Kushtagi: ಕಂದಾಯ ಉಪ ವಿಭಾಗ ಗಂಗಾವತಿ ಬದಲಿಗೆ ಕುಷ್ಟಗಿ ಸೂಕ್ತ: ದೊಡ್ಡನಗೌಡ‌ ಪಾಟೀಲ


Team Udayavani, Sep 26, 2024, 2:48 PM IST

11-kushtagi

ಕುಷ್ಟಗಿ: ಕೊಪ್ಪಳ ಜಿಲ್ಲೆಯಲ್ಲಿ ತಾಲೂಕುವಾರು ಆದ್ಯತೆ ದೃಷ್ಟಿಯಿಂದ  ಸಮತೋಲನ ಕಾಯ್ದುಕೊಳ್ಳುವ ಹಿನ್ನೆಲೆ ನೂತವಾಗಿ ಕಂದಾಯ ಉಪ ವಿಭಾಗಾಧಿಕಾರಿ ಕಚೇರಿ ಕುಷ್ಟಗಿಯಲ್ಲೇ ಆರಂಭಿಸುವುದು ಸೂಕ್ತ ಎಂದು  ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಉದಯವಾಣಿ ಪ್ರತಿನಿಧಿಯೊಂದಿಗೆ ಮಾತನಾಡಿದ ಅವರು, ಈಗಾಗಲೇ ಗಂಗಾವತಿಯಲ್ಲಿ ಪೊಲೀಸ್ ಉಪ ಅಧೀಕ್ಷಕರ ಕಚೇರಿ (ಡಿವೈಎಸ್ಪಿ)  ಹಾಗೂ ಜೆಸ್ಕಾಂ ವಿಭಾಗ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಗಂಗಾವತಿಯಲ್ಲಿ ಕಂದಾಯ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿಯೇ ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಮಾತ್ರ ಹೋಗಿದೆ ಎಂದು ಹೇಳಿದರು.

ಗಂಗಾವತಿ ಉಪ ವಿಭಾಗಾಧಿಕಾರಿ ಕಚೇರಿ ವ್ಯಾಪ್ತಿಗೆ ಕುಷ್ಟಗಿ ಸೇರಿಸಿರುವ ಬಗ್ಗೆ ಕುಷ್ಟಗಿ ತಾಲೂಕಿನಲ್ಲಿ ವ್ಯಾಪಕವಾಗಿ ಸಾರ್ವಜನಿಕರಲ್ಲಿ ಈಗಾಗಲೇ ಸಾಕಷ್ಟು  ವಿರೋಧ ವ್ಯಕ್ತವಾಗಿದೆ ಎಂದರು.

ಕೊಪ್ಪಳ ಉಪ ವಿಭಾಗಾಧಿಕಾರಿ ಕಚೇರಿಗೆ ಕಾರ್ಯಭಾರ ಹೆಚ್ಚಿದ ಹಿನ್ನೆಲೆ  ಗಂಗಾವತಿಯಲ್ಲಿ ಉಪವಿಭಾಗ ಆರಂಭಿಸುವ ಬಗ್ಗೆ ಸರ್ಕಾರಕ್ಕೆ ಕೊಪ್ಪಳ ಜಿಲ್ಲಾಡಳಿತದಿಂದ ಪ್ರಸ್ತಾವನೆ ಹೋಗಿದೆ. ಆದರೆ ವಿಧಾನಸಭೆ ಸಂಪುಟ ಸಭೆಯಲ್ಲಾಗಲಿ, ಕಲಬುರಗಿ ವಿಶೇಷ ಸಂಪುಟ ಸಭೆಯ ಮುಂದೆ ಚರ್ಚೆಗೆ ಬಂದಿಲ್ಲ. ಆದಾಗ್ಯೂ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದರೆ ಖಂಡಿತವಾಗಿ ನಮ್ಮ ವಿರೋಧವಿದೆ ಎಂದು ಹೇಳಿದರು.

ಕುಷ್ಟಗಿಯಲ್ಲಾದರೆ ತಪ್ಪೇನು?: ಹೊಸ ಉಪ ವಿಭಾಗಾಧಿಕಾರಿ ಕಚೇರಿ ಆರಂಭಿಸುವುದಾದರೆ ಕುಷ್ಟಗಿಯಲ್ಲಿ ಆರಂಭಿಸಿದರೆ ತಪ್ಪೇನು? ಗಂಗಾವತಿ ಕುಷ್ಟಗಿ ಉಪ ವಿಭಾಗಾಧಿಕಾರಿ ಕಚೇರಿಗೆ ಸೇರಿಸಲಿ. ಕುಷ್ಟಗಿ ಕಂದಾಯ ಉಪ ವಿಭಾಗವಾಗಲು ಅರ್ಹವಾಗಿದ್ದು, ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನೇರ ಸಂಪರ್ಕ ವ್ಯವಸ್ಥೆ ಹಾಗೂ ಭವಿಷ್ಯದಲ್ಲಿ ರೈಲುಮಾರ್ಗ ಅನಕೂಲವಾಗುವ ಸಾದ್ಯತೆ ಇದೆ ಎಂದರು.

ಈ ಹಿಂದೆ ಕುಷ್ಟಗಿ ಲೋಕಸಭಾ ಕ್ಷೇತ್ರವಾಗಿತ್ತು. ಕೊಪ್ಪಳ ಜಿಲ್ಲೆಯಲ್ಲಿ 36 ಗ್ರಾಮ ಪಂಚಾಯತ್ ಹೊಂದಿದ 2ನೇ ದೊಡ್ಡ ತಾಲೂಕು ಕ್ಷೇತ್ರವಾಗಿದೆ. ಈ ಹಿನ್ನೆಲೆ ಕುಷ್ಟಗಿ ಉಪ ವಿಭಾಗಾಧಿಕಾರಿ ಕಚೇರಿ ಯಾಕೆ ಆರಂಭಿಸಬಾರದು? ಈ ಕ್ರಮದಿಂದ ಕೊಪ್ಪಳ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಕ್ರಮವಾಗಿ ಆದ್ಯತೆ ಜೊತೆಗೆ ಅಸಮಾತೋಲನ ನಿವಾರಿಸಿದಂತಾಗುತ್ತದೆ ಎಂದರು.

ಇದು ಸಾದ್ಯವಾಗದೇ ಇದ್ದಲ್ಲಿ ಮೊದಲಿನಂತೆ ಕೊಪ್ಪಳದಲ್ಲಿ ಉಪ ವಿಭಾಗಾಧಿಕಾರಿ ಕಚೇರಿ ವ್ಯಾಪ್ತಿಯಲ್ಲಿ ಕುಷ್ಟಗಿ ತಾಲೂಕು ಮುಂದುವರೆಯಲಿ ಹೊರತು ಗಂಗಾವತಿ ಉಪ ವಿಭಾಗದ ವ್ಯಾಪ್ತಿಯಲ್ಲಿ ಕುಷ್ಟಗಿ ತಾಲೂಕು ಸೇರ್ಪಡೆ ಕನಸಿನಲ್ಲಿಯೂ ಯೋಚಿಸಬಾರದು ಎಂದಿದ್ದಾರೆ.

ಟಾಪ್ ನ್ಯೂಸ್

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

Bheemanna-Naik

Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ‌

1-jagga

Laddus row; ತಿರುಮಲ ದೇವಸ್ಥಾನ ದರ್ಶನ ರದ್ದು ಮಾಡಿದ ಜಗನ್ ರೆಡ್ಡಿ

BBK-11: ದಶಕದ ಹಿಂದೆಯೇ ಹಿಂದಿ ಬಿಗ್‌ ಬಾಸ್‌ನಲ್ಲಿತ್ತು ʼಸ್ವರ್ಗ ನರಕʼದ ಕಾನ್ಸೆಪ್ಟ್

BBK-11: ದಶಕದ ಹಿಂದೆಯೇ ಹಿಂದಿ ಬಿಗ್‌ ಬಾಸ್‌ನಲ್ಲಿತ್ತು ʼಸ್ವರ್ಗ ನರಕʼದ ಕಾನ್ಸೆಪ್ಟ್

1-mang-1

Mangaluru; ನಗರದ 9 ಅಂತಸ್ತಿನ ಹೊಟೇಲ್ ಕಟ್ಟಡದಲ್ಲಿ ಅಗ್ನಿ ಅವಘಡ

Udayavani.com ‘Nammane Krishna-2024’ Reels Contest Winners Awarded

Udayavani.com ‘ನಮ್ಮನೆ ಕೃಷ್ಣ -2024’ ರೀಲ್ಸ್‌ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ

1-BJP

MUDA; ಕಾಂಗ್ರೆಸ್ ಮೊಹಬ್ಬತ್ ಕಿ ದುಕಾನ್ ಅಲ್ಲ, ಭ್ರಷ್ಟಾಚಾರ್ ಕೆ ಭಾಯಿಜಾನ್: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Tragedy: ಗಣೇಶನ ಮೂರ್ತಿ ವಿಸರ್ಜಿಸಿ ಬರುವಾಗ ರಸ್ತೆ ಅಪಘಾತ… ಯುವಕ ಮೃತ್ಯು

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

Gangavathi: ಒಂದೇ ಕೋಮಿನ ಎರಡು ಗುಂಪುಗಳ ಮಧ್ಯೆ ಮಾರಾಮಾರಿ… ಓರ್ವನಿಗೆ ಚಾಕು ಇರಿತ

“ಸ್ಮಾರ್ಟ್‌’ ಆದ ಲಿಂಗದಹಳ್ಳಿ ಸರ್ಕಾರಿ ಶಾಲೆ”- ವಿದ್ಯಾರ್ಥಿಗಳ ಸಂಖ್ಯೆ 400ಕ್ಕೆ ಏರಿಕೆ

“ಸ್ಮಾರ್ಟ್‌’ ಆದ ಲಿಂಗದಹಳ್ಳಿ ಸರ್ಕಾರಿ ಶಾಲೆ”- ವಿದ್ಯಾರ್ಥಿಗಳ ಸಂಖ್ಯೆ 400ಕ್ಕೆ ಏರಿಕೆ

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

D. K. Shivakumar: ನೀರು ಕಡಿಮೆಯಾದಾಗ ತುಂಗಭದ್ರಾ ಅಣೆಕಟ್ಟೆಗೆ ಹೊಸ ಕ್ರೆಸ್ಟ್‌ಗೇಟ್‌

CM Siddaramaiah: ತಜ್ಞರ ವರದಿಯಂತೆ ಅಣೆಕಟ್ಟು ನಿರ್ವಹಣೆ

CM Siddaramaiah: ತಜ್ಞರ ವರದಿಯಂತೆ ಅಣೆಕಟ್ಟು ನಿರ್ವಹಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

POlice

Belthangady: ಅಕ್ರಮ ಕಸಾಯಿಖಾನೆಗೆ ದಾಳಿ: ಆರೋಪಿಗಳು ಪರಾರಿ

fraudd

Gangolli: ದೋಣಿಯ ಸೊತ್ತು ಮಾರಾಟ ಮಾಡಿ 22 ಲಕ್ಷ ರೂ. ವಂಚನೆ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

6

Dandeli: ಗಣೇಶನಗರದಲ್ಲಿ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.