Forest; ನೆರೆ ರಾಜ್ಯಗಳ ನಡುವೆ ಸಹಕಾರವಿದ್ದರೆ ಎಲ್ಲ ಸಮಸ್ಯೆ ಪರಿಹಾರ: ಖಂಡ್ರೆ

ಆಂಧ್ರಪ್ರದೇಶಕ್ಕೆ 4 ಕುಮ್ಕಿ ಆನೆ, ಅರಣ್ಯ ಸಂರಕ್ಷಣೆಗೆ ತಂತ್ರಜ್ಞಾನದ ವರ್ಗಾವಣೆ

Team Udayavani, Sep 27, 2024, 4:00 PM IST

1-dddd

ವಿಜಯವಾಡ: ಅರಣ್ಯ, ವನ್ಯಜೀವಿ ಮತ್ತು ಪರಿಸರ ಇಡೀ ಜಗತ್ತಿನ ಸಂಪತ್ತಾಗಿದ್ದು, ಇವುಗಳ ಸಂರಕ್ಷಣೆಗೆ ಎಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಉಭಯ ರಾಜ್ಯಗಳಲ್ಲಿ ವನ, ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆಗೆ ಕರ್ನಾಟಕ ಮತ್ತು ಆಂಧ್ರಪ್ರದೇಶ ಒಗ್ಗೂಡಿ ಶ್ರಮಿಸಲಿವೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.

ವಿಜಯವಾಡದ ಲೆಮನ್ ಟ್ರೀ ಹೊಟೆಲ್ ನಲ್ಲಿ ಶುಕ್ರವಾರ (ಸೆ 27 ) ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರೊಂದಿಗೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮಾತನಾಡಿದ ಅವರು, ಪರಿಸರ, ಅರಣ್ಯ ಮತ್ತು ವನ್ಯಜೀವಿ ನಿರ್ವಹಣೆಯಲ್ಲಿ ಹಲವು ಪ್ರಮುಖ ಸವಾಲುಗಳಿದ್ದು, ಇವುಗಳನ್ನು ಎದುರಿಸಲು ಕರ್ನಾಟಕ ಮತ್ತು ಆಂಧ್ರಪ್ರದೇಶ ಅರಣ್ಯ ಇಲಾಖೆಗಳು ಒಗ್ಗೂಡಿವೆ ಎಂದು ತಿಳಿಸಿದರು. ಇಂದು ಹಲವು ತಿಳಿವಳಿಕೆ ಮಹತ್ವದ ಒಪ್ಪಂದಗಳಿಗೆ ಪವನ್ ಕಲ್ಯಾಣ್ ಮತ್ತು ತಮ್ಮ ಸಮ್ಮುಖದಲ್ಲಿ ಸಹಿ ಹಾಕಲಾಗುತ್ತಿದ್ದು, ಇದರಲ್ಲಿ ವನ್ಯಜೀವಿಗಳನ್ನು ರಕ್ಷಿಸಲು, ನಮ್ಮ ಕಾಡುಗಳನ್ನು ಸಂರಕ್ಷಿಸಲು ಮತ್ತು ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಜನ ಸಮುದಾಯಗಳು ಎದುರಿಸುತ್ತಿರುವ ಸಂಕೀರ್ಣ ಸವಾಲುಗಳನ್ನು ತಗ್ಗಿಸಲು ಸಾಮೂಹಿಕ ಪ್ರಯತ್ನ ಮಾಡುವ ಸಂಕಲ್ಪವೂ ಸೇರಿದೆ ಎಂದರು.

ಈ ತಿಳಿವಳಿಕೆ ಒಪ್ಪಂದಗಳಿಂದ ಕರ್ನಾಟಕ ಗಡಿ ಭಾಗದಲ್ಲಿ ಮಾನವ-ಆನೆ ಸಂಘರ್ಷ ತಗ್ಗುವುದಲ್ಲದೆ, ವನ್ಯಜೀವಿಗಳ ಅಕ್ರಮ ಬೇಟೆ, ಕಳ್ಳಸಾಗಣೆಗೂ ಕಡಿವಾಣ ಬೀಳಲಿದೆ. ಜೊತೆಗೆ ಅರಣ್ಯ ನಿರ್ವಹಣೆಯಲ್ಲಿ ತಂತ್ರಜ್ಞಾನದ ನಿಯೋಜನೆಯಂತಹ ಕ್ಷೇತ್ರಗಳಲ್ಲಿ ನಮ್ಮ ಸಹಕಾರವನ್ನು ಬಲಪಡಿಸುತ್ತದೆ ಎಂದರು. ಆಂಧ್ರಪ್ರದೇಶದ ಚಿತ್ತೂರು, ಪಾರ್ವತಿಪುರಂ ಮನ್ಯಾಮ್ ಗಳಲ್ಲಿ ಮಾನವ – ಆನೆ ಸಂಘರ್ಷ ಹೆಚ್ಚಾಗಿದ್ದು, ಇವುಗಳನ್ನು ಸೆರೆ ಹಿಡಿಯಲು ರಾಜ್ಯದಿಂದ 4 ಕುಮ್ಕಿ ಆನೆಗಳನ್ನು ನೀಡಲಾಗುತ್ತಿದೆ. ಇವುಗಳ ಸುರಕ್ಷಿತ ನಿರ್ವಹಣೆಯ ಖಾತ್ರಿಯನ್ನು ಆಂಧ್ರಪ್ರದೇಶ ನೀಡಿದೆ. ಜೊತೆಗೆ ಈ ಆನೆಗಳನ್ನು ಬಳಸುವ, ಇವುಗಳ ನೆರವಿನಿಂದ ಪುಂಡಾನೆ ಸೆರೆ ಹಿಡಿಯುವ ಮತ್ತು ಪಳಗಿಸುವ ಬಗ್ಗೆ ಆಂಧ್ರದ ಮಾವುತರಿಗೆ, ಅಧಿಕಾರಿಗಳಿಗೆ ಮತ್ತು ಪಶುವೈದ್ಯರಿಗೆ ತರಬೇತಿ ನೀಡಲಾಗುವುದು. ಆ ಮೂಲಕ ಆಂಧ್ರಪ್ರದೇಶ ಆನೆ ಸೆರೆ ಕಾರ್ಯಾಚರಣೆಯಲ್ಲಿ ಸ್ವವಲಂಬಿಯಾಗಲು ಸಹಕರಿಸಲಾಗುವುದು ಎಂದರು.

ಕರ್ನಾಟಕವು ಅರಣ್ಯ ನಿರ್ವಹಣೆಯಲ್ಲಿ ಹಲವಾರು ಮಾಹಿತಿ ತಂತ್ರಜ್ಞಾನ -ಐಟಿ ಉಪಕ್ರಮಗಳನ್ನು ಪ್ರಾರಂಭಿಸಿದೆ, ಇದು ವನ್ಯಜೀವಿಗಳ ಮೇಲ್ವಿಚಾರಣೆ, ಕಾನೂನುಬಾಹಿರ ಚಟುವಟಿಕೆ ತಡೆಗೆ ಸಹಕಾರಿಯಾಗಿದ್ದು, ಒಟ್ಟಾರೆ ಅರಣ್ಯ ನಿರ್ವಹಣೆ ಆಡಳಿತವನ್ನು ಸುಧಾರಿಸುವಲ್ಲಿ ಪರಿಣಾಮಕಾರಿ ಎಂದು ಸಾಬೀತಾಗಿದೆ. ಇವುಗಳ ಬಲವರ್ಧನೆಗೆ ಎರಡೂ ರಾಜ್ಯಗಳು ಶ್ರಮಿಸಲಿವೆ ಎಂದರು.

ನಮ್ಮ ಎರಡೂ ರಾಜ್ಯಗಳ ನಡುವಿನ ಪಾಲುದಾರಿಕೆಯ ಮೂಲಕ, ಕರ್ನಾಟಕವು ಆಂಧ್ರಪ್ರದೇಶದೊಂದಿಗೆ ಸಹಕರಿಸಿ ಪರಿಸರ ಪ್ರವಾಸೋದ್ಯಮ ಉಪಕ್ರಮಗಳನ್ನು ಬಲಪಡಿಸುತ್ತದೆ, ಇದು ಜನರಿಗೆ ಪ್ರಯೋಜನವನ್ನು ನೀಡುವುದಲ್ಲದೆ ವನ್ಯಜೀವಿ ಸಂರಕ್ಷಣೆಯ ಪ್ರಾಮುಖ್ಯತೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವಿನ ಈ ಸಹಯೋಗವು ಇತರ ರಾಜ್ಯಗಳಿಗೆ ಮಾದರಿಯಾಗಲಿದೆ. ನೆರೆ ಹೊರೆ ರಾಜ್ಯಗಳ ನಡುವೆ ಸೌಹಾರ್ದತೆ, ಸಹಕಾರ, ಸಹಯೋಗ ಇದ್ದಲ್ಲಿ ಸಮಸ್ಯೆಗಳನ್ನು ಸುಲಭವಾಗಿ ಮತ್ತು ಸುಗಮವಾಗಿ ಪರಿಹರಿಸಬಹುದು ಎಂದು ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

Bheemanna-Naik

Sirsi: ಪಾಶ್ಚಾತ್ಯ ಅಡಿಕೆ ಆಮದು ನಿರ್ಬಂಧಕ್ಕೆ ಸಂಸದರು ಧ್ವನಿ ಎತ್ತಲಿ: ಶಾಸಕ ಭೀಮಣ್ಣ‌

1-jagga

Laddus row; ತಿರುಮಲ ದೇವಸ್ಥಾನ ದರ್ಶನ ರದ್ದು ಮಾಡಿದ ಜಗನ್ ರೆಡ್ಡಿ

BBK-11: ದಶಕದ ಹಿಂದೆಯೇ ಹಿಂದಿ ಬಿಗ್‌ ಬಾಸ್‌ನಲ್ಲಿತ್ತು ʼಸ್ವರ್ಗ ನರಕʼದ ಕಾನ್ಸೆಪ್ಟ್

BBK-11: ದಶಕದ ಹಿಂದೆಯೇ ಹಿಂದಿ ಬಿಗ್‌ ಬಾಸ್‌ನಲ್ಲಿತ್ತು ʼಸ್ವರ್ಗ ನರಕʼದ ಕಾನ್ಸೆಪ್ಟ್

1-mang-1

Mangaluru; ನಗರದ 9 ಅಂತಸ್ತಿನ ಹೊಟೇಲ್ ಕಟ್ಟಡದಲ್ಲಿ ಅಗ್ನಿ ಅವಘಡ

Udayavani.com ‘Nammane Krishna-2024’ Reels Contest Winners Awarded

Udayavani.com ‘ನಮ್ಮನೆ ಕೃಷ್ಣ -2024’ ರೀಲ್ಸ್‌ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

1-ramesha-jarki

BJP ಬಂಡಾಯ; ರಾಜುಗೌಡ ಕಥೆ ಕಟ್ಟಿ ಹೇಳಿದ್ದಾನೆ..: ರಮೇಶ್ ಜಾರಕಿಹೊಳಿ ಕಿಡಿ

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

“ಭಾರತ್‌ ಮಾತಾ ಕಿ ಜೈ” ಅಂತ ಘೋಷಣೆ ಕೂಗುವುದು ಅಪರಾಧವೇ? ಹೈಕೋರ್ಟ್‌ ಹೇಳಿದ್ದೇನು?

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

Dandeli: ಬಸ್ ನಿಲ್ದಾಣದಲ್ಲಿ ತಂಗಿರುವ ಒಂಟಿ ಮಹಿಳೆ… ವಾರಿಸುದಾರರ ಪತ್ತೆಗೆ ಮನವಿ

siddaramaiah

Lokayukta ತನಿಖೆ; ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲು:ಕುಟುಂಬಕ್ಕೂ ಸಂಕಷ್ಟ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-male

India vs Bangladesh 2 ನೇ ಟೆಸ್ಟ್ ಪಂದ್ಯದ ಮೊದಲ ದಿನ ಮಳೆ ಅಡ್ಡಿ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

POlice

Belthangady: ಅಕ್ರಮ ಕಸಾಯಿಖಾನೆಗೆ ದಾಳಿ: ಆರೋಪಿಗಳು ಪರಾರಿ

fraudd

Gangolli: ದೋಣಿಯ ಸೊತ್ತು ಮಾರಾಟ ಮಾಡಿ 22 ಲಕ್ಷ ರೂ. ವಂಚನೆ

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.