Tourism Spot: ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ ತಾಣವಾಗಲಿದೆ ಕುಂದಾಪುರದ ತ್ರಾಸಿ

ಇಂದು ವಿಶ್ವ ಪ್ರವಾಸೋದ್ಯಮ ದಿನ; ಏಕಕಾಲದಲ್ಲಿ 16 ಮಂದಿ ಕುಳಿತು ಆಹಾರ ಸೇವಿಸುವ ಅವಕಾಶ

Team Udayavani, Sep 27, 2024, 7:50 AM IST

Sky-dia

ಪಣಂಬೂರು ಬೀಚ್‌ ಬಳಿಕ ಕುಂದಾಪುರದ ತ್ರಾಸಿಯ ಕಡಲ ಕಿನಾರೆಯು ರಾಜ್ಯದ ಎರಡನೇ “ಸ್ಕೈ ಡೈನಿಂಗ್‌’ (ಗಗನದಲ್ಲಿ ಊಟ) ತಾಣ ವಾಗಲಿದೆ. ನೆಲ ಮಟ್ಟದಿಂದ ಸುಮಾರು 60-70 ಅಡಿ ಎತ್ತರದಲ್ಲಿ ತ್ರಾಸಿ- ಮರವಂತೆ ಕಡಲು- ಸೌಪರ್ಣಿಕಾ ನದಿ ಮಧ್ಯೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯ ಅತ್ಯದ್ಭುತ ಸೊಬಗನ್ನು ಕಣ್ತುಂಬಿಕೊಳ್ಳುವ ಜತೆಗೆ, ರುಚಿಕ ರವಾದ ತಿನಿಸುಗಳನ್ನು ಸವಿ ಯುವ ಅವಕಾಶ ಇದಾಗಿದೆ.

ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಯಿಂದ ಕಾರ್ಯಾದೇಶ ನೀಡ ಲಾಗಿದ್ದು, ಅದಕ್ಕೆ ಬೇಕಾದ ಅನುಮತಿ, ಸುರಕ್ಷೆ ಕ್ರಮಗಳ ಪರಿಶೀಲನೆಯೂ ಆಗಿದೆ. ಇದಕ್ಕೆ ಅಗತ್ಯ ಸಿದ್ಧತೆಗಳೂ ನಡೆಯು ತ್ತಿದ್ದು, 15-20 ದಿನಗಳೊಳಗೆ ಈ “ಸ್ಕೈ ಡೈನಿಂಗ್‌’ ಆರಂಭಗೊಳ್ಳುವ ಸಾಧ್ಯತೆಯಿದೆ. ಇದರಿಂದಾಗಿ ತ್ರಾಸಿ – ಮರವಂತೆ ಬೀಚ್‌ ಮತ್ತಷ್ಟು ಆಕರ್ಷಣೀಯವಾಗಲಿದೆ.

ಏನಿದು ಸ್ಕೈ ಡೈನಿಂಗ್‌?
ಟೀಮ್‌ ಮಂತ್ರಾಸ್‌ ಇಂಟರ್‌ನ್ಯಾಶನಲ್‌ ಸಂಸ್ಥೆಯು ಸ್ಕೈ ಡೈನಿಂಗ್‌ ಯೋಜನೆಯನ್ನು ನಿರ್ವಹಿಸಲಿದೆ. ಪಾರದರ್ಶಕ ಗಾಜು ಮತ್ತು ಕಬ್ಬಿಣದಿಂದ ನಿರ್ಮಿಸಲಾದ ಕ್ಯಾಬಿನ್‌ ಅನ್ನು ಕ್ರೇನ್‌ ಬಳಸಿ ಸುಮಾರು 60-70 ಅಡಿ ಎತ್ತರಕ್ಕೆ ಏರಿಸಲಾಗುತ್ತದೆ. ಏಕಕಾಲದಲ್ಲಿ 16 ಮಂದಿ ಕುಳಿತು ಆಹಾರ ಸೇವಿಸುವ ಅವಕಾಶವಿದೆ. ಇಷ್ಟು ಎತ್ತರದಿಂದ ಕಡಲು, ಹೆದ್ದಾರಿ, ನದಿಯ ವಿಹಂಗಮ ನೋಟವನ್ನು ಸವಿಯುವುದರ ಜತೆಗೆ ಸಂಗೀತ ವನ್ನು ಆಸ್ವಾದಿಸಿಕೊಳ್ಳಬಹುದು. ಅಡುಗೆ ಮತ್ತು ತಾಂತ್ರಿಕ ಸಿಬಂದಿಗೆ ಪ್ರತ್ಯೇಕ ಕ್ಯಾಬಿನ್‌ ಇರಲಿದೆ. ಸ್ಕೈ ಡೈನಿಂಗ್‌ ಇತ್ತೀಚೆಗಿನ ದಿನಗಳಲ್ಲಿ ದೇಶಾದ್ಯಂತ ಜನಪ್ರಿಯತೆ ಗಳಿಸುತ್ತಿದ್ದು, ರಾಜ್ಯದಲ್ಲಿ ಇನ್ನಷ್ಟೇ ಪ್ರಸಿದ್ಧಿ ಪಡೆಯಬೇಕಿದೆ.

ತ್ರಾಸಿ – ಮರವಂತೆ ಬೀಚ್‌ ರಾಜ್ಯದ ಅತ್ಯಂತ ಸುಂದರ ಹಾಗೂ ವಿಶಿಷ್ಟವಾದ ಕಡಲ ತೀರ. ಸ್ಕೈ ಡೈನಿಂಗ್‌ ಮೂಲಕ ಅಪರೂಪವಾದ ವರಾಹ ಶ್ರೀ ಮಹಾ ರಾಜ ಸ್ವಾಮಿ ದೇವಸ್ಥಾನ, ಮೀನುಗಾರಿಕೆ ದೋಣಿಗಳು, ಹೊರ ಬಂದರು, ಮರವಂತೆ ಕುದ್ರುವನ್ನು ಕೂಡ ವೀಕ್ಷಿಸ ಬಹುದು. ಹೆದ್ದಾರಿಯಲ್ಲಿ ಸಂಚರಿಸುವ ಪಯಣಿಗರನ್ನು ಆಕರ್ಷಿಸುತ್ತಿದ್ದ ಬೀಚ್‌ ಈ ಸ್ಕೈ ಡೈನಿಂಗ್‌ನಿಂದಾಗಿ ಮತ್ತಷ್ಟು ಪ್ರವಾಸಿಗರನ್ನು ತನ್ನತ್ತ ಸೆಳೆಯಬಹುದು.

“ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ಖಾಸಗಿಯವರಿಗೆ ಕಾರ್ಯಾದೇಶ ನೀಡಲಾಗಿದ್ದು, ಅವರು ಸಿದ್ಧತೆ ಆರಂಭಿಸುತ್ತಿದ್ದಾರೆ. ಅಗತ್ಯ ಸುರಕ್ಷೆಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಂದಿನ 15 ದಿನಗಳೊಳಗೆ ಆರಂಭಗೊಳ್ಳುವ ನಿರೀಕ್ಷೆಯಿದೆ. ಇದು ಬೀಚ್‌ ಪ್ರವಾಸೋದ್ಯಮ ನಿಟ್ಟಿನಲ್ಲಿ ಪ್ರವಾಸಿಗರನ್ನು ಸೆಳೆಯುವ ನಿಟ್ಟಿನಲ್ಲಿ ಹೊಸ ಹೆಜ್ಜೆಯಾಗಿದೆ.”
– ಕುಮಾರ್‌ ಸಿ.ಯು. ಸ.ನಿರ್ದೇಶಕ, ಪ್ರವಾಸೋದ್ಯಮ ಇಲಾಖೆ ಉಡುಪಿ

– ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Kulasekhara: ಬೈಕ್ ಗಳ ನಡುವೆ ಅಪಘಾತ… ಸವಾರ ಮೃತ್ಯು

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Success Story-ಮುನಿಯಾಲ್‌ To ಅಬುಧಾಬಿ; ಯಶಸ್ವಿ ಹೋಟೆಲ್‌ ಉದ್ಯಮಿ ಸುಂದರ ಶೆಟ್ಟಿ ಜೀವನಗಾಥೆ

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Celebrity Corner:ಕಾಲೇಜುಗಳು ಕಲಿಸುತ್ತವೆಂದು ಕಾಯದಿರಿ-ಆದಾಯದ ಮಾಡೆಲ್‌ ಎಂದರೇನು?

Bellary: Siddaramaiah, who said corruption is unforgivable, should resign now: Sri Ramulu

Bellary: ಭ್ರಷ್ಟಾಚಾರ ಕ್ಷಮಿಸಲಾಗದು ಎಂದಿದ್ದ ಸಿದ್ದರಾಮಯ್ಯ ಈಗ ರಾಜೀನಾಮೆ ಕೊಡಬೇಕು: ರಾಮುಲು

Dwayne Bravo replaces Gautam Gambhir as KKR mentor

IPL 2025: ಗಂಭೀರ್‌ ಜಾಗಕ್ಕೆ ಹೊಸ ಮೆಂಟರ್‌ ಘೋಷಿಸಿದ ಕೋಲ್ಕತ್ತಾ ನೈಟ್‌ ರೈಡರ್ಸ್

1

World Tourism Day 2024: “ಕರ್ನಾಟಕ ಒಂದು ರಾಜ್ಯ…ಇಲ್ಲಿದೆ ವಿಸ್ಮಯದ ಹಲವು ಜಗತ್ತು”


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koderi

World Tourism Day: ಪ್ರವಾಸೋದ್ಯಮಕ್ಕೆ ಸಿಗಲಿ ಉತ್ತೇಜನ

16-cinema

UV Fusion: Cinema- ದಿ ರೆಡ್ ಬಲೂನ್, ಅಮೋರ್

15-uv-fusion

UV Fusion: ಬ್ಯಾಗ್‌ ಹಿಡಿದವರಿಗೊಂದು ಥ್ಯಾಂಕ್ಸ್‌

14-tourism

Netravati Trek: ದಿ ನೆಕ್ಸ್ಟ್ ಸ್ಟಾಪ್‌ ಈಸ್‌ ನೇತ್ರಾವತಿ ಪೀಕ್‌!

8-uv-fusion

School Memories: ತರಗತಿಯಲ್ಲಿ ಉಪ್ಪುಖಾರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

6-araga

Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ

Sandalwood; ಮುಂದಿನ ಭಾಗದಲ್ಲಿ ನಿರೀಕ್ಷಿಸಿ.. ಸ್ಯಾಂಡಲ್‌ವುಡ್‌ನ‌ಲ್ಲಿ ಪಾರ್ಟ್‌-2 ಕ್ರೇಜ್‌

Sandalwood; ‘ಮುಂದಿನ ಭಾಗದಲ್ಲಿ ನಿರೀಕ್ಷಿಸಿ..’ ಸ್ಯಾಂಡಲ್‌ವುಡ್‌ನ‌ ಪಾರ್ಟ್‌-2 ಕ್ರೇಜ್‌

012

High Court: ಜೈಲಿನಲ್ಲಿ ಆತಿಥ್ಯ; ಕೈದಿ ಕುಳ್ಳ ಸೀನ ವಿರುದ್ಧದ ಕೇಸ್‌ಗೆ ಹೈಕೋರ್ಟ್‌ ತಡೆ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Fraud Case: ಖಾಸಗಿ ಸುದ್ದಿವಾಹಿನಿ ಎಂಡಿ ಬಂಧನ

Arrested: ಬೈಕ್‌, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ

Arrested: ಬೈಕ್‌, ಆಟೋ ಕದಿಯುತ್ತಿದ್ದ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.