Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ
Team Udayavani, Sep 27, 2024, 8:51 PM IST
ಸಾಗರ: ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ವಿಪರೀತ ಮಂಗಗಳ ಹಾವಳಿಯಿಂದ ಬೇಸತ್ತು ಹೊಸಂತೆ ಗ್ರಾಮದ ಮಹಿಳೆಯರು ಗ್ರಾಮಸ್ಥರ ಜೊತೆಗೆ ಶುಕ್ರವಾರ ಹಿರೇಬಿಲಗುಂಜಿ ಗ್ರಾಮ ಪಂಚಾಯಿತಿ ಕಛೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯ್ತಿಗೆ ಗ್ರಾಮದಲ್ಲಿ ಮಂಗನ ಹಾವಳಿ ತಡೆಗಟ್ಟಲು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಮಂಗಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೆಲವು ದಿನಗಳಿಂದ ಮನೆಗಳಿಗೆ ನುಗ್ಗಿ ದಾಂಧಲೆ ನಡೆಸುತ್ತಿವೆ. ತರಕಾರಿ ಫಸಲುಗಳನ್ನೆಲ್ಲ ಹಾಳು ಮಾಡುತ್ತಿವೆ. ಅವುಗಳ ಹಾವಳಿಯಿಂದ ನೆಮ್ಮದಿಯ ಜೀವನವನ್ನು ನಡೆಸಲು ಸಾಧ್ಯವಿಲ್ಲ. ಮಂಗಗಳ ಉಪಟಳದಿಂದಾಗಿ ಗ್ರಾಮದಲ್ಲಿ ಸಮಸ್ಯೆ ಉಲ್ಬಣ ವಾಗುತ್ತದೆ. ಅವುಗಳನ್ನು ಹೊಡೆದೋಡಿಸಲು ಅನುಮತಿ ನೀಡಿ ಮಂಗಗಳನ್ನು ಸಾಯಿಸಲು ಬಂದೋಕು ಪರವಾನಿಗೆ ಕೊಡಿಸಿ ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸವಿತಾ ಮಂಜುನಾಥ್, ಶ್ವೇತಾ ರಾಯ್ಕರ್, ದಾಕ್ಷಾಯಿಣಿ, ಲತಾ, ಪುಷ್ಪಾ, ಶೈಲಜಾ, ಗೌರಮ್ಮ, ಪುಷ್ಪಾವತಿ, ಕಲ್ಪನಾ, ಅಕ್ಷತಾ, ಅಣ್ಣಪ್ಪ ಪೂಜಾರಿ ಇನ್ನಿತರರು ಇದ್ದರು.ಗ್ರಾಮಸ್ಥರ ಮನವಿ ಮೇರೆಗೆ ಗ್ರಾಮದಲ್ಲಿ ಮಂಗನ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆಗೆ ಪತ್ರ ಬರೆಯಲಾಗಿದೆ. ಪಂಚಾಯ್ತಿ ವತಿಯಿಂದ ಮಂಗಗಳ ಹಾವಳಿ ತಡೆಗಟ್ಟಲು ಸಾಧ್ಯವಿಲ್ಲ.
ಸಂಬಂಧಪಟ್ಟ ಇಲಾಖೆಯವರು ಕ್ರಮ ಕೈಗೊಳ್ಳಬೇಕು. ನಮಗೆ ಯಾವುದೇ ಪ್ರಾಣಿಗಳನ್ನು ಹಿಡಿದು ಬೇರೆ ಕಡೆ ಸಾಗಿಸಲು ಅವಕಾಶ ಇಲ್ಲ ಎಂದು ಹಿರೇಬಿಲಗುಂಜಿ ಪಿಡಿಓ ಶೇಖರಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura:ಮೆಟ್ರಿಕ್ ಪೂರ್ವ ಬಾಲಕಿಯ ವಿದ್ಯಾರ್ಥಿನಿಲಯಕ್ಕೆ ಶಿವಮೊಗ್ಗ ಸಿ.ಎಸ್ ದಿಢೀರ್ ಭೇಟಿ
Thirthahalli: ಸಿಬಿಐ ಬರಬಾರದು ಎಂದು ಬೇಲಿ ಹಾಕಿದ್ದು ಯಾಕೆ: ಆರಗ ಪ್ರಶ್ನೆ
Thirthahalli: ಹಣ ಇಟ್ಟು ಇಸ್ಪೀಟ್ ಆಡುತ್ತಿದ್ದವರ ಬಂಧನ!
Muda case: ‘ಕಾನೂನಿಗಿಂತ ಯಾರು ದೊಡ್ಡವರಲ್ಲ….’: ಸಿಎಂ ವಿಚಾರದಲ್ಲಿ ಸೋಮಣ್ಣ ಹೇಳಿಕೆ
Shimoga; ಶಿಕಾರಿಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್
Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ
Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ
Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫಲ ಬಿಡಬಹುದು
MSP; ಕರ್ನಾಟಕದಲ್ಲಿ ಕಾಂಗ್ರೆಸ್ ಎಷ್ಟು ಬೆಳೆಗಳಿಗೆ ಕೊಟ್ಟಿದೆ?: ಅಮಿತ್ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.