Belagavi: ಸಾಲಗಾರರ ಕಿರುಕುಳದಿಂದ ಬೇಸತ್ತು ನೇಕಾರ ಆತ್ಮ*ಹತ್ಯೆ
ಮಾರಿಹಾಳ ಪೊಲೀಸ್ ಠಾಣೆಗೆ ಕುಟುಂಬಸ್ಥರಿಂದ ದೂರು, 20 ದಿನದಲ್ಲಿ ಇಬ್ಬರು ನೇಕಾರರ ಆತ್ಮ*ಹತ್ಯೆ
Team Udayavani, Sep 26, 2024, 11:52 PM IST
ಬೆಳಗಾವಿ: ಸಾಲಬಾಧೆಯಿಂದ ನೇಕಾರನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಗುರುವಾರ ನಡೆದಿದ್ದು, ಕೇವಲ 20 ದಿನಗಳ ಅವಧಿಯಲ್ಲಿ ಈ ಗ್ರಾಮದಲ್ಲಿ ಇಬ್ಬರು ನೇಕಾರರು ಆತ್ಮ*ಹತ್ಯೆ ಮಾಡಿಕೊಂಡಂತಾಗಿದೆ.
ಸುಳೇಭಾವಿ ಗ್ರಾಮದ ಕಿರಣ ಬಾಳಣ್ಣ ಗೋಕಾವಿ (32) ಎಂಬ ಯುವ ನೇಕಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗ್ರಾಮದ ವಿವಿಧ ಕಡೆಗೆ ಕೈಗಡ ಸಾಲ ಪಡೆದಿದ್ದನು. ಜತೆಗೆ ಸೊಸೈಟಿಯಲ್ಲಿಯೂ ಸಾಲ ಪಡೆದಿದ್ದನು. ಸಾಲಗಾರರ ಕಿರುಕುಳ ತಾಳಲಾರದೇ ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿದ್ಯುತ್ ಮಗ್ಗದ ಕೋಣೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ. 4ರಂದು ಸಾಲಬಾಧೆಯಿಂದ ಇದೇ ಗ್ರಾಮದ ವಾಡೇ ಗಲ್ಲಿಯ ನೇಕಾರ ಪರುಶರಾಮ ಕಲ್ಲಪ್ಪ ವಾಗೂಕರ(47) ಆತ್ಮಹತ್ಯೆ ಮಾಡಿಕೊಂಡಿದ್ದನು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿದ್ಯಾರ್ಥಿನಿಯಿಂದ ಹನಿಟ್ರ್ಯಾಪ್; ಯುವಕನಿಂದ ಹಣ ದೋಚಿದ್ದ ಗ್ಯಾಂಗ್ ಬಂಧನ
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
Bailhongal: ಸಾರಿಗೆ ಬಸ್ ಅಪಘಾತ; ನಿರ್ವಾಹಕ ಸೇರಿ 6 ಪ್ರಯಾಣಿಕರಿಗೆ ಗಾಯ
Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ
ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.