illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

ಅಕ್ರಮ ಮರಳುಗಾರಿಕೆ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನ ಸಭೆ

Team Udayavani, Sep 27, 2024, 10:39 PM IST

illegal sand mining: ಉಳಿಯ ದ್ವೀಪ ಉಳಿಸಲು ಪಾದಯಾತ್ರೆ

ಮಂಗಳೂರು: ಉಳ್ಳಾಲ ತಾಲೂಕಿಗೆ ಒಳಪಟ್ಟ ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಯಿಂದ ಜೀವನ ನಡೆಸಲು ಸಾಧ್ಯವಾಗು ತ್ತಿಲ್ಲ ಎಂದು ಆರೋಪಿಸಿ ಕೆಥೋಲಿಕ್‌ ಸಭಾ ಮಂಗಳೂರು ಪ್ರದೇಶ ಘಟಕ ನೇತೃತ್ವದಲ್ಲಿ ಶುಕ್ರವಾರ ಪಾದಯಾತ್ರೆ- ಪ್ರತಿಭಟನ ಸಭೆ ಮಂಗಳೂರಿನಲ್ಲಿ ನಡೆಯಿತು.

ಬಲ್ಮಠ ವೃತ್ತದಿಂದ ಆರಂಭಗೊಂಡ ಪಾದ ಯಾತ್ರೆ ಮಿನಿ ವಿಧಾನ ಸೌಧದ ಎದುರು ಸಮಾಪನಗೊಂಡು ಸಭೆ ನಡೆಯಿತು. ದ್ವೀಪ ನಿವಾಸಿಗಳು, ವಿವಿಧ ಸಂಘಟನೆಗಳ ಪ್ರಮುಖರು ಸಹಿತ ಸಾವಿರಾರು ಮಂದಿ ಭಾಗಿಯಾದರು.

ಕೆಥೋಲಿಕ್‌ ಸಭಾದ ಮಾಜಿ ಅಧ್ಯಕ್ಷ ಪಾವ್ಲ್ ರೋಲ್ಫಿ ಡಿ’ ಕೋಸ್ತ ಮಾತನಾಡಿ, ಕೂಲಿ ಕೆಲಸಕ್ಕೆ ಹೋಗದಿದ್ದರೆ ದಿನದೂ ಡಲು ಸಾಧ್ಯವಾಗದ ಪರಿಸ್ಥಿತಿಯಲ್ಲಿರುವ ದ್ವೀಪ ನಿವಾಸಿಗಳಿಗೆ ಮರಳು ದಂಧೆ ನಡೆಸುವವರಿಂದ ಜೀವನವೇ ದುಸ್ತರ ವಾಗಿದೆ. ಜಿಲ್ಲಾಡಳಿತ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಲವು ಬಾರಿ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಪಾವೂರು ಉಳಿಯ, ರಾಣಿಪುರ, ಉಳ್ಳಾಲ ಹೊಯಿಗೆ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿದ್ದು, ರಾಣಿಪುರ ಉಳಿಯದಲ್ಲಿ ಮನೆಗಳು ಅಪಾಯದಲ್ಲಿವೆ ಎಂದರು.

ಡಿವೈಎಫ್ಐನ ಮಾಜಿ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ ಮಾತನಾಡಿ, ಅಕ್ರಮ ಮರಳುಗಾರರ ಜತೆಗೆ ಒಟ್ಟು ವ್ಯವಸ್ಥೆ ಶಾಮೀಲಾದ ಕಾರಣದಿಂದ ಇದು ಅವ್ಯಾಹತವಾಗಿ ನಡೆಯುತ್ತಿದೆ. ಇದು ನಿಲ್ಲದಿದ್ದರೆ ಉಳ್ಳಾಲ, ಕೊಣಾಜೆ ಹಾಗೂ ವಾಮಂಜೂರು ಠಾಣೆ ಮುಂಭಾಗ ದ್ವೀಪ ನಿವಾಸಿಗಳ ಜತೆಗೆ ಪ್ರತಿಭಟಿಸಲಾಗುವುದು ಎಂದರು.

ಮಂಗಳೂರು ಕ್ರೈಸ್ತ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ರಾಯ್‌ ಕ್ಯಾಸ್ತಲಿನೋ ಮಾತನಾಡಿ, ಅಕ್ರಮ ಮರಳುಗಾರಿಕೆ ವಿರುದ್ಧ ಹೋರಾಟ ನಿರಂತರವಾಗಿ ನಡೆಯಲಿದೆ ಎಂದು ಹೇಳಿದರು.

ಸಭೆಯಲ್ಲಿ ಧರ್ಮಗುರುಗಳು, ಧರ್ಮಭಗಿನಿಯರು, ವಲಯ ಅಧ್ಯಕ್ಷರು ಭಾಗವಹಿಸಿದ್ದರು. ಕೆಥೋಲಿಕ್‌ ಸಭಾದ ಅಧ್ಯಕ್ಷ ಆಲ್ವಿನ್‌ ಡಿ’ಸೋಜಾ, ಮದರ್‌ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್‌ ಕುಮಾರ್‌ ಬಜಾಲ್‌, ಸಭಾದ ನಿಕಟಪೂರ್ವ ಅಧ್ಯಕ್ಷ ಸ್ಟಾನಿ ಲೋಬೋ, ಸ್ಥಳೀಯರ ಪರವಾಗಿ ಗಿಲ್ಬರ್ಟ್‌ ಡಿ’ಸೋಜಾ ಮಾತನಾಡಿದರು.

ಪ್ರಮುಖರಾದ ಸದಾಶಿವ ಉಳ್ಳಾಲ್‌, ಫಾ|ಜೆ.ಬಿ.ಸಲ್ದಾನ, ಆಲ್ವಿನ್‌ ಮೊಂತೇರೊ, ಮಂಜುಳಾ ನಾಯಕ್‌, ಸಂತೋಷ್‌ ಡಿ’ ಸೋಜಾ, ಯಾದವ ಶೆಟ್ಟಿ, ಶಶಿಧರ ಶೆಟ್ಟಿ, ಬಿ.ಕೆ.ಇಮಿ¤ಯಾಜ್‌, ಜೀತ್‌ ಮಿಲನ್‌, ಎಲ್‌.ಜೆ. ಫೆರ್ನಾಂಡಿಸ್‌, ಜೆರಾಲ್ಡ್‌ ಡಿ’ ಕೋಸ್ತ ಮೊದಲಾದವರು ಹಾಜರಿದ್ದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.