Hubli: ಗೌರವ ಉಳಿಯಬೇಕೆಂದರೆ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು: ಬಸವರಾಜ ಬೊಮ್ಮಾಯಿ


Team Udayavani, Sep 26, 2024, 1:18 PM IST

Hubli: Siddaramaiah must resign if respect remains: Basavaraja Bommai

ಹುಬ್ಬಳ್ಳಿ: ತಮಗಿರುವ ಗೌರವ ಉಳಿಯಬೇಕೆಂದರೆ ಸಿಎಂ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಂಸದ, ಮಾಜಿ‌ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ಕರ್ನಾಟಕ ರಾಜಕಾರಣದಲ್ಲಿ ಅವರದ್ದೇ ಆದ ಗುರುತಿದೆ.‌ ತಮ್ಮದೇ ಜನಾಭಿಪ್ರಾಯ ಇದೆ.‌ ಅದನ್ನು ಉಳಿಸಿಕೊಂಡು ಹೋಗಬೇಕಾದರೆ ನೈತಿಕತೆಯ ಮೇಲ್ಪಂಕ್ತಿ ಮೆರೆಯಬೇಕು. ಎಲ್ಲರಂತೆ ಉದಾಹರಣೆ ಕೊಟ್ಟರೆ ಇವರೂ ಅವರ ಸಾಲಿಗೆ ಸೇರುತ್ತಾರೆ ಎಂದರು.

ಸಿದ್ದರಾಮಯ್ಯರ ವಿರುದ್ಧ ದೂರು ಕೊಟ್ಟಿದ್ದಾರೆ. ರಾಜ್ಯಪಾಲರು ಆದೇಶ ಕೊಟ್ಟ ನಂತರ ಹೈಕೋರ್ಟ್ ಹಾಗೂ ಸೆಷನ್ ಕೋರ್ಟ್ ಆದೇಶ ಕೊಟ್ಟಿದೆ. ಪ್ರತಿ ಹಂತದಲ್ಲೂ ಕೇಸ್ ಇನ್ನಷ್ಟು ಬಿಗಿಗೊಳ್ಳುತ್ತಿದೆ. ಮುಂದೆ ಚಿಂತನೆ ಮಾಡುವ ಅವಶ್ಯಕತೆ ಇದೆ. ಕೋರ್ಟ್‌ನಲ್ಲಿ ಹೋರಾಟ ಮಾಡುವುದಕ್ಕೆ ಯಾರಿಗಾದರೂ ಅವಕಾಶವಿದೆ. ಆದರೆ ಸಾರ್ವಜನಿಕವಾಗಿ ಅವರ ಮೇಲಿರುವ ವಿಶ್ವಾಸ ಉಳಿಸಿಕೊಳ್ಳಬೇಕು. ಅದನ್ನು ಉಳಿಸಿಕೊಂಡು ಹೋಗುತ್ತಾರೆ ಎನ್ನುವ ವಿಶ್ವಾಸವಿದೆ ಎಂದರು.

ವಾಲ್ಮೀಕಿ ಹಗರಣ ಈಗಾಗಲೇ ಒಂದು ಹಂತ ತಲುಪಿದೆ. ಎಸ್‌ಐಟಿಯಲ್ಲಿ ಮಂತ್ರಿಗಳು, ಅಧ್ಯಕ್ಷರ ಹೆಸರಿಲ್ಲದೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಅವಾಗಲೇ ಮುಚ್ಚಿ ಹಾಕುವ ಪ್ರಯತ್ನ ಮಾಡಿದರು. ಆದರೆ ಸಿಬಿಐ, ಇಡಿಯಲ್ಲಿ ತನಿಖೆ ಮಾಡುತ್ತಿರುವುದರಿಂದ ಅವರು ಚಾರ್ಜ್‌ಶೀಟ್ ಹಾಕಿದ್ದಾರೆ. ಕ್ರಮ ಕೈಗೊಳ್ಳುವುದು ಅನಿವಾರ್ಯ. ತಪ್ಪು ಆದಲ್ಲಿ ವಿರೋಧ ಪಕ್ಷವಾಗಿ ಹೋರಾಟ ಮಾಡುವ ಅವಶ್ಯಕತೆ ಇದೆ ಎಂದರು.

ಅಹಿಂದ ಬೆಂಗಳೂರು ಚಲೋ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ಅದರ ಬಗ್ಗೆ ನಾನು ಏನು ಹೇಳಿಕೆ ನೀಡಲ್ಲ. ಆದರೆ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ಹೋರಾಟ ಮುಂದುವರಿಯಲಿದೆ ಎಂದರು.

ಬಿಜೆಪಿಗೆ ಯಾವ ನೈತಿಕತೆ ಇದೆ ಅನ್ನುವ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಯಾರ ಮೇಲೆ ಆರೋಪವಿದೆ, ಇಲ್ಲಾ ಅನ್ನುವ ಪ್ರಶ್ನೆಯಲ್ಲ. ಈಗ ಸಿಎಂ ಸಿದ್ದರಾಮಯ್ಯ ಅವರ ಪ್ರಶ್ನೆ ಬಂದಿದೆ. ಹಿಂದೆ ಅವರು ವಿಪಕ್ಷದಲ್ಲಿದ್ದಾಗ ಎಲ್ಲರ ನೈತಿಕತೆ ಪ್ರಶ್ನೆ ಮಾಡುತ್ತಿದ್ದರು. ಈಗ ಅವರು ಮುಖ್ಯಮಂತ್ರಿ ಆಗಿದ್ದಾರೆ. ಅವರೇ ನೈತಿಕತೆ ಪ್ರಶ್ನೆ ಮಾಡಿಕೊಳ್ಳಬೇಕು.  ಅದಕ್ಕೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು.

ಶೀಘ್ರವೇ ಶಿಗ್ಗಾವಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡುತ್ತೇವೆ: ಅಭ್ಯರ್ಥಿ ಆಯ್ಕೆ ಬಗ್ಗೆ ಈಗಾಗಲೇ ಎರಡು ಸಭೆಗಳನ್ನು ಮಾಡಲಾಗಿದೆ. ಹಲವು ಆಕಾಂಕ್ಷಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಿಗ್ಗಾವಿ ಕ್ಷೇತ್ರಕ್ಕೆ ಅಚ್ಚರಿ ಅಭ್ಯರ್ಥಿ ಹಾಗೂ ಮುರುಗೇಶ ನಿರಾಣಿ ಸೇರಿ ಹಲವರಿಂದ ಟಿಕೆಟ್ ಲಾಬಿ ಕುರಿತು ಪ್ರತಿಕ್ರಿಯಿಸಿದ ಅವರು, ಕಳೆದ ಹತ್ತು ದಿನಗಳಿಂದ ನಾನು ಊರಲ್ಲಿ ಇರಲಿಲ್ಲ. ಹೀಗಾಗಿ ಏನು ಬೆಳವಣಿಗೆ ಆಗಿದೆಯೋ ಗೊತ್ತಿಲ್ಲ. ಆದಷ್ಟು ಬೇಗ ಅಭ್ಯರ್ಥಿ ಅಂತಿಮಗೊಳಿಸಲಾಗುವುದು ಎಂದರು.

ಟಾಪ್ ನ್ಯೂಸ್

K. Lakshminarayanan: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

CM-vidhna

MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್‌ ನುಡಿ

MUDA Scam: ಸಿಎಂ ರಾಜೀನಾಮೆಗೆ ಕೋಳಿವಾಡ ಆಗ್ರಹ; ಕಾಂಗ್ರೆಸ್‌ ನಾಯಕರ ಭಿನ್ನರಾಗ

western-Ghat

Cabinet Decision: ನಿರೀಕ್ಷೆಯಂತೆ ಕಸ್ತೂರಿ ರಂಗನ್‌ ವರದಿ ತಿರಸ್ಕಾರ

BJp-Protest

MUDA Scam: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು ಬಿಗಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

K. Lakshminarayanan: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.