Cabinet: ಗವರ್ನರ್ ಗೆ ಮಾಹಿತಿ: ಸಂಪುಟಕ್ಕಷ್ಟೇ ಪವರ್‌;ನೇರ ವಿವರ ನೀಡುವ ಅಧಿಕಾರಕ್ಕೆ ಕತ್ತರಿ


Team Udayavani, Sep 27, 2024, 7:00 AM IST

Cabinet: ಗವರ್ನರ್ ಗೆ ಮಾಹಿತಿ: ಸಂಪುಟಕ್ಕಷ್ಟೇ ಪವರ್‌;ನೇರ ವಿವರ ನೀಡುವ ಅಧಿಕಾರಕ್ಕೆ ಕತ್ತರಿ

ಬೆಂಗಳೂರು: ರಾಜ್ಯ ಸರಕಾರದ ನಡೆಯ ಬಗ್ಗೆ ಪದೇ ಪದೆ ಸ್ಪಷ್ಟೀಕರಣ ಕೇಳುತ್ತಿರುವ ರಾಜ್ಯಪಾಲರ ಪತ್ರಗಳಿಗೆ ಉತ್ತರ ನೀಡುವು ದಕ್ಕೆ ಮುನ್ನ ಅಧಿಕಾರಿಗಳು ಸಚಿವ ಸಂಪುಟ ಸಭೆಯ ಗಮನಕ್ಕೆ ತರುವುದನ್ನು ರಾಜ್ಯ ಸರಕಾರ ಕಡ್ಡಾಯಗೊಳಿ ಸಿದೆ. ಹೀಗಾಗಿ ಇನ್ನು ಮುಂದೆ ರಾಜ್ಯಪಾಲರು ಕೇಳುವ ಯಾವುದೇ ಸ್ಪಷ್ಟೀಕರಣಕ್ಕೂ ರಾಜ್ಯ ಮುಖ್ಯ ಕಾರ್ಯದರ್ಶಿ ನೇರವಾಗಿ ಉತ್ತರಿಸು ವಂತಿಲ್ಲ. ಈ ಮೂಲಕ ರಾಜ್ಯ ಸರಕಾರ ಹಾಗೂ ರಾಜ್ಯಪಾಲರ ನಡುವಿನ ಸಮರ ತಾರಕಕ್ಕೇರಿದಂತಾಗಿದೆ.

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರಕಾರ ಈ ಮಹತ್ವದ ನಿರ್ಣಯವನ್ನು ತೆಗೆದುಕೊಂಡಿದೆ.

ರಾಜಭವನ-ಉತ್ತರಕ್ಕೆ ಅಂಕುಶ
ರಾಜ್ಯಪಾಲರು ಮೇಲಿಂದ ಮೇಲೆ ಸರಕಾರಕ್ಕೆ ಬರೆದ ಪತ್ರ ಅಥವಾ ಸ್ಪಷ್ಟೀಕರಣಗಳಿಗೆ ಉತ್ತರ ನೀಡುವ ಸಂದರ್ಭದಲ್ಲಿ ಸಚಿವಾಲಯ, ಮುಖ್ಯ ಕಾರ್ಯದರ್ಶಿ ಸಹಿತ ವಿವಿಧ ಇಲಾಖೆಗಳ ಸ್ವಾಯತ್ತೆಗೂ ಸಚಿವ ಸಂಪುಟ ತಡೆಯೊಡ್ಡಿದೆ.

ವಿಶೇಷವಾಗಿ ಅರ್ಕಾವತಿ ರೀಡೂ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ವರದಿ ಕೇಳಿದ ಬಳಿಕ ಎಚ್ಚೆತ್ತುಕೊಂಡಿರುವ ಸರಕಾರ ಈ ನಿರ್ಣಯವನ್ನು ತೆಗೆದುಕೊಂಡಿದೆ.

ಈ ಬಗ್ಗೆ ವಿವರಣೆ ನೀಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌.ಕೆ. ಪಾಟೀಲ್‌, ರಾಜ್ಯಪಾಲರು ಮೇಲಿಂದ ಮೇಲೆ ಒಂದು ರೀತಿಯ ಅಸಹನೆಗೆ ಒಳಪಟ್ಟವರಂತೆ ರಾಜ್ಯ ಸರಕಾರಕ್ಕೆ ಪತ್ರ ಬರೆಯುತ್ತಿದ್ದಾರೆ.

ಮಾಹಿತಿಯನ್ನು ತತ್‌ಕ್ಷಣ ಕಳುಹಿಸಲು ಸೂಚನೆ ಕೊಡುತ್ತಿದ್ದಾರೆ. ಹೀಗಾಗಿ ಎಲ್ಲ ನಿಯಮಾವಳಿಗಳನ್ನು ಪರಿಶೀಲಿಸಿ, ಯಾವುದೇ ಮಾಹಿತಿಯನ್ನು ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಅಥವಾ ಇಲಾಖಾವಾರು ಆಗಿ ರಾಜ್ಯಪಾಲರಿಗೆ ಕಳುಹಿಸುವ ಸಂದರ್ಭದಲ್ಲಿ ಸಚಿವ ಸಂಪುಟ ಸಭೆಯ ಮುಂದೆ ತಂದು ಸಚಿವ ಸಂಪುಟದ ನಿರ್ಣಯದಂತೆ ಮುಂದುವರಿಯುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಲಾಗಿದೆ ಎಂದರು.

ತನಿಖೆ ಪ್ರಸ್ತಾವ
ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಇರುವ, ಲೋಕಾಯುಕ್ತದಿಂದ ಸ್ವೀಕೃತವಾಗಿರುವ ಅಭಿಯೋಜನ ಮಂಜೂರಾತಿ ಪ್ರಕರಣಗಳ ಕುರಿತ ಮಾಹಿತಿ ಹೇಗೆ ಸೋರಿಕೆಯಾಯಿತು ಎಂಬ ಬಗ್ಗೆ ತನಿಖೆ ನಡೆಸಬೇಕೆಂದು ರಾಜ್ಯಪಾಲರು ಕರ್ನಾಟಕ ಸರಕಾರದ ಪೊಲೀಸ್‌ ಮಹಾನಿರ್ದೇಶಕರಿಗೆ ಆ. 17ರಂದು ಸೂಚಿಸಿದ್ದರು. ಪೊಲೀಸ್‌ ಮಹಾನಿರ್ದೇಶಕರು ಆ. 20ರಂದು ಈ ಬಗ್ಗೆ ಲೋಕಾಯುಕ್ತ ಎಸ್‌ಐಟಿ ಡಿಐಜಿಗೆ ಪತ್ರ ಬರೆದು ಈ ಬಗ್ಗೆ ವಿವರ ಕೇಳಿದ್ದರು. ರಾಜಭವನವು ಸಚಿವಾಲಯಕ್ಕೆ ಸಂಬಂಧಪಟ್ಟಂತೆ ಯಾವ ಹಂತದಲ್ಲಿ ಮಾಹಿತಿ ಸೋರಿಕೆಯಾಗಿದೆ, ದಾಖಲೆಗಳು ಬಹಿರಂಗಗೊಂಡಿವೆ ಎಂಬ ಬಗ್ಗೆ ತನಿಖೆ ನಡೆಸಲು ತಮಗೆ ಅನುಮತಿ ನೀಡಬೇಕೆಂದು ಐಜಿಪಿ ಕೇಳಿರುತ್ತಾರೆ. ಹೀಗಾಗಿ ಈ ಬಗ್ಗೆ ರಾಜ್ಯಪಾಲರು ಬಯಸಿದರೆ ತನಿಖೆ ನಡೆಸುವುದಕ್ಕೆ ಸರಕಾರ ಮುಂದಾಗಿದೆ.

ಏನಿದು ನಿರ್ಧಾರ?
-ಈವರೆಗೆ ರಾಜ್ಯಪಾಲರಿಗೆ ಸಚಿವಾ ಲಯ, ಮುಖ್ಯ ಕಾರ್ಯದರ್ಶಿ ಯಿಂದ ನೇರವಾಗಿ ಮಾಹಿತಿ
-ಇನ್ನು ಮುಂದೆ ಸಚಿವ ಸಂಪುಟಕ್ಕೆ ಮಾತ್ರ ರಾಜ್ಯಪಾಲರಿಗೆ ಮಾಹಿತಿ ನೀಡುವ ಅಧಿಕಾರ

ಯಾಕೆ ಈ ನಿರ್ಧಾರ?
-ಸಂಪುಟಕ್ಕೆ ಅರಿವಿಲ್ಲದೆ ರಾಜ್ಯಪಾಲ ರಿಗೆ ಮಾಹಿತಿ ರವಾನೆ ತಪ್ಪಿಸಲು
-ವಿವೇಚಿಸಿ ಮಾಹಿತಿ ನೀಡಲು
-ನೇರ ಉತ್ತರದಿಂದ ಮುಜುಗರ ಉಂಟಾಗುವುದನ್ನು ತಪ್ಪಿಸಲು

 

ಟಾಪ್ ನ್ಯೂಸ್

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್

1

World Tourism Day 2024: “ಕರ್ನಾಟಕ ಒಂದು ರಾಜ್ಯ…ಇಲ್ಲಿದೆ ವಿಸ್ಮಯದ ಹಲವು ಜಗತ್ತು”

upendra

Upendra Movie: ರೀ ರಿಲೀಸ್‌ ನಲ್ಲೂ ʼಉಪೇಂದ್ರʼನಿಗೆ ಜೈ ಎಂದ ಪ್ರೇಕ್ಷಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Kottigehara: ಮಾವನ ಮನೆಗೆ ಪಿತೃ ಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ

Kottigehara: ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ

CM-Mysore1

MUDA Scam: ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್‌ ಸಾಧ್ಯತೆ

CM-vidhna

MUDA Scam: ರಾಜೀನಾಮೆ ಪ್ರಶ್ನೆಯೇ ಇಲ್ಲ: ಮತ್ತೆ ಸಿಎಂ ಸಿದ್ದರಾಮಯ್ಯ ಖಡಕ್‌ ನುಡಿ

koliwada

MUDA Scam: ಸಿಎಂ ರಾಜೀನಾಮೆಗೆ ಕೋಳಿವಾಡ ಆಗ್ರಹ; ಕಾಂಗ್ರೆಸ್‌ ನಾಯಕರ ಭಿನ್ನರಾಗ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Arrested: ಬೈಕ್‌, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ

Arrested: ಬೈಕ್‌, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.