Test; ದಿನೇಶ್ ಚಂಡಿಮಾಲ್ ಆಕರ್ಷಕ ಶತಕ :ಉತ್ತಮ ಸ್ಥಿತಿಯಲ್ಲಿ ಶ್ರೀಲಂಕಾ
Team Udayavani, Sep 27, 2024, 12:23 AM IST
ಗಾಲೆ: ಪ್ರವಾಸಿ ನ್ಯೂಜಿಲ್ಯಾಂಡ್ ತಂಡದೆದುರಿನ ದ್ವಿತೀಯ ಟೆಸ್ಟ್ನಲ್ಲಿ ದಿನೇಶ್ ಚಂಡಿಮಾಲ್ ಅವರ ಆಕರ್ಷಕ ಶತಕದಿಂದಾಗಿ ಶ್ರೀಲಂಕಾ ತಂಡವು ಉತ್ತಮ ಸ್ಥಿತಿಯಲ್ಲಿದೆ. ದಿನದಾಟದ ಅಂತ್ಯಕ್ಕೆ ಆತಿಥೇಯ ತಂಡವು ಮೂರು ವಿಕೆಟ್ ಕಳೆದುಕೊಂಡಿದ್ದು 306 ರನ್ ಗಳಿಸಿದೆ.
ಇನ್ನಿಂಗ್ಸ್ ಆರಂಭಿಸಿದ ಶ್ರೀಲಂಕಾ ತಂಡವು ಪಥುಮ್ ನಿಸ್ಸಂಕ ಅವರ ವಿಕೆಟನ್ನು ಬೇಗನೇ ಕಳೆದುಕೊಂಡಿತು. ಆಬಳಿಕ ದಿಮುತ್ ಕರುಣರತ್ನ ಅವರನ್ನು ಸೇರಿಕೊಂಡ ದಿನೇಶ್ ಚಂಡಿಮಾಲ್ ತಾಳ್ಮೆಯಿಂದ ಆಡಿ ತಂಡವನ್ನು ಆಧರಿಸಿದರು. ಅವರಿಬ್ಬರು ದ್ವಿತೀಯ ವಿಕೆಟಿಗೆ 122 ರನ್ ಪೇರಿಸಿದ ಬಳಿಕ ಬೇರ್ಪಟ್ಟರು. ಈ ಹಂತದಲ್ಲಿ 46 ರನ್ ಗಳಿಸಿದ್ದ ಕರುಣರತ್ನ ಔಟಾದರು.
ದಿನೇಶ್ ಮತ್ತೆ ಏಂಜೆಲೊ ಮ್ಯಾಥ್ಯೂಸ್ ಜತೆಗೂಡಿ ಮೂರನೇ ವಿಕೆಟಿಗೆ 98 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ತಂಡದ ಉತ್ತಮ ಮೊತ್ತಕ್ಕೆ ಕಾರಣರಾದರು. ಈ ನಡುವೆ ಶತಕ ಪೂರೈಸಿದ ದಿನೇಶ್ ಸ್ವಲ್ಪಹೊತ್ತಿನಲ್ಲಿ ಔಟಾದರು. 208 ಎಸೆತ ಎದುರಿಸಿದ ಅವರು 15 ಬೌಂಡರಿ ನೆರವಿನಿಂದ 116 ರನ್ ಗಳಿಸಿ ಔಟಾದರು.
ಏಂಜೆಲೊ ಮ್ಯಾಥ್ಯೂಸ್ ಮತ್ತು ಕಮಿಂಡು ಮೆಂಡಿಸ್ ಅವರು ಎಚ್ಚರಿಕೆಯ ಆಟವಾಡಿ ಇನ್ನಷ್ಟು ಕುಸಿತ ಆಗದಂತೆ ನೋಡಿಕೊಂಡರು. ಮುರಿಯದ ನಾಲ್ಕನೇ ವಿಕೆಟಿಗೆ ಅವರಿಬ್ಬರು ಈಗಾಗಲೇ 85 ರನ್ ಪೇರಿಸಿದ್ದಾರೆ. ಮ್ಯಾಥ್ಯೂಸ್ 78 ಮತ್ತು ಮೆಂಡಿಸ್ 51 ರನ್ನುಗಳಿಂದ ಆಡುತ್ತಿದ್ದಾರೆ.
ಸಂಕ್ಷಿಪ್ತ ಸ್ಕೋರು: ಶ್ರೀಲಂಕಾ ಪ್ರಥಮ ಇನ್ನಿಂಗ್ಸ್: ಮೂರು ವಿಕೆಟಿಗೆ 306 (ದಿನೇಶ್ ಚಂಡಿಮಾಲ್ 116, ದಿಮುತ್ ಕರುಣರತ್ನ 46, ಏಂಜೆಲೊ ಮ್ಯಾಥ್ಯೂಸ್ 78 ಬ್ಯಾಟಿಂಗ್, ಕಮಿಂಡು ಮೆಂಡಿಸ್ 51 ಬ್ಯಾಟಿಂಗ್).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Santhekatte Road ; ಸ್ವಾಮಿ, ನಮ್ಮ ಗೋಳನ್ನೂ ಕೇಳಿ ಸ್ವಲ್ಪ
Karnataka; ರಾಜ್ಯ ಟೆನಿಸ್ ಅಂಕಣಗಳಿಗೆ ಅತ್ಯಾಧುನಿಕ ಸ್ಪರ್ಶ
Udupi: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್, ಎಂಆರ್ಐ ಸೇವೆ ವ್ಯತ್ಯಯ
Clean sweep ನಿರೀಕ್ಷೆಯಲ್ಲಿ ಭಾರತ: ಬಾಂಗ್ಲಾ ವಿರುದ್ಧದ ದ್ವಿತೀಯ ಟೆಸ್ಟ್ ಇಂದಿನಿಂದ
Minimum wages; ಅಸಂಘಟಿತ ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.