Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

ಮುಖ್ಯಮಂತ್ರಿಯವರಿಂದ ಸೆ.30ರಂದು ಮಹಾರಾಷ್ಟ್ರದ ಗುಡ್ಡಾಪುರದಲ್ಲಿ ಪ್ರಶಸ್ತಿ ಪ್ರದಾನ, ಪ್ರಾಧಿಕಾರದ ಲಾಂಛನ ಬಿಡುಗಡೆ: ಸೋಮಣ್ಣ ಬೇವಿನಮರದ

Team Udayavani, Sep 27, 2024, 8:32 PM IST

Gadinadu-Award

ವಿಜಯಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಕೊಡಮಾಡುವ 2023-24ನೇ ಮತ್ತು 2024- 25ನೇ ಸಾಲಿನ ” ಗಡಿನಾಡ ಚೇತನ” ಪ್ರಶಸ್ತಿಯನ್ನು ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಶುಕ್ರವಾರ ಪ್ರಕಟಿಸಿದರು.

ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರಡಲ್ಲಿ ಸೆ.30ರಂದು ಕರ್ನಾಟಕ ಸಂಭ್ರಮ-50 ಕಾರ್ಯಕ್ರಮ ಮತ್ತು ಹೊರನಾಡ ಗಡಿ ಕನ್ನಡಿಗರ ಸಮಾವೇಶದಲ್ಲಿ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಲಿದ್ದಾರೆ ಎಂದು ತಿಳಿಸಿದರು. ಕರ್ನಾಟಕ ಸಂಭ್ರಮ-50ರ ಆಚರಣೆ ನಿಮಿತ್ತ ಈಗಾಗಲೇ ರಾಯಚೂರು, ಮಂಗಳೂರು ಸೇರಿ ಮೂರು ಕಡೆಗಳಲ್ಲಿ ಕಾರ್ಯಕ್ರಮ ಮುಗಿದಿದೆ. ಕೊನೆಯ ಕಾರ್ಯಕ್ರಮ ಗುಡ್ಡಾಪುರದಲ್ಲಿ ಸಂಘಟಿಸಲಾಗಿದೆ ಎಂದರು.

ಹೊರರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಕಾರ್ಯಕ್ರಮ ಇದು. ಅಂದು ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಗಳಿಗೆ ಕನ್ನಡ  ನಲಿ-ಕಲಿ ಕಲಿಕಾ ಸಾಮಗ್ರಿಗಳ ವಿತರಣೆ ಮತ್ತು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಲಾಂಛನ ಬಿಡುಗಡೆ ಮಾಡಲಾಗುವುದು. ಸಿಎಂ ಸಿದ್ದರಾಮಯ್ಯ ಸಮಾರಂಭ ಉದ್ಘಾಟಿಸುವರು. ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗವಹಿಸುವ ನಿರೀಕ್ಷೆ ಇದೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರಶಸ್ತಿ ಪುರಸ್ಕೃತರು:
ಎರಡು ವರ್ಷಗಳ ಪ್ರಶಸ್ತಿಗಳಿಗೆ ಕನ್ನಡಕ್ಕಾಗಿ ಶ್ರಮಿಸುತ್ತಿರುವ ಗಡಿ ಮತ್ತು ಹೊರಭಾಗದ ಸಾಧಕರು ಹಾಗೂ ಸಂಸ್ಥೆಗಳನ್ನು ಡಾ.ಬರಗೂರು ರಾಮಚಂದ್ರಪ್ಪ ಅಧ್ಯಕ್ಷತೆಯ ಸಮಿತಿ ಆಯ್ಕೆ ಮಾಡಿದೆ. ಹಲ್ಮಿಡಿ ಶಾಸನದ ಸ್ಮರಣಿಕೆ, ಪ್ರಮಾಣಪತ್ರ ಮತ್ತು 1 ಲಕ್ಷ ರೂ. ನಗದು ಬಹುಮಾನ ಪ್ರಶಸ್ತಿ ಒಳಗೊಂಡಿದೆ.

2023-24ನೇ ಸಾಲಿನ ಡಾ.ಚನ್ನಬಸವ ಪಟ್ಟದ್ದೇವರು ಹೆಸರಿನ ಗಡಿನಾಡ ಚೇತನ ಪ್ರಶಸ್ತಿಗೆ ಕೇರಳದ ಕಾಸರಗೋಡಿನ ಹಿರಿಯ ಕವಿ, ಪತ್ರಕರ್ತ ರಾಧಾಕೃಷ್ಣ ಕೆ. ಉಳಿಯತ್ತಡ್ಕ, ಡಾ.ಜಯದೇವಿ ತಾಯಿ ಲಿಗಾಡೆ ಹೆಸರಿನ ಪ್ರಶಸ್ತಿಗೆ ಬೀದರ್‌ನ ಪಂಚಾಕ್ಷರಿ ಪುಣ್ಯಶೆಟ್ಟಿ, ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಹೆಸರಿನ ಪ್ರಶಸ್ತಿಗೆ ಬೆಳಗಾವಿಯ ಬಿ.ಎಸ್.ಗವಿಮಠ ಭಜನರಾಗಿದ್ದಾರೆ ಎಂದು ವಿವರಿಸಿದರು.

2024-25ನೇ ಸಾಲಿನ ಗಡಿನಾಡು ಚೇತನ ಪ್ರಶಸ್ತಿಗಳಿಗೆ ಹೊರರಾಜ್ಯದ ನಾಲ್ಕು ಸಂಸ್ಥೆಗಳ ಆಯ್ಕೆ ಮಾಡಲಾಗಿದೆ. ಡಾ.ಚನ್ನಬಸವ ಪಟ್ಟದ್ದೇವರು ಹೆಸರಿನ ಪ್ರಶಸ್ತಿಗೆ ಗುಜರಾತ್ ರಾಜ್ಯದ ಅಹ್ಮದಾಬಾದ್‌ನ ಕನ್ನಡ ಸಂಘ, ಡಾ.ಜಯದೇವಿ ತಾಯಿ ಲಿಗಾಡೆ ಹೆಸರಿನ ಪ್ರಶಸ್ತಿಗೆ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಶಿವಲಿಂಗೇಶ್ವರ ಶಿಕ್ಷಣ ಸಂಸ್ಥೆ ಮತ್ತು ಸರ್ವೋದಯ ಶಿಕ್ಷಣ ಸಂಸ್ಥೆ ಹಾಗೂ ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ  ರೈ ಹೆಸರಿನ ಪ್ರಶಸ್ತಿಗೆ ಕೇರಳದ ಕಾಸರಗೋಡಿನ ಪೆರಡಾಲದ ಮಹಾಜನ ವಿದ್ಯಾಭಿವರ್ಧಕ ಸಂಘವನ್ನು ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ

Parameshwar

Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

Exam-Authotiy

Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ

congress

Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Amit Shah 2

MSP; ಕರ್ನಾಟಕದಲ್ಲಿ ಕಾಂಗ್ರೆಸ್‌ ಎಷ್ಟು ಬೆಳೆಗಳಿಗೆ ಕೊಟ್ಟಿದೆ?: ಅಮಿತ್‌ ಶಾ

delhi air

Air pollution: ಗಾಳಿ ಗುಣಮಟ್ಟ ಆಯೋಗಕ್ಕೆ ಸುಪ್ರೀಂಕೋರ್ಟ್‌ ತರಾಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ

Parameshwar

Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

Exam-Authotiy

Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ

Mysore-Sidda

MUDA Case: ನ್ಯಾಯ ನನ್ನ ಪರವಿದೆ, ರಾಜಕೀಯ ಪ್ರೇರಿತ ಕೇಸ್‌ ಎದುರಿಸಿ ಗೆಲ್ಲುವೆ: ಸಿಎಂ

HDK (3)

Lokayukta ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದ ಎಚ್ ಡಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kodihalli

Electrical system: ಕೃಷಿ ಪಂಪ್‌ಸೆಟ್‌-ಆಧಾರ್‌ ಜೋಡಣೆ ಕೂಡಲೇ ಕೈಬಿಡಲಿ: ಕೋಡಿಹಳ್ಳಿ ಆಗ್ರಹ

Parameshwar

Government: ನ್ಯಾಯಾಧೀಶರೂ ಧರ್ಮ ಪಾಲಿಸಲಿ: ಗೃಹ ಸಚಿವ ಡಾ. ಜಿ. ಪರಮೇಶ್ವರ್‌

Exam-Authotiy

Recruitment Of Posts: ನಾಳೆ ಗ್ರಾಮಾ ಆಡಳಿತ ಅಧಿಕಾರಿ ನೇಮಕಕ್ಕೆ ಕನ್ನಡ ಕಡ್ಡಾಯ ಪರೀಕ್ಷೆ

congress

Congress ಪಕ್ಷ ವಿರೋಧಿ ಚಟುವಟಿಕೆ: ಹರಿಯಾಣದಲ್ಲಿ 13 ನಾಯಕರ ಉಚ್ಚಾಟನೆ

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Udupi: ಗೀತಾರ್ಥ ಚಿಂತನೆ-48: ಕರ್ಮ ಬಿಡುವಂತಿಲ್ಲ, ಫ‌ಲ ಬಿಡಬಹುದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.