Valencia ಗ್ರಂಥಾಲಯ ಪ್ರವೇಶ ದ್ವಾರದ ಮುಂಭಾಗದ ರಿಕ್ಷಾ ಪಾರ್ಕಿಂಗ್ ಶೆಲ್ಟರ್
ಫುಟ್ಪಾತ್ಗೆ ತಾಗಿ ಶೆಡ್: ಸಾರ್ವಜನಿಕರಿಗೆ ಸಮಸ್ಯೆ
Team Udayavani, Sep 26, 2024, 3:40 PM IST
ವೆಲೆನ್ಸಿಯಾ: ಇಲ್ಲಿನ ಜಂಕ್ಷನ್ ಬಳಿಯ ಉದ್ಯಾನವನ ಹಾಗೂ ನಗರ ಕೇಂದ್ರ ಗ್ರಂಥಾಲಯದ ವೆಲೆನ್ಸಿಯಾ ಶಾಖೆ ಮುಂಭಾಗದಲ್ಲಿ ಪ್ರವೇಶ ದ್ವಾರದ ಬಳಿ ರಿಕ್ಷಾ ನಿಲುಗಡೆಗೆ ಶೆಡ್ ನಿರ್ಮಿಸಲಾಗುತ್ತಿದ್ದು, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.
ಫುಟ್ಪಾತ್ಗೆ ತಾಗಿಕೊಂಡು ಶೆಡ್ ಅಳವಡಿಕೆ ಕಾರ್ಯ ಮಾಡಲಾಗುತ್ತಿದೆ. ಗ್ರಂಥಾಲಯದ ಮುಂಭಾಗದಲ್ಲೇ ರಿಕ್ಷಾಗಳು ನಿಲ್ಲುವ ಕಾರಣ ಹಿರಿಯ ನಾಗರಿಕರು, ಗ್ರಂಥಾಲಯ, ಪಾರ್ಕ್ಗೆ ತೆರಳುವ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತದೆ ಎನ್ನಲಾಗಿದೆ. ಈಗಾಗಲೇ ಶಾಶ್ವತ ಶೆಡ್ ಅಳವಡಿಕೆ ಕಾರ್ಯ ಆರಂಭಗೊಂಡಿದೆ. ಆದರೆ ಇದು ಪಾಲಿಕೆಯಿಂದ ಪೂರ್ವಾ ನುಮತಿ ಪಡೆಯದೆ ಕಾಮಗಾರಿ ನಡೆಸಲಾ ಗುತ್ತಿದೆ. ಈ ಬಗ್ಗೆ ಸಂಬಂಧಿಸಿದ ಪಾಲಿಕೆ ಅಧಿಕಾರಿಗಳಿಗೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.
ಪಾರ್ಕ್ ಹಾಗೂ ಗ್ರಂಥಾಲಯ ಅನೇಕ ವರ್ಷದಿಂದ ಕಾರ್ಯಾಚರಿಸುತ್ತಿದ್ದು, ಇದೀಗ ಸಾರ್ವಜನಿಕರಿಗೆ ತೊಂದರೆಯಾಗು ವಂತೆ ಶೆಲ್ಟರ್ ನಿರ್ಮಿಸುವುದು ಸರಿಯಲ್ಲ. ರಾತ್ರಿ ಕಾಮಗಾರಿ ನಡೆಸಲಾಗುತ್ತಿದೆ ಎಂದು ಸ್ಥಳೀಯ ಪಾಲಿಕೆ ಸದಸ್ಯೆ ಮಾಹಿತಿ ನೀಡಿದ್ದಾರೆ.
ವಾಹನ ಪಾರ್ಕಿಂಗ್ಗೆ ಸಮಸ್ಯೆ
ಗ್ರಂಥಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಿದ್ದು ಅವರ ವಾಹನಗಳ ಪಾರ್ಕಿಂಗ್ಗೆ ಜಾಗವಿಲ್ಲ. ಈ ಹಿಂದೆ ಗ್ರಂಥಾಲಯದ ಮುಂಭಾಗದ ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡುತ್ತಿದ್ದರು. ಆದರೆ ರಿಕ್ಷಾ ನಿಲ್ದಾಣ ವಿಸ್ತರಣೆಯಾಗಿರುವ ಕಾರಣ ಸಾರ್ವಜನಿಕರಿಗೆ ಪಾರ್ಕಿಂಗ್ಗೆ ಜಾಗ ಇಲ್ಲದಂತಾಗಿದೆ. ಮತ್ತೂಂದೆಡೆ ಪಾದಚಾರಿಗಳಿಗೂ ಸಮಸ್ಯೆಯಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ.
ಗೇಟ್ ಮುಂಭಾಗ ರಿಕ್ಷಾ ನಿಲ್ಲಿಸದಿರಿ
ದ್ವಿಚಕ್ರ ವಾಹನದಲ್ಲಿ ಹಾಗೂ ನಡೆದುಕೊಂಡು ಬರುವ ಸಾರ್ವಜನಿಕರಿಗೆ ಗ್ರಂಥಾಲಯಕ್ಕೆ ತೆರಳಲು ಅನುಕೂಲವಾಗುವಂತೆ ಪ್ರವೇಶ ದ್ವಾರದ ಮುಂಭಾಗದಲ್ಲಿ ಆಟೋಗಳನ್ನು ನಿಲ್ಲಿಸಬಾರದು. ಇದಕ್ಕೆ ಆಟೋ ಚಾಲಕರ ಸಂಘ ಸಹಕರಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗುವಂತೆ ಶೆಲ್ಟರ್ ನಿರ್ಮಿಸುವುದು ಸರಿಯಲ್ಲ. ಪಾರ್ಕ್, ಗ್ರಂಥಾಲಯಕ್ಕೆ ತೆರಳುವವರಿಗೆ ಅನು ಕೂಲವಾಗುವಂತೆ ಅವಕಾಶ ನೀಡಬೇಕು.
-ವಿಶ್ವನಾಥ್, ಸ್ಥಳೀಯರು
ಅನುಮತಿ ನೀಡಿಲ್ಲ
ವೆಲೆನ್ಶಿಯಾ ಬಳಿ ರಿಕ್ಷಾ ನಿಲ್ದಾಣ ನಿರ್ಮಾಣಕ್ಕೆ ಪಾಲಿಕೆಯಿಂದ ಯಾವುದೇ ಅನುಮತಿ ನೀಡಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸಾರ್ವಜನಿಕರಿಗೆ ತೊಂದರೆಯಾಗುವ ಅಕ್ರಮ ಕಾಮಗಾರಿಯಾದರೆ ಕ್ರಮ ಕೈಗೊಳ್ಳಲಾಗುವುದು.
-ಆನಂದ್ ಸಿ.ಎಲ್.,ಮನಪಾ ಆಯುಕ್ತರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು
CM ಸಿದ್ದರಾಮಯ್ಯ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ:ಮಂಜುನಾಥ ಭಂಡಾರಿ
Legislative Council Election: ಅಂತಿಮಗೊಳ್ಳದ ಅಭ್ಯರ್ಥಿಗಳು
Mangaluru: ಅಮೆರಿಕದಲ್ಲಿ ಯಕ್ಷಗಾನಕ್ಕೆ ಸಿಕ್ಕ ಗೌರವ ಅವಿಸ್ಮರಣೀಯ: ಪಟ್ಲ ಸತೀಶ್ ಶೆಟ್ಟಿ
Kaun Banega Crorepati ಸ್ಪರ್ಧಿ ಅಪೂರ್ವ ಶೆಟ್ಟಿ; 2 ವರ್ಷಗಳ ಪ್ರಯತ್ನಕ್ಕೆ ಸಿಕ್ಕಿದ ಫಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!
Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ
ಬೈಲಹೊಂಗಲ: ಸರಕಾರಿ ತೋಟದ ಶಾಲೆ ಕಟ್ಟಡ ಅನಾಥ-ಅನೈತಿಕ ಚಟುವಟಿಕೆಗಳ ತಾಣ!
KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ
World Tourism Day:ಪಶ್ಚಿಮ ಘಟ್ಟದ ಕಾನನದ ಸಣ್ಣ ಜಲಪಾತದ ಹುಡುಕಾಟದ ಸಾಹಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.