Valencia ಗ್ರಂಥಾಲಯ ಪ್ರವೇಶ ದ್ವಾರದ ಮುಂಭಾಗದ ರಿಕ್ಷಾ ಪಾರ್ಕಿಂಗ್‌ ಶೆಲ್ಟರ್‌

ಫುಟ್‌ಪಾತ್‌ಗೆ ತಾಗಿ ಶೆಡ್‌: ಸಾರ್ವಜನಿಕರಿಗೆ ಸಮಸ್ಯೆ

Team Udayavani, Sep 26, 2024, 3:40 PM IST

8

ವೆಲೆನ್ಸಿಯಾ: ಇಲ್ಲಿನ ಜಂಕ್ಷನ್‌ ಬಳಿಯ ಉದ್ಯಾನವನ ಹಾಗೂ ನಗರ ಕೇಂದ್ರ ಗ್ರಂಥಾಲಯದ ವೆಲೆನ್ಸಿಯಾ ಶಾಖೆ ಮುಂಭಾಗದಲ್ಲಿ ಪ್ರವೇಶ ದ್ವಾರದ ಬಳಿ ರಿಕ್ಷಾ ನಿಲುಗಡೆಗೆ ಶೆಡ್‌ ನಿರ್ಮಿಸಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

ಫುಟ್‌ಪಾತ್‌ಗೆ ತಾಗಿಕೊಂಡು ಶೆಡ್‌ ಅಳವಡಿಕೆ ಕಾರ್ಯ ಮಾಡಲಾಗುತ್ತಿದೆ. ಗ್ರಂಥಾಲಯದ ಮುಂಭಾಗದಲ್ಲೇ ರಿಕ್ಷಾಗಳು ನಿಲ್ಲುವ ಕಾರಣ ಹಿರಿಯ ನಾಗರಿಕರು, ಗ್ರಂಥಾಲಯ, ಪಾರ್ಕ್‌ಗೆ ತೆರಳುವ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತದೆ ಎನ್ನಲಾಗಿದೆ. ಈಗಾಗಲೇ ಶಾಶ್ವತ ಶೆಡ್‌ ಅಳವಡಿಕೆ ಕಾರ್ಯ ಆರಂಭಗೊಂಡಿದೆ. ಆದರೆ ಇದು ಪಾಲಿಕೆಯಿಂದ ಪೂರ್ವಾ ನುಮತಿ ಪಡೆಯದೆ ಕಾಮಗಾರಿ ನಡೆಸಲಾ ಗುತ್ತಿದೆ. ಈ ಬಗ್ಗೆ ಸಂಬಂಧಿಸಿದ ಪಾಲಿಕೆ ಅಧಿಕಾರಿಗಳಿಗೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.

ಪಾರ್ಕ್‌ ಹಾಗೂ ಗ್ರಂಥಾಲಯ ಅನೇಕ ವರ್ಷದಿಂದ ಕಾರ್ಯಾಚರಿಸುತ್ತಿದ್ದು, ಇದೀಗ ಸಾರ್ವಜನಿಕರಿಗೆ ತೊಂದರೆಯಾಗು ವಂತೆ ಶೆಲ್ಟರ್‌ ನಿರ್ಮಿಸುವುದು ಸರಿಯಲ್ಲ. ರಾತ್ರಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಸ್ಥಳೀಯ ಪಾಲಿಕೆ ಸದಸ್ಯೆ ಮಾಹಿತಿ ನೀಡಿದ್ದಾರೆ.

ವಾಹನ ಪಾರ್ಕಿಂಗ್‌ಗೆ ಸಮಸ್ಯೆ
ಗ್ರಂಥಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿದ್ದು ಅವರ ವಾಹನಗಳ ಪಾರ್ಕಿಂಗ್‌ಗೆ ಜಾಗವಿಲ್ಲ. ಈ ಹಿಂದೆ ಗ್ರಂಥಾಲಯದ ಮುಂಭಾಗದ ರಸ್ತೆ ಬದಿಯಲ್ಲಿ ಪಾರ್ಕಿಂಗ್‌ ಮಾಡುತ್ತಿದ್ದರು. ಆದರೆ ರಿಕ್ಷಾ ನಿಲ್ದಾಣ ವಿಸ್ತರಣೆಯಾಗಿರುವ ಕಾರಣ ಸಾರ್ವಜನಿಕರಿಗೆ ಪಾರ್ಕಿಂಗ್‌ಗೆ ಜಾಗ ಇಲ್ಲದಂತಾಗಿದೆ. ಮತ್ತೂಂದೆಡೆ ಪಾದಚಾರಿಗಳಿಗೂ ಸಮಸ್ಯೆಯಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.

ಗೇಟ್‌ ಮುಂಭಾಗ ರಿಕ್ಷಾ ನಿಲ್ಲಿಸದಿರಿ
ದ್ವಿಚಕ್ರ ವಾಹನದಲ್ಲಿ ಹಾಗೂ ನಡೆದುಕೊಂಡು ಬರುವ ಸಾರ್ವಜನಿಕರಿಗೆ ಗ್ರಂಥಾಲಯಕ್ಕೆ ತೆರಳಲು ಅನುಕೂಲವಾಗುವಂತೆ ಪ್ರವೇಶ ದ್ವಾರದ ಮುಂಭಾಗದಲ್ಲಿ ಆಟೋಗಳನ್ನು ನಿಲ್ಲಿಸಬಾರದು. ಇದಕ್ಕೆ ಆಟೋ ಚಾಲಕರ ಸಂಘ ಸಹಕರಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗುವಂತೆ ಶೆಲ್ಟರ್‌ ನಿರ್ಮಿಸುವುದು ಸರಿಯಲ್ಲ. ಪಾರ್ಕ್‌, ಗ್ರಂಥಾಲಯಕ್ಕೆ ತೆರಳುವವರಿಗೆ ಅನು ಕೂಲವಾಗುವಂತೆ ಅವಕಾಶ ನೀಡಬೇಕು.
-ವಿಶ್ವನಾಥ್‌, ಸ್ಥಳೀಯರು

ಅನುಮತಿ ನೀಡಿಲ್ಲ
ವೆಲೆನ್ಶಿಯಾ ಬಳಿ ರಿಕ್ಷಾ ನಿಲ್ದಾಣ ನಿರ್ಮಾಣಕ್ಕೆ ಪಾಲಿಕೆಯಿಂದ ಯಾವುದೇ ಅನುಮತಿ ನೀಡಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸಾರ್ವಜನಿಕರಿಗೆ ತೊಂದರೆಯಾಗುವ ಅಕ್ರಮ ಕಾಮಗಾರಿಯಾದರೆ ಕ್ರಮ ಕೈಗೊಳ್ಳಲಾಗುವುದು.
-ಆನಂದ್‌ ಸಿ.ಎಲ್‌.,ಮನಪಾ ಆಯುಕ್ತರು

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

11

Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.