ್ಯತೆಯಿಲ್ಲ.

ಟಾಪ್ ನ್ಯೂಸ್

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

online

400 crores ಆನ್‌ಲೈನ್‌ ಗೇಮಿಂಗ್‌ ಆ್ಯಪ್‌ ವಂಚನೆ ಪತ್ತೆ

robbers

Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

1-asddsad

NADA; ನೋಟಿಸ್‌ ನೀಡಿದರೂ ವಿನೇಶ್‌ ಫೋಗಾಟ್‌ ವಿರುದ್ಧ ಕ್ರಮವಿಲ್ಲ?

1-sadasd

Under 19 ಕ್ರಿಕೆಟ್‌; 3ನೇ ಪಂದ್ಯ: ಭಾರತಕ್ಕೆ ಜಯ

1-SL

Test; ದಿನೇಶ್‌ ಚಂಡಿಮಾಲ್‌ ಆಕರ್ಷಕ ಶತಕ :ಉತ್ತಮ ಸ್ಥಿತಿಯಲ್ಲಿ ಶ್ರೀಲಂಕಾ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

1-ttt

Karnataka; ರಾಜ್ಯ ಟೆನಿಸ್‌ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

1-team

Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್‌  ಇಂದಿನಿಂದ

MONEY (2)

Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.