Kottigehara: ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ
Team Udayavani, Sep 27, 2024, 10:21 AM IST
ಚಿಕ್ಕಮಗಳೂರು: ಜಗತ್ತಿನಲ್ಲಿ ಯಾವೆಲ್ಲಾ ರೀತಿಯ ಜನರಿರುತ್ತಾರೆ ಎಂದು ತಿಳಿಯಲು ಕೊಟ್ಟಿಗೆಹಾರದ ಈ ವ್ಯಕ್ತಿಯೇ ಸಾಕ್ಷಿ,
ಹೌದು ಇಲ್ಲೊಬ್ಬ ವ್ಯಕ್ತಿ ಪಿತೃ ಪಕ್ಷದ ಊಟಕ್ಕೆ ಮಾವನ ಮನೆಗೆ ಹೋಗಲು ಗಾಡಿ ವ್ಯವಸ್ಥೆ ಇಲ್ಲ ಎಂದು ಪೊಲೀಸ್ ಠಾಣೆಗೆ ಕರೆ ಮಾಡಿ ಪೊಲೀಸರನ್ನೇ ಕರೆಸಿದ ವಿಚಿತ್ರ ಘಟನೆ ಕೊಟ್ಟಿಗೆಹಾರದ ತರುವೆ ಗ್ರಾಮದಳ್ಳಿ ನಡೆದಿದೆ.
ತರುವೆ ಗ್ರಾಮದ ಅಶೋಕ್ ಎಂಬ ವ್ಯಕ್ತಿಯೇ ಪೊಲೀಸರಿಗೆ ಕರೆ ಮಾಡಿ ತನ್ನನ್ನು ಮಾವನ ಮನೆಗೆ ಡ್ರಾಪ್ ಮಾಡುವಂತೆ ಕೇಳಿಕೊಂಡಿದ್ದಾನೆ.
ಏನಿದು ಘಟನೆ:
ಪಿತೃಪಕ್ಷದ ಹಿನ್ನೆಲೆಯಲ್ಲಿ ತರುವೆ ಗ್ರಾಮದ ಅಶೋಕ್ ನಿಗೆ ಮಾವನ ಮನೆಯಾದ ಪಲ್ಗುಣಿ ಗ್ರಾಮಕ್ಕೆ ಹೋಗಬೇಕಾಗಿತ್ತು ಆದರೆ ಅಲ್ಲಿಗೆ ಹೋಗಲು ಸರಿಯಾದ ಬಸ್ಸಿನ ವ್ಯವಸ್ಥೆ ಇರಲಿಲ್ಲ ಅಲ್ಲದೆ ಒಂದೆಡೆ ಮಳೆ ಕೂಡ ಬರುತ್ತಿತ್ತು ಆದರೂ ಮಾವನ ಮನೆಗೆ ಹೋಗದೆ ವಿಧಿಯಿಲ್ಲ ಕೊನೆಗೆ ಅಶೋಕ್ ಒಂದು ಪ್ಲಾನ್ ಮಾಡಿ (ಪೊಲೀಸರಿಗೆ) 112 ಗೆ ಫೋನ್ ಮಾಡಿ ಸರ್… ಪಲ್ಗುಣಿ ಗ್ರಾಮದಲ್ಲಿ ಗಲಾಟೆ ನಡೆಯುತ್ತಿದೆ ಬೇಗ ಬನ್ನಿ ಅಂತ ಮನವಿ ಮಾಡಿಕೊಂಡಿದ್ದಾನೆ ವ್ಯಕ್ತಿಯ ಮಾತು ಕೇಳಿ ತುರುವೇ ಗ್ರಾಮಕ್ಕೆ ಪೊಲೀಸ್ ಬಂದಿದ್ದಾರೆ ಆದರೆ ಗ್ರಾಮದಲ್ಲಿ ಎಲ್ಲೂ ಗಲಾಟೆ ನಡೆದ ವಿಚಾರ ಗೊತ್ತಾಗಿಲ್ಲ. ಬಳಿಕ ಅಶೋಕ್ ಬಳಿ ವಿಚಾರಿಸಿದಾಗ ಸರ್ ನನ್ನನ್ನೊಂದು ಮಾವನ ಮನೆಗೆ ಡ್ರಾಪ್ ಮಾಡಿ ಸರ್ ಅಲ್ಲಿಗೆ ಹೋಗಲು ಮಳೆ ಕೂಡ ಬರುತ್ತಿದೆ, ಗಾಡಿ ಬೇರೆ ಇಲ್ಲ ಎಂದು ಪೊಲೀಸರ ಬಳಿ ಅಶೋಕ್ ಕೇಳಿಕೊಂಡಿದ್ದಾನೆ ಇದರಿಂದ ಪೊಲೀಸರಿಗೆ ಒಂದು ಕ್ಷಣ ಬೈಯ್ಯಬೇಕೋ… ನಗಬೇಕೋ… ತಿಳಿಯಲಿಲ್ಲ, ಕೊನೆಗೆ ಅಶೋಕ್ ಗೆ ಬುದ್ದಿವಾದ ಹೇಳಿ ಪೊಲೀಸರೇ ರಸ್ತೆಯಲ್ಲಿ ಬರುತ್ತಿದ್ದ ಲಾರಿಯೊಂದನ್ನು ನಿಲ್ಲಿಸಿ ಡ್ರಾಪ್ ನೀಡುವಂತೆ ಹೇಳಿ ಕಳುಹಿಸಿಕೊಟ್ಟಿದ್ದಾರೆ.
ಇದನ್ನೂ ಓದಿ: K. Lakshminarayanana: ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀ ನಾರಾಯಣ ನಿಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!
Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ
Elephant; ಆಂಧ್ರಕ್ಕೆ ದಸರಾ ಆನೆಗಳನ್ನು ಕೊಡುವುದಿಲ್ಲ, ಗೊಂದಲ ಬೇಡ : ಈಶ್ವರ ಖಂಡ್ರೆ
KSRTC; ಸ್ಟೇರಿಂಗ್ ರಾಡ್ ತುಂಡಾಗಿ ಹಳ್ಳಕ್ಕೆ ನುಗ್ಗಿದ ಬಸ್: ಹಲವರಿಗೆ ಗಾಯ
Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ
Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!
Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ
World Tourism Day: ಜಿಲ್ಲೆ ಪ್ರವಾಸೋದ್ಯಮ ಹೆಚ್ಚಳಕ್ಕೆ ಪ್ರಚಾರ
Horrific; ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನೇ ಬ*ಲಿ ನೀಡಿದ ಮಾಲಕ !!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.