Mangaluru: ಅನುಮತಿ ದೊರೆತರೂ ಓಡದ ಸರಕಾರಿ ಬಸ್‌!

ಮಂಗಳೂರು-ಮೂಡುಬಿದಿರೆ ಮಾರ್ಗದಲ್ಲಿ  56 ಟ್ರಿಪ್‌ ಓಡಿಸಲು ಕೆಎಸ್ಸಾರ್ಟಿಸಿಗೆ ಅವಕಾಶ; ನ್ಯಾಯಾಲಯ ಅವಕಾಶ ಮಾಡಿಕೊಟ್ಟರೂ ಆರ್‌ಟಿಎ ಸಭೆ ನಡೆಯದೆ ಪರವಾನಿಗೆ ಸಿಗುತ್ತಿಲ್ಲ!

Team Udayavani, Sep 26, 2024, 2:35 PM IST

4

ಸಾಂದರ್ಭಿಕ ಚಿತ್ರ

ಮಹಾನಗರ: ಮಂಗಳೂರು-ಮೂಡುಬಿದಿರೆ-ಕಾರ್ಕಳ ನಡುವಣ ಕೆಎಸ್ಸಾರ್ಟಿಸಿ ಬಸ್‌ ಸಂಚಾರಕ್ಕೆ ಅಡ್ಡಿಯಾಗಿದ್ದ ತೊಡಕು ನಿವಾರಣೆಗೊಂಡರೂ ಬಸ್‌ ಓಡಿಸಲು ಇನ್ನೂ ಅವಕಾಶ ಸಿಕಿಲ್ಲ. ಬಸ್‌ ಕಾರ್ಯಾಚರಣೆ ಮಾಡಲು ಐದು ತಿಂಗಳ ಹಿಂದೆ ನ್ಯಾಯಾಲಯ ಅನುಮತಿ ನೀಡಿದರೂ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ಸಭೆ ನಡೆಯದೆ ಈ ರೂಟ್‌ಗಳಲ್ಲಿ ಬಸ್‌ ಓಡಾಟಕ್ಕೆ ಇನ್ನೂ ಕಾಲ ಕೂಡಿ ಬಂದಿಲ್ಲ.

ಈ ರೂಟ್‌ನಲ್ಲಿ ಹೊಸ ಬಸ್‌ ಓಡಿಸಲು ಕೆಎಸ್ಸಾರ್ಟಿಸಿ ಇಂಗಿತ ವ್ಯಕ್ತಪಡಿಸಿದೆ. ಆದರೆ ಪರವಾನಿಗೆಗೆ ಸಿಗಬೇಕಾದರೆ ಈ ಕುರಿತು (ಆರ್‌ಟಿಎ)ಯಲ್ಲಿ ನಿರ್ಧಾರ ಆಗಬೇಕು. ಆದರೆ ಮಂಗಳೂರಿನಲ್ಲಿ ಕಳೆದ ಒಂದು ವರ್ಷದಿಂದ ಆರ್‌ಟಿಎ ಸಭೆ ನಡೆದಿಲ್ಲ. ಇದರಿಂದಾಗಿ ಹೊಸ ಪರ್ಮಿಟ್‌ ನೀಡಲು ಇನ್ನೂ ಸಾಧ್ಯವಾಗಿಲ್ಲ.

ಮಂಗಳೂರು-ಮೂಡುಬಿದಿರೆ- ಕಾರ್ಕಳ ನಡುವಣ 8 ಬಸ್‌ 56 ಟ್ರಿಪ್‌ ಓಡಿಸಲು ಕೆಎಸ್ಸಾರ್ಟಿಸಿ ಕೆಲವು ವರ್ಷಗಳ ಹಿಂದೆ ಪರವಾನಿಗೆ ಕೇಳಿತ್ತು. ಆದರೆ ಮೂಡುಬಿದಿದರೆ ಮಾರ್ಗದಲ್ಲಿ ಗುರುಪುರ ಹಳೆ ಸೇತುವೆ ದುರ್ಬಲವಾಗಿದೆ ಎಂಬ ಕಾರಣದಿಂದಾಗಿ ಕೇವಲ 24 ಟ್ರಿಪ್‌ ಓಡಿಸಲು ಮಾತ್ರ ಅವಕಾಶ ನೀಡಲಾಗಿತ್ತು. ಹೊಸ ಸೇತುವೆ ನಿರ್ಮಾಣ, ಹಳೆ ಸೇತುವೆ ದುರಸ್ತಿ ಬಳಿಕವೂ ಅನುಮತಿ ಸಿಗದ ಕಾರಣ ಇದನ್ನು ಪ್ರಶ್ನಿಸಿ, ಕೆಎಸ್ಸಾರ್ಟಿಸಿ ನ್ಯಾಯಾಲಯದ ಮೊರೆ ಹೋಗಿತ್ತು. ಈ ರೂಟ್‌ನಲ್ಲಿ 56 ಟ್ರಿಪ್‌ ಓಡಿಸಲು ಕೆಎಸ್ಸಾರ್ಟಿಸಿಗೆ ನ್ಯಾಯಾಲಯ ಕೆಲವು ತಿಂಗಳ ಹಿಂದೆಯೇ ಅನುಮತಿ ನೀಡಿದೆ. ಆದರೂ ಬಸ್‌ ಕಾರ್ಯಾಚರಣೆ ಇನ್ನೂ ಆರಂಭಗೊಂಡಿಲ್ಲ.

ಸಭೆ ನಡೆಸಲು ನೀತಿ ಸಂಹಿತೆ ಅಡ್ಡಿ
ಮಂಗಳೂರು-ಮೂಡುಬಿದಿರೆ-ಕಾರ್ಕಳ ನಡುವಣ ಬಸ್‌ ಸಂಚಾರಕ್ಕೆ ಸಂಬಂಧಿಸಿದ ಪರವಾನಿಗೆ ನೀಡಲು ಆರ್‌ಟಿಎ ಸಭೆಯಲ್ಲಿ ನಿರ್ಧರಿಸಬೇಕು. ಆರ್‌ಟಿಎ ಸಭೆಗೆ ಈಗಾಗಲೇ ದಿನ ನಿಗದಿ ಮಾಡಿದರೂ ವಿಧಾನಪರಿಷತ್‌ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮುಂದಿನ ತಿಂಗಳಿಗೆ ಮುಂದೂಡಲಾಗಿದೆ. ಪರವಾನಿಗೆ ಕುರಿತು ಅಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ.
-ಶ್ರೀಧರ್‌ ಮಲ್ಲಾಡ್‌,  ಮಂಗಳೂರು ಆರ್‌ಟಿ

ಹೊಸ ಬಸ್‌ ಓಡಿಸುತ್ತೇವೆ
ಮಂಗಳೂರು-ಮೂಡುಬಿದಿರೆ-ಕಾರ್ಕಳ ಮಾರ್ಗವಾಗಿ 8 ಬಸ್‌ 56 ಟ್ರಿಪ್‌ ಕಾರ್ಯಾಚರಣೆಗೆ ನ್ಯಾಯಾಲಯದಿಂದ ಅನುಮತಿ ದೊರಕಿದೆ. ಆದರೆ, ಆರ್‌ಟಿಎ ಸಭೆಯಲ್ಲಿ ಪರವಾನಿಗೆ ಸಿಗಬೇಕು. ಪರವಾನಿಗೆ ದೊರಕಿದ ಕೂಡಲೇ ಬಸ್‌ ಓಡಿಸಲು ಕೆಎಸ್ಸಾರ್ಟಿಸಿ ತಯಾರಿದೆ. ಈ ರೂಟ್‌ಗಳಲ್ಲಿ ಹೊಸ ಬಸ್‌ ಓಡಿಸಲು ನಿರ್ಧರಿಸಿದ್ದೇವೆ.
-ರಾಜೇಶ್‌ ಶೆಟ್ಟಿ, ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ

ವರ್ಷದಿಂದ ನಡೆಯದ ಆರ್‌ಟಿಎ ಸಭೆ
ವಾಹನಗಳಿಗೆ ಹೊಸ ಪರವಾನಿಗೆ, ರೂಟ್‌, ಸಮಯ ಬದಲಾವಣೆ ಸಹಿತ ವಿವಿಧ ಬೇಡಿಕೆ ಇತ್ಯರ್ಥಕ್ಕೆ ಸಾಮಾನ್ಯವಾಗಿ ಕಾಲಕಾಲಕ್ಕೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆ ನಡೆಯುತ್ತದೆ. ಆದರೆ ಮಂಗಳೂರಿನಲ್ಲಿ ಕಳೆದ ಒಂದು ವರ್ಷದಿಂದ ಆರ್‌ಟಿಎ ಸಭೆ ನಡೆದಿಲ್ಲ. ಅದರಲ್ಲೂ ಬಸ್‌ ಪರವಾನಿಗೆಗೆ ಸಂಬಂಧಿಸಿ ಕೊನೆಯ ಸಭೆ ನಡೆದಿದ್ದು, 2022ರ ಜನವರಿ ತಿಂಗಳಿನಲ್ಲಿ. ಸಭೆ ನಡೆಸಲು ಹಲವು ತಿಂಗಳಿನಿಂದ ಒತ್ತಡ ಇದ್ದರೂ ಕೆಲವು ಬಾರಿ ಸಭೆ ನಿಗದಿಗೊಂಡು ಮೊಟಕುಗೊಂಡಿತ್ತು. ಇದೀಗ ಸೆ. 26ರಂದು ಸಭೆಗೆ ನಿರ್ಧರಿಸಲಾಗಿತ್ತು. ಆದರೆ ಸದ್ಯ ವಿಧಾನಪರಿಷತ್‌ ಚುನಾವಣೆಯ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾದ ಕಾರಣ, ಆರ್‌ಟಿಎ ಸಭೆಯಲ್ಲಿ ಮತ್ತೆ ಒಂದು ತಿಂಗಳ ಮಟ್ಟಿಗೆ ಮುಂದೂಡಲಾಗಿದೆ.

ಟಾಪ್ ನ್ಯೂಸ್

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

Sky-dia

Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

manjunath bhandari

CM ಸಿದ್ದರಾಮಯ್ಯ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ:ಮಂಜುನಾಥ ಭಂಡಾರಿ

Legislative Council Election: ಅಂತಿಮಗೊಳ್ಳದ ಅಭ್ಯರ್ಥಿಗಳು

Legislative Council Election: ಅಂತಿಮಗೊಳ್ಳದ ಅಭ್ಯರ್ಥಿಗಳು

Mangaluru: ಅಮೆರಿಕದಲ್ಲಿ ಯಕ್ಷಗಾನಕ್ಕೆ ಸಿಕ್ಕ ಗೌರವ ಅವಿಸ್ಮರಣೀಯ: ಪಟ್ಲ ಸತೀಶ್‌ ಶೆಟ್ಟಿ

Mangaluru: ಅಮೆರಿಕದಲ್ಲಿ ಯಕ್ಷಗಾನಕ್ಕೆ ಸಿಕ್ಕ ಗೌರವ ಅವಿಸ್ಮರಣೀಯ: ಪಟ್ಲ ಸತೀಶ್‌ ಶೆಟ್ಟಿ

Kaun Banega Crorepati ಸ್ಪರ್ಧಿ ಅಪೂರ್ವ ಶೆಟ್ಟಿ; 2 ವರ್ಷಗಳ ಪ್ರಯತ್ನಕ್ಕೆ ಸಿಕ್ಕಿದ ಫ‌ಲ

Kaun Banega Crorepati ಸ್ಪರ್ಧಿ ಅಪೂರ್ವ ಶೆಟ್ಟಿ; 2 ವರ್ಷಗಳ ಪ್ರಯತ್ನಕ್ಕೆ ಸಿಕ್ಕಿದ ಫ‌ಲ

Mangaluru: ಬಡ್ಡಿ ಸಹಿತ ಪಾವತಿಸುವಂತೆ ಗ್ರಾಹಕ ನ್ಯಾಯಾಲಯ ಆದೇಶ

Mangaluru: ಬಡ್ಡಿ ಸಹಿತ ಪಾವತಿಸುವಂತೆ ಗ್ರಾಹಕ ನ್ಯಾಯಾಲಯ ಆದೇಶ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

2-bng

Bengaluru: ಮದುವೆ ಮರೆಮಾಚಿದಕ್ಕೆ 59 ತುಂಡು ಮಾಡಿ ಹತ್ಯೆ

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

MCD ಸ್ಥಾಯಿ ಸಮಿತಿ ಸ್ಥಾನಕ್ಕೆ ಇಂದೇ ಚುನಾವಣೆ… ಮಧ್ಯಾಹ್ನ 1 ಗಂಟೆಗೆ ಮುಹೂರ್ತ ಫಿಕ್ಸ್

World Tourism Day: ಹಂಪಿ ಪಯಣದ ಹ್ಯಾಪಿ ಕಥನ

World Tourism Day: ಹಂಪಿ ಪಯಣದ ಹ್ಯಾಪಿ ಕಥನ

SEMI-Cond

World Digital Revolution: ಜಾಗತಿಕ ರಾಜಕಾರಣಕ್ಕೆ ಸೆಮಿಕಂಡಕ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.