Mangaluru; ನಗರದ 9 ಅಂತಸ್ತಿನ ಹೊಟೇಲ್ ಕಟ್ಟಡದಲ್ಲಿ ಅಗ್ನಿ ಅವಘಡ
Team Udayavani, Sep 27, 2024, 7:17 PM IST
ಮಂಗಳೂರು: ನಗರದ ಎಂಜಿ ರಸ್ತೆಯ ಬಹುಅಂತಸ್ತಿನ ಹೊಟೇಲ್ವೊಂದರಲ್ಲಿ ಶುಕ್ರವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ.
9 ಅಂತಸ್ತುಗಳ ಈ ಹೊಟೇಲ್ ಕಟ್ಟಡದ ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡು ಚಿಮಿಣಿಯ ಮೂಲಕ ಮೇಲಕ್ಕೆ ಪಸರಿಸಿದೆ.
ಹೊಗೆ ಕಾಣಿಸಿಕೊಂಡ ಕೂಡಲೇ ಅಡುಗೆ ಕೋಣೆಯಲ್ಲಿದ್ದ ಸಿಬಂದಿ ಹೊರಗೆ ಬಂದಿದ್ದಾರೆ. ಅನಂತರ ಪಾಂಡೇಶ್ವರ ಅಗ್ನಿಶಾಮಕ ದಳದವರು ಬಂದು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದರು.
ದಟ್ಟ ಹೊಗೆ ಮತ್ತು ಬೆಂಕಿ ಕಟ್ಟಡದ ತುದಿಯಲ್ಲಿ ಕಾಣಿಸಿಕೊಂಡು ಅಕ್ಕಪಕ್ಕದ ಕಟ್ಟಡಗಳಲ್ಲಿದ್ದವರಲ್ಲಿಯೂ ಭೀತಿ ಮೂಡಿಸಿತು. ಆದರೆ ಅದೃಷ್ಟವಶಾತ್ ಬೆಂಕಿ ಪಕ್ಕದ ಕಟ್ಟಡಗಳಿಗೆ ವ್ಯಾಪಿಸಿಲ್ಲ. ಹೊಟೇಲ್ನಲ್ಲಿ ರೂಮ್ಗಳು ಕೂಡ ಇವೆ. ಬೆಂಕಿ ಚಿಮಿಣಿ ಪಕ್ಕದಲ್ಲಿ ಮಾತ್ರ ಕಾಣಿಸಿಕೊಂಡಿದ್ದು, ಇತರ ಕಡೆಗೆ ಪಸರಿಸಿಲ್ಲ. ಹಾಗಾಗಿ ಯಾರಿಗೂ ಅಪಾಯ ಉಂಟಾಗಿಲ್ಲ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್
Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ
Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
MSP; ಕರ್ನಾಟಕದಲ್ಲಿ ಕಾಂಗ್ರೆಸ್ ಎಷ್ಟು ಬೆಳೆಗಳಿಗೆ ಕೊಟ್ಟಿದೆ?: ಅಮಿತ್ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.