MUDA: ನ್ಯಾಯಾಲಯದ ಬಗ್ಗೆ ಅಪಾರ ಗೌರವವಿದೆ, ತೀರ್ಪಿಗೆ ತಲೆ ಬಾಗಿದ್ದೇವೆ ಎಂದ ಸಚಿವ ಜಮೀರ್
ಮುಡಾ ಪ್ರಕರಣ ತೀರ್ಪು ಪೊಲಿಟಿಕಲ್ ಜಡ್ಜ್ಮೆಂಟ್ ಎಂದಿದ್ದಕ್ಕೆ ತೀವ್ರ ವಿರೋಧ ಹಿನ್ನೆಲೆ ಕ್ಷಮೆಯಾಚಿಸಿದ ವಸತಿ ಸಚಿವ
Team Udayavani, Sep 26, 2024, 10:00 PM IST
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ರಾಜಕೀಯ ಪ್ರೇರಿತ (ಪೊಲಿಟಿಕಲ್ ಜಡ್ಜ್ಮೆಂಟ್) ಎಂಬ ಅರ್ಥದಲ್ಲಿ ನಾನು ಹೇಳಿಲ್ಲ, ನ್ಯಾಯಾಲಯದ ಬಗ್ಗೆ ನನಗೆ ಅಪಾರ ಗೌರವ ಇದೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆ ಬಾಗಿದ್ದೇವೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಸಚಿವ ಜಮೀರ್ ಮಾತನಾಡಿ ಹೈಕೋರ್ಟ್ ತೀರ್ಪು ಬಂದ ನಂತರ ಪ್ರತಿಪಕ್ಷಗಳು ಇದನ್ನೇ ರಾಜಕೀಯ ಮಾಡುತ್ತಿವೆ. ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎನ್ನುವುದು ನನ್ನ ಅಭಿಪ್ರಾಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ತನಿಖೆ ನಡೆಯಲಿ. ಕಾನೂನು ಹೋರಾಟ ಎದುರಿಸುತ್ತೇನೆ ಎಂದು ಹೇಳಿದ್ದಾರೆ.
ನ್ಯಾಯಾಲಯದ ಬಗ್ಗೆ ಅತ್ಯಂತ ಗೌರವವಿದೆ:
ಕಾಂಗ್ರೆಸ್ ಹೈಕಮಾಂಡ್, ಶಾಸಕರು, ಸಚಿವರು ಮುಖ್ಯಮಂತ್ರಿ ಜತೆ ಇದ್ದೇವೆ. ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದೆ ಎಂದಿದ್ದಾರೆ. ಇದನ್ನು ಹೊರತುಪಡಿಸಿ ನ್ಯಾಯಾಲಯದ ತೀರ್ಪು ಬಗ್ಗೆ ಯಾವುದೇ ಅಭಿಪ್ರಾಯ ತಿಳಿಸಲಿಲ್ಲ. ರಾಜಕೀಯ ಪ್ರೇರಿತ ಆರೋಪ ಇದಾಗಿದೆ ಎಂಬುದೇ ನನ್ನ ವಾದವಾಗಿದೆ. ನನಗೆ ಎಂದಿಗೂ ನ್ಯಾಯಾಲಯದ ಬಗ್ಗೆ ಅತ್ಯಂತ ಗೌರವ ಇದೆ. ಒಂದೊಮ್ಮೆ ಬಾಯಿ ತಪ್ಪಿ ಹೇಳಿದ್ದರೆ ಕ್ಷಮೆಯಾಚಿಸಲು ಸಿದ್ಧ ಎಂದು ಅವರು ಹೇಳಿದ್ದಾರೆ.
ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಸರಿ ಇದೆ. ತನಿಖೆ ನಡೆಯಬೇಕು ಎಂದು ತೀರ್ಪು ಪ್ರಕಟವಾಗಿದೆ. ಈ ತೀರ್ಪಿನ ಬಗ್ಗೆ ಮಾತನಾಡುವಾಗ ವಸತಿ ಸಚಿವ ಜಮೀರ್ ಅವರ ಪೊಲಿಟಿಕಲ್ ಜಡ್ಜ್ ಮೆಂಟ್ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು.
ಜಮೀರ್ ವಿರುದ್ಧ ಬಿಜೆಪಿ ಮುಖಂಡ ಯತ್ನಾಳ್ ಕಿಡಿ:
ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಉಲ್ಲೇಖಿಸಿ, ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ ಕೂಡ ಸೋಷಿಯಲ್ ಮೀಡಿಯಾ ಎಕ್ಸ್ನಲ್ಲಿ ಟ್ವೀಟ್ ಮಾಡಿದ್ದ ಅವರು, ತಮಗೆ ಅರಿವಿಲ್ಲದ, ಅರ್ಥ ಆಗದ ವಿಚಾರಗಳ ಬಗ್ಗೆ ಮಾತನಾಡೋದು ಮೂರ್ಖತನ. ಇವರು (ಜಮೀರ್) ಮಾಡಿದ್ದು ಸಹ ಅದೇ ವಿಜ್ಞಾನ, ಸಮಾಜ, ಗಣಿತ, ಭೂಗೋಳ, ಕನಿಷ್ಠ ಕಾನೂನಿನ ಅರಿವು ಏಕೆ ಕಲಿಯಬೇಕು ಹಾಗೂ ಅಧ್ಯಯನ ಮಾಡಬೇಕು ಎನ್ನುವುದಕ್ಕೆ ಇದೊಂದು ಉತ್ತಮ ಉದಾಹರಣೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ಸಾಧ್ಯತೆ
MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್ ನುಡಿ
MUDA Scam: ಸಿಎಂ ರಾಜೀನಾಮೆಗೆ ಕೋಳಿವಾಡ ಆಗ್ರಹ; ಕಾಂಗ್ರೆಸ್ ನಾಯಕರ ಭಿನ್ನರಾಗ
Cabinet Decision: ನಿರೀಕ್ಷೆಯಂತೆ ಕಸ್ತೂರಿ ರಂಗನ್ ವರದಿ ತಿರಸ್ಕಾರ
MUDA Scam: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ನಾಯಕರ ಪಟ್ಟು ಬಿಗಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.