Chikkamagaluru:ಅನಾರೋಗ್ಯ ಪೀಡಿತ ವೃದ್ಧೆಯನ್ನು 3 ಕಿ.ಮೀ. ಹೊತ್ತುಕೊಂಡು ಸಾಗಿದ ಗ್ರಾಮಸ್ಥರು
10ಕ್ಕೂ ಹೆಚ್ಚು ಹಳ್ಳಿಗೆ ರಸ್ತೆ ಇಲ್ಲ
Team Udayavani, Sep 26, 2024, 1:04 PM IST
ಚಿಕ್ಕಮಗಳೂರು: ಅನಾರೋಗ್ಯದ ವೃದ್ಧೆಯೊಬ್ಬರನ್ನು 3 ಕಿ.ಮೀ. ವರೆಗೂ ರಸ್ತೆ ಇಲ್ಲದೆ ಮಲೆನಾಡಿನ ಹಳ್ಳಿಯವರು ತೂಗು ಸೇತುವೆ ಮೇಲೆ ಎತ್ತಿಕೊಂಡು ಸಾಗಿದ ಘಟನೆ ಜಿಲ್ಲೆಯ ಕಳಸ ತಾಲೂಕಿನ ಸಂಸೆ ಗ್ರಾಪಂ ವ್ಯಾಪ್ತಿಯ ನೆಲ್ಲಿಬೀಡು ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮಿ ಎಂಬ 70 ರ ವೃದ್ಧೆ ಅನಾರೋಗ್ಯ ಪೀಡಿತರಾಗಿ ಹಾಸಿಗೆ ಹಿಡಿದಿದ್ದರು. ಆ ಹಳ್ಳಿಯಿಂದ ಮುಖ್ಯ ರಸ್ತೆಗೆ ಬರಲು 3 ಕಿ.ಮೀ. ಸಾಗಬೇಕಾಗಿರುವುದರಿಂದ ಹಳ್ಳಿಯ ಕೆಲವರು ಸೇರಿಕೊಂಡು ಲಕ್ಷ್ಮಿ ಅವರನ್ನು ಹೊತ್ತುಕೊಂಡು ಬಂದ ದೃಶ್ಯ ಕಂಡುಬಂತು.
ಭದ್ರಾ ನದಿಗೆ ನಿರ್ಮಿಸಿರುವ ತೂಗು ಸೇತುವೆ ಮೇಲೆಯೇ ಹಳ್ಳಿಗರು ದಿನನಿತ್ಯ ಪಯಣಿಸುತ್ತಿದ್ದು, ನೆಲ್ಲಿಬೀಡು, ಅಜ್ಜಿಗದ್ದೆ, ಆರೋಳ್ಳಿ, ಕಟ್ಟೆಮನೆ, ಕೋಣೆಮನೆ ಸೇರಿ 10ಕ್ಕೂ ಹೆಚ್ಚು ಹಳ್ಳಿಗೆ ರಸ್ತೆ ಇಲ್ಲ.
ಹಲವು ದಶಕಗಳಿಂದಲೂ ಭದ್ರಾ ನದಿಯ ತೂಗು ಸೇತುವೆ ಮೇಲೆ ಇವರು ಜೀವನ ನಡೆಸುತ್ತಿದ್ದಾರೆ. ಹಳ್ಳಿಯಿಂದ ಮುಖ್ಯ ರಸ್ತೆಗೆ ಬರಲು 3 ಕಿ.ಮೀ. ಸಾಗಬೇಕಾಗುತ್ತದೆ.
ಬೇಸಿಗೆಯಲ್ಲಿ ಭದ್ರೆಯ ಒಡಲಲ್ಲೇ ಗಾಡಿಗಳು ಓಡಾಡುತ್ತವೆ, ಆದರೆ ಮಳೆಗಾಲದಲ್ಲಿ ಆಗಲ್ಲ. ಭದ್ರಾ ನದಿಗೆ ಸೇತುವೆ ನಿರ್ಮಿಸಿ ಕೊಡುವಂತೆ ಹಳ್ಳಿಯಲ್ಲಿರುವ ಸಾರ್ವಜನಿಕರು 7 ದಶಕ ಗಳಿಂದಲೂ ಮನವಿ ಮಾಡುತ್ತಿದ್ದರೂ, ಈವರೆಗೆ ಏನು ಪ್ರಯೋಜವಾಗಲಿಲ್ಲ ಎನ್ನುತ್ತಾರೆ ಸ್ಥಳೀಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತ ಸಾವು
Ajjampura: ಪತ್ನಿಯ ಶೀಲ ಶಂಕಿಸಿ 5 ವರ್ಷದ ಮಗಳನ್ನೇ ಕೊಂದ ತಂದೆ ಬಂಧನ
Chikkamagaluru: ವಿದ್ಯುತ್ ತಂತಿ ತುಳಿದು 5 ಹಸುಗಳು ಸಾವು
Chikkamagaluru: ಓವರ್ ಟೇಕ್ ಮಾಡಲು ಹೋಗಿ ಸೇತುವೆಗೆ ಗುದ್ದಿದ ಬಸ್; ವಿದ್ಯಾರ್ಥಿಗಳಿಗೆ ಗಾಯ
Chikkamagaluru: ಹಣ ಪಡೆದ ಆರೋಪ… ಪ್ರಾಂಶುಪಾಲ, ಪ್ರಥಮ ದರ್ಜೆ ಸಹಾಯಕ ಲೋಕಾಯುಕ್ತ ಬಲೆಗೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್, ಎಂಆರ್ಐ ಸೇವೆ ವ್ಯತ್ಯಯ
Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ಇಂದಿನಿಂದ
Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ
400 crores ಆನ್ಲೈನ್ ಗೇಮಿಂಗ್ ಆ್ಯಪ್ ವಂಚನೆ ಪತ್ತೆ
Leopard cage; ಚಿರತೆ ಬೋನಿನಲ್ಲಿಟ್ಟಿದ್ದ ಮೇಕೆ ಕದ್ದೊಯ್ದ ಖದೀಮರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.