Hebri: ಈಜುತ್ತಾ ಹೊಳೆ ದಾಟಿ ವಿದ್ಯುತ್ ಸಂಪರ್ಕ ನೀಡಿದ ಮೆಸ್ಕಾಂ ಸಿಬ್ಬಂದಿಗೆ ಮೆಚ್ಚುಗೆ
Team Udayavani, Sep 26, 2024, 11:08 AM IST
ಹೆಬ್ರಿ: ಹೊಳೆಯಲ್ಲಿ ಸುಮಾರು 70 ಅಡಿ ದೂರದವರಗೆ ಈಜಾಡುತ್ತಾ ತುಂಡಾದ ವಿದ್ಯುತ್ ತಂತಿಯನ್ನು ದುರಸ್ತಿಗೊಳಿಸಿ ಮನೆಗೆ ವಿದ್ಯುತ್ ಸಂಪರ್ಕ ನೀಡಿದ ಹೆಬ್ರಿ ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಶಿವಪುರ ಗ್ರಾಮದ ಉಪ್ಪಳ ಮೂರು ಸಾಲು ಹೊಳೆಯ ಮಧ್ಯದಲ್ಲಿ ಹಾದುಹೋದ ವಿದ್ಯುತ್ ತಂತಿ ತುಂಡಾಗಿ ಹಲವಾರು ದಿನಗಳು ಕಳೆದಿತ್ತು. ವಿಪರೀತ ಮಳೆಯಿರುವ ಕಾರಣ ದುರಸ್ತಿ ಮಾಡಲಾಗದೆ ಹಾಗೆ ಉಳಿದಿತ್ತು.
ಈ ಪರಿಸರದ ಜನ ವಿದ್ಯುತ್ ಮೋಟರ್ ಗಳನ್ನು ಬಳಸಲಾಗದೆ ಸಮಸ್ಯೆಯನ್ನು ಎದುರಿಸುತ್ತಿದ್ದರು. ಈ ವಿಷಯ ತಿಳಿದ ದಾವಣಗೆರೆ ಚೆನ್ನಗಿರಿ ಮೂಲದ ಹೆಬ್ರಿ ಮೆಸ್ಕಾಂ ಸಿಬ್ಬಂದಿ ಪ್ರಮೋದ್ ಹಾಗೂ ಅರೆಕಾಲಿಕ ಸಿಬ್ಬಂದಿ ಸುಧೀರ್ ಸಹಾಯದೊಂದಿಗೆ ಕೇವಲ ಇಬ್ಬರೇ ತೆರಳಿ ಸಮಸ್ಯೆ ಬಗೆಹರಿಸಿರುವ ಬಗ್ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ವಿದ್ಯುತ್ ತಂತಿಯ ಒಂದು ತುದಿಗೆ ಹಗ್ಗವನ್ನು ಕಟ್ಟಿ ಸುಮಾರು 70 ಅಡಿ ದೂರಕ್ಕೆ ಈಜಾಡಿಕೊಂಡು ಹೋಗಿ ತುಂಡಾಗಿದ್ದ ವಿದ್ಯುತ್ ತಂತಿಯನ್ನು ದುರಸ್ತಿಪಡಿಸಿ ಪರಿಸರದ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ನೀಡಿದ್ದಾರೆ.
ಪ್ರಮೋದ್ ಅವರು ಕಳೆದ 2 ವರ್ಷದ ಹಿಂದೆ ಹೆಬ್ರಿ ಮೆಸ್ಕಾಂ ಗೆ ಸಿಬ್ಬಂದಿಯಾಗಿ ನೇಮಕಾತಿಗೊಂಡಿದ್ದು ಮೊದಲಿಂದಲೇ ಈಜನ್ನು ಕರಗತ ಮಾಡಿಕೊಂಡಿದ್ದರು.
View this post on Instagram
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.