Moodbidri: ವಿದ್ಯಾರ್ಥಿಗೆ ಕಾರು ಢಿಕ್ಕಿ: ಸಾವು
Team Udayavani, Sep 26, 2024, 11:24 PM IST
ಮೂಡುಬಿದಿರೆ: ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದು ಚರಂಡಿಗೆಸೆಯಲ್ಪಟ್ಟು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 169 ಹಾದು ಹೋಗುವ ಮೂಡುಬಿದಿರೆ ಹೊರವಲಯದಲ್ಲಿರುವ ಬನ್ನಡ್ಕದಲ್ಲಿ ಗುರುವಾರ ಮಧ್ಯಾಹ್ನದ ಸುಮಾರಿಗೆ ಸಂಭವಿಸಿದೆ.
ಪಡುಮಾರ್ನಾಡು ಗ್ರಾ.ಪಂ. ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ, ಮೂಡುಬಿದಿರೆ ಜೈನ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಆದಿತ್ಯ (14) ಮೃತಪಟ್ಟವರು. ಈತ ಪಡುಮಾರ್ನಾಡು ಗ್ರಾ.ಪಂ. ವ್ಯಾಪ್ತಿಯ ಅಚ್ಚರಕಟ್ಟೆ ನಿವಾಸಿ ರವಿ ಅವರ ಪುತ್ರ.
ಬನ್ನಡ್ಕದಲ್ಲಿ ಬಸ್ಸಿನಿಂದಿಳಿದು ರಸ್ತೆ ದಾಟುವ ಸಂದರ್ಭ ಕಾರ್ಕಳ ಕಡೆಯಿಂದ ವೇಗವಾಗಿ ಬರುತ್ತಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಚಲಾಯಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿತ್ತು. ತತ್ಕ್ಷಣ ಆಸ್ಪತ್ರೆಗೆ ಕರೆದೊಯ್ದರಾದರೂ, ಅಧಿಕ ರಕ್ತಸ್ರಾವವಾಗಿ ವಿದ್ಯಾರ್ಥಿ ಸಾವಿಗೀಡಾದರು. ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆಯಿಂದಾಗಿ ಎದುರಿನಲ್ಲಿ ಬರುತ್ತಿರುವ ವಾಹನಗಳು ಗಮನಕ್ಕೆ ಬಾರದೆ ರಸ್ತೆ ಅವಘಡಗಳು ಈ ಭಾಗದಲ್ಲಿ ಸಂಭವಿಸುತ್ತಿವೆ ಎಂದು ಸಾರ್ವಜನಿಕರು ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ರಾಜೀನಾಮೆ ಕೇಳುವ ನೈತಿಕತೆ ಬಿಜೆಪಿಗಿಲ್ಲ:ಮಂಜುನಾಥ ಭಂಡಾರಿ
Legislative Council Election: ಅಂತಿಮಗೊಳ್ಳದ ಅಭ್ಯರ್ಥಿಗಳು
Mangaluru: ಅಮೆರಿಕದಲ್ಲಿ ಯಕ್ಷಗಾನಕ್ಕೆ ಸಿಕ್ಕ ಗೌರವ ಅವಿಸ್ಮರಣೀಯ: ಪಟ್ಲ ಸತೀಶ್ ಶೆಟ್ಟಿ
Kaun Banega Crorepati ಸ್ಪರ್ಧಿ ಅಪೂರ್ವ ಶೆಟ್ಟಿ; 2 ವರ್ಷಗಳ ಪ್ರಯತ್ನಕ್ಕೆ ಸಿಕ್ಕಿದ ಫಲ
Mangaluru: ಬಡ್ಡಿ ಸಹಿತ ಪಾವತಿಸುವಂತೆ ಗ್ರಾಹಕ ನ್ಯಾಯಾಲಯ ಆದೇಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.