Kundapura ಪುರಸಭೆ ಹೊಸ ಆಡಳಿತವಾದರೂ ರಸ್ತೆ ಮಾಡೀತೇ?; ರಿಂಗ್‌ ರೋಡ್‌ ಮುಗಿಯದ ಗೋಳು!


Team Udayavani, Sep 26, 2024, 3:07 PM IST

5

ಕುಂದಾಪುರ: ನಗರ ಪ್ರವೇಶ ಮಾಡದೆ ಕುಂದಾಪುರ ಹಲವಾರು ಪ್ರಮುಖ ಪ್ರದೇಶಗಳನ್ನು ಸಂಪರ್ಕಿಸುವ ಮಹತ್ವಾಕಾಂಕ್ಷಿ ರಿಂಗ್‌ ರೋಡ್‌ ಕಾಮಗಾರಿಗೆ ಶಿಲಾನ್ಯಾಸವಾಗಿ 1 ವರ್ಷ 9 ತಿಂಗಳಾಗಿದೆ. ಆದರೆ, ಕಾಮಗಾರಿ ಇನ್ನೂ ಆರಂಭಗೊಂಡಿಲ್ಲ. ಈ ರಿಂಗ್‌ ರೋಡ್‌ಗೆ ಅತ್ಯಂತ ಅಗತ್ಯವಾದ ಸಿಆರ್‌ಝಡ್‌ ಇಲಾಖೆ ನಿರಾಕ್ಷೇಪಣೆ ಪತ್ರವನ್ನು ಪಡೆದಿದ್ದೇ ಶಿಲಾನ್ಯಾಸವಾಗಿ 1 ವರ್ಷ 2 ತಿಂಗಳ ನಂತರ. ಹೀಗಾಗಿ  ಶಿಲಾನ್ಯಾಸವಾದರೂ ಕಾಮಗಾರಿ ಆರಂಭಕ್ಕೆ ಮುಹೂರ್ತ ಸಿಕ್ಕಿಲ್ಲ. ಕುಂದಾಪುರ ಪುರಸಭೆಯ ಹೊಸ ಆಡಳಿತವಾದರೂ ಅದನ್ನು ಆರಂಭೀಸೀತೇ ಎನ್ನುವುದು ಜನರ ನಿರೀಕ್ಷೆ.

ಮೀನುಗಾರಿಕೆ ವಲಯ ಎಂದು ಗುರುತಿಸಿ ಕೊಂಡಿರುವ ಖಾರ್ವಿಕೇರಿ, ಪಂಚಗಂಗಾವಳಿ, ಮದ್ದುಗುಡ್ಡೆ ಪ್ರದೇಶದಲ್ಲಿ ರಿಂಗ್‌ ರೋಡ್‌ ಹಾದುಹೋಗಿದೆ. ರಿಂಗ್‌ರೋಡ್‌ ನಿರ್ಮಾಣ ವಾದರೆ ನಗರದ ಸಂಚಾರ ದಟ್ಟಣೆ ಕಡಿಮೆಯಾಗಲಿದೆ. ನಗರದೊಳಗೆ ಪ್ರವೇಶ ಪಡೆಯದೆ ಕೋಡಿ ಮೊದಲಾದ ಭಾಗಗಳಿಗೆ, ಪುರಸಭೆ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಹೆದ್ದಾರಿಯಿಂದ ರಿಂಗ್‌ ರೋಡ್‌ ಮೂಲಕ ಹೋಗಲು ಸಾಧ್ಯವಿದೆ.

ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಮನವಿಯಂತೆ ಕಚ್ಚಾ ರಸ್ತೆಯನ್ನು ಕಾಂಕ್ರಿಟೀಕರಣದ ಮೂಲಕ ಅಭಿವೃದ್ಧಿಪಡಿಸಲು ಸರಕಾರದಿಂದ 20 ಕೋ. ರೂ. ಮಂಜೂರಾಗಿತ್ತು.

19.8 ಕೋ. ರೂ. ವೆಚ್ಚದಲ್ಲಿ ಕಾಮಗಾರಿಗೆ ಟೆಂಡರ್‌ ಆಗಿತ್ತು. ಕಳೆದ ವರ್ಷದ ಜ. 5ರಂದು ಪುರಸಭೆ ಅಧ್ಯಕ್ಷೆಯಾಗಿದ್ದ ವೀಣಾ ಭಾಸ್ಕರ ಮೆಂಡನ್‌ ಮೂಲಕ ಭೂಮಿ ಪೂಜೆ ಕೂಡಾ ನಡೆದಿತ್ತು. ಲೋಕೋಪಯೋಗಿ ಇಲಾಖೆ ಮೂಲಕ ಕಾಮಗಾರಿಗೆ ಚಾಲನೆ ದೊರೆತಿತ್ತು. ಆದರೆ ಕಾಮಗಾರಿ ಸ್ಥಗಿತವಾಗಿತ್ತು.

ಹೀಗೆ ವಿಳಂಬವಾದರೆ ಮಂಜೂರಾದ ಮೊತ್ತದಲ್ಲಿ ಮುಂದಿನ ದಿನಗಳಲ್ಲಿ ಕಾಮಗಾರಿ ನಡೆಸುವುದು ಕೂಡ ಗುತ್ತಿಗೆದಾರರಿಗೆ ಕಷ್ಟವಾಗಲಿದೆ. ಸಿಮೆಂಟ್‌, ಕಬ್ಬಿಣ, ಜಲ್ಲಿ ಮೊದಲಾದವುಗಳ ಬೆಲೆ ಹೆಚ್ಚಿದರೆ ಈಗ ಮಂಜೂರಾದ ನಿರ್ದಿಷ್ಟ ಮೊತ್ತದಲ್ಲಿ ಕಾಮಗಾರಿ ಗುಣಮಟ್ಟದಲ್ಲಿ ಮುಗಿಸುವುದು ಅಸಾಧ್ಯ. ಕಳಪೆ ಗುಣಮಟ್ಟ ಮಾಡುವಂತಿಲ್ಲ. ಕೈಯಿಂದ ಹಣ ಹಾಕುವಂತಿಲ್ಲ ಎಂಬಂತಹ ಸ್ಥಿತಿ. ಹೆಚ್ಚುವರಿ ಅನುದಾನ ಈ ಗ್ಯಾರಂಟಿಯುಗದಲ್ಲಿ ಈ ಸರಕಾರದಿಂದ ತರುವುದು ಹರಸಾಹಸವೇ ಸರಿ. ಒಟ್ಟಿನಲ್ಲಿ ಸಾರ್ವಜನಿಕರ ಆವಶ್ಯಕತೆಗೆ ಜನಪ್ರತಿನಿಧಿಗಳು ಮಂಜೂರು ಮಾಡಿಸಿದ ದೊಡ್ಡ ಮೊತ್ತದ ಅನುದಾನ ಸದುಪಯೋಗ ಮಾಡುವಲ್ಲಿ ಅಧಿಕಾರಿಗಳು ಸೋತಿದ್ದಾರೆ.

ನಿರ್ವಹಣೆಯಿಲ್ಲ, ಎಲ್ಲೆಡೆ ಹೊಂಡಗುಂಡಿ
ಸುಮಾರು 1 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ ರಿಂಗ್‌ರೋಡ್‌ ಅನಂತರದ ದಿನಗಳಲ್ಲಿ ನಿರ್ವಹಣೆ ಕಾಣದೆ ವರ್ಷಗಳೇ ಸಂದುಹೋಗಿತ್ತು. ಹೊಸ ಕಾಮಗಾರಿಗೆ ಶಿಲಾನ್ಯಾಸವಾದದ್ದು ಗಮನಿಸಿದರೆ ಇಷ್ಟು ಹೊತ್ತಿಗೆ ರಸ್ತೆ ಕಾಂಕ್ರೀಟ್‌ನಿಂದ ಪಳಪಳ ಹೊಳೆಯಬೇಕಿತ್ತು. ಆದರೆ, ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಿದೆ.

ಈಗ ಅದು ಹೊಂಡಗುಂಡಿ ರೋಡು ಕುಂದಾಪುರ ರಿಂಗ್‌ ರೋಡು ಎಂಬಂತಾಗಿದೆ.  ಒಂದು ಮಳೆ ಬಿದ್ದರೆ ಸಾಕು ನೀರು ತುಂಬಿದ ಹೊಂಡದ ದುರವಸ್ಥೆಯಿಂದ ಸಂಚಾರವೇ ಸಾಧ್ಯವಾಗುತ್ತಿಲ್ಲ. ಜತೆಗೆ ಪೈಪ್‌ಲೈನ್‌ ಕಾಮಗಾರಿಯೂ ನಡೆದು ರಸ್ತೆ ಗಬ್ಬೆದ್ದು ಹೋಗಿದೆ.

ಹೇಗಿರಲಿದೆ ರಿಂಗ್‌ ರೋಡ್‌?

  • 915 ಮೀ. ಹಾಗೂ 1,110 ಮೀ.ನಂತೆ ತಲಾ 9.98 ಕೋ.ರೂ. ವೆಚ್ಚದಲ್ಲಿ ಒಟ್ಟು 19.96 ಕೋ. ರೂ. ಗಳಲ್ಲಿ ಕಾಮಗಾರಿ ನಡೆಯಲಿದೆ.
  • ಒಂದು ಬದಿಯಲ್ಲಿ ಚರಂಡಿ, ಇನ್ನೊಂದು ಬದಿಯಲ್ಲಿ ತಡೆಗೋಡೆ ಇರಲಿದ್ದು ಪಾದಚಾರಿ ಪಥ ಇರಲಿದೆ.
  • ಕಾಮಗಾರಿ ಎರಡು ಹಂತದಲ್ಲಿ ಗುತ್ತಿಗೆಯಾಗಿದೆ. ಈ ಪೈಕಿ ಒಬ್ಬರು ಸ್ವಲ್ಪಮಟ್ಟಿನ ಕಾಮಗಾರಿ ನಡೆಸಿದ್ದಾರೆ. ಇನ್ನೊಬ್ಬರು ಆರಂಭಿಸಿಲ್ಲ.

-ಲಕ್ಷ್ಮೀ ಮಚ್ಚಿನ

 

ಟಾಪ್ ನ್ಯೂಸ್

World Tourism Day 2024: ಮಧ್ಯ ಕರ್ನಾಟಕದ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದೀರಾ?

World Tourism Day 2024: ಮಧ್ಯ ಕರ್ನಾಟಕದ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದೀರಾ?

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ

Udupi-DC

Udupi: ಸೆಪ್ಟೆಂಬರ್ 28-29: ದಸರಾ ಕ್ರೀಡಾಕೂಟ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌, ಎಂಆರ್‌ಐ ಸೇವೆ ವ್ಯತ್ಯಯ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

World Tourism Day 2024: ಮಧ್ಯ ಕರ್ನಾಟಕದ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದೀರಾ?

World Tourism Day 2024: ಮಧ್ಯ ಕರ್ನಾಟಕದ ಈ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದೀರಾ?

Munirathna Case: ವಿಕಾಸಸೌಧದಲ್ಲೇ ಮುನಿರತ್ನ ರೇಪ್‌; ಸಂತ್ರಸ್ತೆ

Munirathna Case: ವಿಕಾಸಸೌಧದಲ್ಲೇ ಮುನಿರತ್ನ ರೇಪ್‌; ಸಂತ್ರಸ್ತೆ

6-araga

Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

012

High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.